AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Day 2: ನಿಧಿ ಸುಬ್ಬಯ್ಯ ಮನೆ ಒಳಗೆ ಮಾಲೆ ಪಟಾಕಿ ಎಸೆದಿದ್ರಂತೆ ಯಶ್​! ಬಿಗ್​ ಬಾಸ್​ ಮನೆಯಲ್ಲಿ ಹೊರ ಬಿತ್ತು ಅಚ್ಚರಿ ವಿಚಾರ

ನಾನು ಅಜ್ಜಿಮನೆಯಲ್ಲಿ ಉಳಿದುಕೊಳ್ಳುತ್ತಿದೆ. ಆ ಮನೆ ಬಳಿ ಅಂದು 4 ಬೈಕ್​ನಲ್ಲಿ 8 ಜನರು ಬಂದಿದ್ದರು. ನಾನು ಮಲಗುವ ಕೋಣೆ ಎಂದುಕೊಂಡು ಮಾಲೆ ಪಟಾಕಿಗೆ ಬೆಂಕಿ ಹಚ್ಚಿ ಎಸೆದಿದ್ದರು.

Bigg Boss Day 2: ನಿಧಿ ಸುಬ್ಬಯ್ಯ ಮನೆ ಒಳಗೆ ಮಾಲೆ ಪಟಾಕಿ ಎಸೆದಿದ್ರಂತೆ ಯಶ್​! ಬಿಗ್​ ಬಾಸ್​ ಮನೆಯಲ್ಲಿ ಹೊರ ಬಿತ್ತು ಅಚ್ಚರಿ ವಿಚಾರ
ಯಶ್​ ಮತ್ತು ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on:Mar 02, 2021 | 10:10 PM

Share

ಕೆಜೆಎಫ್​ ಸಿನಿಮಾ ತೆರೆಕಂಡ ನಂತರ ಯಶ್​ ಕೇವಲ ಸ್ಯಾಂಡಲ್​ವುಡ್​ ಸ್ಟಾರ್​ ಆಗಿ ಮಾತ್ರ ಉಳಿದಿಲ್ಲ. ಸ್ಯಾಂಡಲ್​ವುಡ್​ ಮಾತ್ರವಲ್ಲದೆ, ಟಾಲಿವುಡ್​, ಬಾಲಿವುಡ್​ನಲ್ಲಿ ಯಶ್​ ಅವರದ್ದೇ ಹವಾ. ಯಶ್​ ಧಾರಾವಾಹಿ ಮೂಲಕ ಸಿನಿಮಾಗೆ ಬಂದಿದ್ದರು. ಇದಕ್ಕೂ ಮೊದಲು ಯಶ್​ ಸಾಮಾನ್ಯ ವ್ಯಕ್ತಿಯಾಗಿದ್ದರು. ಅಚ್ಚರಿ ಎಂದರೆ, ನಿಧಿ ಸುಬ್ಬಯ್ಯ ಮನೆ ಒಳಗೆ ಯಶ್​ ಮಾಲೆ ಪಟಾಕಿ (ಸರ ಪಟಾಕಿ) ಎಸೆದಿದ್ದರಂತೆ!

ಈ ಅಚ್ಚರಿಯ ವಿಚಾರವನ್ನು ನಿಧಿ ಸುಬ್ಬಯ್ಯ ಬಿಗ್​ ಬಾಸ್​ ಮನೆಯಲ್ಲಿ ಹೊರ ಹಾಕಿದ್ದಾರೆ. ಬಿಗ್​ ಬಾಸ್​ 8ರ ಎರಡನೇ ದಿನದ ರಾತ್ರಿ ನಿಧಿ ಮಾತನಾಡುತ್ತಾ, ನಾನೂ ಮೈಸೂರಲ್ಲಿ ಕಾಲೇಜು ಓದುತ್ತಿದ್ದ ದಿನಗಳು. ರೋಸ್​ ಡೇ ದಿನ ನನಗೆ 50-60 ರೋಸ್​ಗಳು ಬರುತ್ತಿದ್ದವು. ನಾನು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದೆ. ಆದರೆ, ಒಂದು ದಿನ ನನ್ನ ಬಗ್ಗೆ ಯಾರು ಏನು ಅಂದ್ರೋ ಏನೋ ಒಂದು ಅವಘಡ ನಡೆದು ಹೋಗಿತ್ತು.

ನಾನು ಅಜ್ಜಿಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇವಳಿಗೆ ಪಾಠ ಕಲಿಸಬೇಕು ಎನ್ನುವ ಕಾರಣಕ್ಕೆ ಯಾರೋ ನನ್ನ ಬಗ್ಗೆ ಪಿಟ್ಟಿಂಗ್​ ಇಟ್ಟಿದ್ದರು ಅನಿಸುತ್ತದೆ. ಅಜ್ಜಿ ಮನೆ ಬಳಿ ಅಂದು 4 ಬೈಕ್​ನಲ್ಲಿ 8 ಜನರು ಬಂದಿದ್ದರು. ನಾನು ಮಲಗುವ ಕೋಣೆ ಎಂದುಕೊಂಡು ಮಾಲೆ ಪಟಾಕಿಯನ್ನು ಹಚ್ಚಿ ಎಸೆದಿದ್ದರು. ಆದರೆ, ಅದು ಅಜ್ಜಿಯ ಕೋಣೆ ಆಗಿತ್ತು. ಅಜ್ಜಿ ಕೋಣೆಯ ಕರ್ಟನ್​ ಎಲ್ಲವೂ ಸುಟ್ಟಿ ಹೋಗಿತ್ತು. ಆದರೆ, ಪಟಾಕೆ ಎಸೆದವರು ಯಾರು ಎನ್ನುವುದು ಗೊತ್ತೇ ಆಗಿರಲಿಲ್ಲ ಎಂದರು ನಿಧಿ.

ಓದು ಮುಗಿದ ಮೇಲೆ ನಾನು ನಟನೆಗೆ ಬಂದೆ. ಒಂದು ದಿನ ಒಂದು ವ್ಯಕ್ತಿ ಬಂದು ನಿನ್ನ ಬಳಿ ಕ್ಷಮೆ ಕೇಳಬೇಕು ಎಂದರು. ನಾನು ಅಚ್ಚರಿಗೊಂಡೆ. ಏಕೆ ಕ್ಷಮೆ ಎಂದು ಕೇಳಿದೆ. ಅವರು, ಮಾಲೆ ಪಟಾಕಿ ಘಟನೆ ಹೇಳಿದರು. ಅವರು ಬೇರಾರೂ ಅಲ್ಲ. ಯಶ್​ ಎಂದು ನಿಧಿ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: Nidhi Subbaiah Profile: ಕನ್ನಡ ಬಿಗ್​ ಬಾಸ್​ ಮನೆಗೆ ಪಂಚರಂಗಿ ಬೆಡಗಿ ನಿಧಿ ಸುಬ್ಬಯ್ಯ

Published On - 10:01 pm, Tue, 2 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ