Bigg Boss Day 2: ನಿಧಿ ಸುಬ್ಬಯ್ಯ ಮನೆ ಒಳಗೆ ಮಾಲೆ ಪಟಾಕಿ ಎಸೆದಿದ್ರಂತೆ ಯಶ್​! ಬಿಗ್​ ಬಾಸ್​ ಮನೆಯಲ್ಲಿ ಹೊರ ಬಿತ್ತು ಅಚ್ಚರಿ ವಿಚಾರ

ನಾನು ಅಜ್ಜಿಮನೆಯಲ್ಲಿ ಉಳಿದುಕೊಳ್ಳುತ್ತಿದೆ. ಆ ಮನೆ ಬಳಿ ಅಂದು 4 ಬೈಕ್​ನಲ್ಲಿ 8 ಜನರು ಬಂದಿದ್ದರು. ನಾನು ಮಲಗುವ ಕೋಣೆ ಎಂದುಕೊಂಡು ಮಾಲೆ ಪಟಾಕಿಗೆ ಬೆಂಕಿ ಹಚ್ಚಿ ಎಸೆದಿದ್ದರು.

Bigg Boss Day 2: ನಿಧಿ ಸುಬ್ಬಯ್ಯ ಮನೆ ಒಳಗೆ ಮಾಲೆ ಪಟಾಕಿ ಎಸೆದಿದ್ರಂತೆ ಯಶ್​! ಬಿಗ್​ ಬಾಸ್​ ಮನೆಯಲ್ಲಿ ಹೊರ ಬಿತ್ತು ಅಚ್ಚರಿ ವಿಚಾರ
ಯಶ್​ ಮತ್ತು ನಿಧಿ ಸುಬ್ಬಯ್ಯ
Follow us
|

Updated on:Mar 02, 2021 | 10:10 PM

ಕೆಜೆಎಫ್​ ಸಿನಿಮಾ ತೆರೆಕಂಡ ನಂತರ ಯಶ್​ ಕೇವಲ ಸ್ಯಾಂಡಲ್​ವುಡ್​ ಸ್ಟಾರ್​ ಆಗಿ ಮಾತ್ರ ಉಳಿದಿಲ್ಲ. ಸ್ಯಾಂಡಲ್​ವುಡ್​ ಮಾತ್ರವಲ್ಲದೆ, ಟಾಲಿವುಡ್​, ಬಾಲಿವುಡ್​ನಲ್ಲಿ ಯಶ್​ ಅವರದ್ದೇ ಹವಾ. ಯಶ್​ ಧಾರಾವಾಹಿ ಮೂಲಕ ಸಿನಿಮಾಗೆ ಬಂದಿದ್ದರು. ಇದಕ್ಕೂ ಮೊದಲು ಯಶ್​ ಸಾಮಾನ್ಯ ವ್ಯಕ್ತಿಯಾಗಿದ್ದರು. ಅಚ್ಚರಿ ಎಂದರೆ, ನಿಧಿ ಸುಬ್ಬಯ್ಯ ಮನೆ ಒಳಗೆ ಯಶ್​ ಮಾಲೆ ಪಟಾಕಿ (ಸರ ಪಟಾಕಿ) ಎಸೆದಿದ್ದರಂತೆ!

ಈ ಅಚ್ಚರಿಯ ವಿಚಾರವನ್ನು ನಿಧಿ ಸುಬ್ಬಯ್ಯ ಬಿಗ್​ ಬಾಸ್​ ಮನೆಯಲ್ಲಿ ಹೊರ ಹಾಕಿದ್ದಾರೆ. ಬಿಗ್​ ಬಾಸ್​ 8ರ ಎರಡನೇ ದಿನದ ರಾತ್ರಿ ನಿಧಿ ಮಾತನಾಡುತ್ತಾ, ನಾನೂ ಮೈಸೂರಲ್ಲಿ ಕಾಲೇಜು ಓದುತ್ತಿದ್ದ ದಿನಗಳು. ರೋಸ್​ ಡೇ ದಿನ ನನಗೆ 50-60 ರೋಸ್​ಗಳು ಬರುತ್ತಿದ್ದವು. ನಾನು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದೆ. ಆದರೆ, ಒಂದು ದಿನ ನನ್ನ ಬಗ್ಗೆ ಯಾರು ಏನು ಅಂದ್ರೋ ಏನೋ ಒಂದು ಅವಘಡ ನಡೆದು ಹೋಗಿತ್ತು.

ನಾನು ಅಜ್ಜಿಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇವಳಿಗೆ ಪಾಠ ಕಲಿಸಬೇಕು ಎನ್ನುವ ಕಾರಣಕ್ಕೆ ಯಾರೋ ನನ್ನ ಬಗ್ಗೆ ಪಿಟ್ಟಿಂಗ್​ ಇಟ್ಟಿದ್ದರು ಅನಿಸುತ್ತದೆ. ಅಜ್ಜಿ ಮನೆ ಬಳಿ ಅಂದು 4 ಬೈಕ್​ನಲ್ಲಿ 8 ಜನರು ಬಂದಿದ್ದರು. ನಾನು ಮಲಗುವ ಕೋಣೆ ಎಂದುಕೊಂಡು ಮಾಲೆ ಪಟಾಕಿಯನ್ನು ಹಚ್ಚಿ ಎಸೆದಿದ್ದರು. ಆದರೆ, ಅದು ಅಜ್ಜಿಯ ಕೋಣೆ ಆಗಿತ್ತು. ಅಜ್ಜಿ ಕೋಣೆಯ ಕರ್ಟನ್​ ಎಲ್ಲವೂ ಸುಟ್ಟಿ ಹೋಗಿತ್ತು. ಆದರೆ, ಪಟಾಕೆ ಎಸೆದವರು ಯಾರು ಎನ್ನುವುದು ಗೊತ್ತೇ ಆಗಿರಲಿಲ್ಲ ಎಂದರು ನಿಧಿ.

ಓದು ಮುಗಿದ ಮೇಲೆ ನಾನು ನಟನೆಗೆ ಬಂದೆ. ಒಂದು ದಿನ ಒಂದು ವ್ಯಕ್ತಿ ಬಂದು ನಿನ್ನ ಬಳಿ ಕ್ಷಮೆ ಕೇಳಬೇಕು ಎಂದರು. ನಾನು ಅಚ್ಚರಿಗೊಂಡೆ. ಏಕೆ ಕ್ಷಮೆ ಎಂದು ಕೇಳಿದೆ. ಅವರು, ಮಾಲೆ ಪಟಾಕಿ ಘಟನೆ ಹೇಳಿದರು. ಅವರು ಬೇರಾರೂ ಅಲ್ಲ. ಯಶ್​ ಎಂದು ನಿಧಿ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: Nidhi Subbaiah Profile: ಕನ್ನಡ ಬಿಗ್​ ಬಾಸ್​ ಮನೆಗೆ ಪಂಚರಂಗಿ ಬೆಡಗಿ ನಿಧಿ ಸುಬ್ಬಯ್ಯ

Published On - 10:01 pm, Tue, 2 March 21

ತಾಜಾ ಸುದ್ದಿ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು