Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರನ್ನೇ ಬಕ್ರಾ ಮಾಡಿದ್ರಾ ವಿನಯ್-ರಜತ್? ಫೈಬರ್ ಮಚ್ಚಿನ ಮೇಲೆ ಅನುಮಾನ

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಅವರು ಮಚ್ಚಿನೊಂದಿಗೆ ರೀಲ್ಸ್ ಮಾಡಿದ್ದಕ್ಕಾಗಿ ಅರೆಸ್ಟ್ ಆಗಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಮಚ್ಚು ರಬ್ಬರ್​ನಿಂದ ಮಾಡಿರುವುದು ಎಂದು ತಿಳಿದು ಬಂದಿದೆ. ಆದರೆ, ರೀಲ್ಸ್‌ನಲ್ಲಿರುವ ಮಚ್ಚು ನಿಜವಾದ ಮಚ್ಚಿನಂತೆ ಕಾಣುತ್ತದೆ ಎಂಬುದು ಪೊಲೀಸರ ಅನುಮಾನ.

ಪೊಲೀಸರನ್ನೇ ಬಕ್ರಾ ಮಾಡಿದ್ರಾ ವಿನಯ್-ರಜತ್? ಫೈಬರ್ ಮಚ್ಚಿನ ಮೇಲೆ ಅನುಮಾನ
ವಿನಯ್ - ರಜತ್
Follow us
Jagadisha B
| Updated By: ರಾಜೇಶ್ ದುಗ್ಗುಮನೆ

Updated on:Mar 25, 2025 | 11:45 AM

ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ (Vinay Gowda) ಹಾಗೂ ರಜತ್ ಅವರು ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇವರನ್ನು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಅರೆಸ್ಟ್ ಮಾಡಲಾಗಿತ್ತು. ರಜತ್ ಹಾಗೂ ವಿನಯ್ ಪೊಲೀಸರಿಗೆ ಮಚ್ಚನ್ನು ನೀಡಿದ್ದು, ಇದು ರಬ್ಬರ್ ಮಚ್ಚು ಎಂಬುದು ತಿಳಿದು ಬಂದಿದೆ. ಆದರೆ, ಈಗ ಪೊಲೀಸರಿಗೆ ಈ ಬಗ್ಗೆ ಅನುಮಾನ ಬಂದಿದೆ. ವಿಡಿಯೋದಲ್ಲಿರುವ ಮಚ್ಚಿಗೂ, ಈ ಮಚ್ಚಿಗೂ ವ್ಯತ್ಯಾಸ ಕಂಡು ಬಂದಿದೆ ಎನ್ನಲಾಗಿದೆ. ಹೀಗಾಗಿ, ಇವರು ಪೊಲೀಸರನ್ನೇ ಬಕ್ರಾ ಮಾಡಿದರೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ರಜತ್ ಹಾಗೂ ವಿನಯ್ ಇತ್ತೀಚೆಗೆ ಲಾಂಗ್ ತೋರಿಸಿ ರೀಲ್ಸ್ ಮಾಡಿದ್ದರು. ಆ ಬಳಿಕ ಅವರನ್ನು ಬಂಧಿಸಲಾಯಿತು. ರಾತ್ರಿ ವೇಳೆಗೆ ಸ್ಟೇಷನ್ ಬೇಲ್ ನೀಡಿ ಅವರನ್ನು ಬಿಡುಗಡೆ ಮಾಡಲಾಗಿದೆ. ಈಗ ವಿಚಾರಣೆ ವೇಳೆ ಸಲ್ಲಿಕೆಯಾದ ಫೈಬರ್ ಮಚ್ಚಿನ ಮೇಲೆ ಅನುಮಾನ ಮೂಡಿದೆ. ಹೀಗಾಗಿ ವಿಡಿಯೋ ಮತ್ತು ವಶಕ್ಕೆ ಪಡೆದಿದ್ದ ಫೈಬರ್ ಮಚ್ಚಿನ ತಾಳೆ ನಡೆಯಲಿದೆ. ವಿಡಿಯೋದಲ್ಲಿ ಬಳಕೆಯಾದ ಮಚ್ಚು ಒರಿಜಿನಲ್ ಮಚ್ಚಿನ ರೀತಿಯೇ ಕಾಣಿಸುತ್ತಿದೆ. ಕೇಸ್​ನಿಂದ ತಪ್ಪಿಸಿಕೊಳ್ಳಲು ರಜತ್, ವಿನಯ್ ಫೈಬರ್ ಮಚ್ಚು ತಂದು ಕೊಟ್ರಾ ಎಂಬ ಅನುಮಾನ ಮೂಡಿದೆ.

ಇದನ್ನೂ ಓದಿ
Image
ಯಶ್​ನ ಪ್ರೀತಿಸುತ್ತಿದ್ದ ವಿಚಾರವನ್ನು ಈ ನಟಿಯರ ಬಳಿ ಹೇಳಿಕೊಂಡಿದ್ದ ರಾಧಿಕಾ
Image
ಪಿವಿಆರ್​ನಲ್ಲಿ ಸಿನಿಮಾ ಮಾತ್ರವಲ್ಲ, ಪ್ರದರ್ಶನ ಆಗಲಿದೆ ಐಪಿಎಲ್ ಮ್ಯಾಚ್
Image
ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?
Image
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
View this post on Instagram

A post shared by Rajath kishan G (@bujjjjii)

ಪೊಲೀಸರ ಪ್ರಶ್ನೆಗೆ ಉತ್ತರ

ಬೆಂಗಳೂರಿನ ಬಸವೇಶ್ವರ ನಗರದ ಸಬ್​ ಇನ್​ಸ್ಪೆಕ್ಟರ್ ಅವರಿಂದ ಹಲವು ಗಂಟೆಗಳ ಕಾಲ ವಿನಯ್ ಹಾಗೂ ರಜತ್ ಅವರ ವಿಚಾರಣೆ ನಡೆದಿದೆ. ಲಾಂಗ್ ಬಳಸಿ ರೀಲ್ಸ್ ಸಂಬಂಧಿಸಿದಂತೆ ಪ್ರಶ್ನೆ ಮಾಡಲಾಗಿದೆ. ಸಮಾಜಕ್ಕೆ ಯಾವ ಸಂದೇಶ ನೀಡಲು ಈ ರೀತಿ ಮಾಡಿದ್ದಾಗಿ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿರೋ ವಿನಯ್ ಹಾಗೂ ರಜತ್, ‘ರಿಯಾಲಿಟಿ ಶೋ ಸಲುವಾಗಿ ರೀಲ್ಸ್ ಮಾಡಿದ್ದಾಗಿ’ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಬಿಡುಗಡೆ ಆದ ವಿನಯ್​, ರಜತ್​; ಮಾರ್ಮಿಕ ಪೋಸ್ಟ್ ಹಾಕಿದ ಬಿಗ್ ಬಾಸ್ ‘ಆನೆ’

‘ನಾಗರಬಾವಿಯ ಅಕ್ಷಯ ಸ್ಟೂಡಿಯೋದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಕಾರ್ಯಕ್ರಮದಲ್ಲಿ ವಿನಯ್ ‘ಪುಷ್ಪ’ ಪಾತ್ರ ಹಾಗೂ ರಜತ್ ‘ದರ್ಶನ್’ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅದರ ಪ್ರಮೋಷನ್ ಸಲುವಾಗಿ ರೀಲ್ಸ್ ಮಾಡಿ ಅಪ್ಲೋಡ್ ಮಾಡಿದ್ದೆವು’ ಎಂದು ಅವರು ಜಂಟಿ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:21 am, Tue, 25 March 25

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ