AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ಹೊರಟ ಕಾರ್ತಿಕ್ ಮಹೇಶ್; ಇದಕ್ಕೆ ಕಾರಣ ಹೊಸ ಸಿನಿಮಾ

ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿಜೇತ ಕಾರ್ತಿಕ್ ಮಹೇಶ್ ಅವರು ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮರಸ’ ಮತ್ತು ‘ರಿಚಿ ರಿಚ್’ ಸಿನಿಮಾಗಳ ಜೊತೆಗೆ, ಅವರು ಹೊಸ ಚಿತ್ರದ ಚರ್ಚೆಯಲ್ಲಿದ್ದಾರೆ. ಈ ಚಿತ್ರದ ಶೂಟಿಂಗ್ ವಿದೇಶದಲ್ಲಿ ನಡೆಯಲಿದೆ. ಒಳ್ಳೆಯ ಕಥೆಗಳನ್ನು ಆಯ್ಕೆ ಮಾಡುವುದು ಅವರ ಗುರಿ.

ವಿದೇಶಕ್ಕೆ ಹೊರಟ ಕಾರ್ತಿಕ್ ಮಹೇಶ್; ಇದಕ್ಕೆ ಕಾರಣ ಹೊಸ ಸಿನಿಮಾ
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Jul 15, 2025 | 12:30 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಕಾರ್ತಿಕ್ ಮಹೇಶ್ (Karthik Mahesh) ಅವರು ಸ್ಯಾಂಡಲ್​ವುಡ್​ನಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಅವರಿಗ ಒಂದಾದ ಬಳಿಕ ಒಂದರಂತೆ ಆಫರ್​ಗಳು ಬರುತ್ತಿವೆ. ಆದರೆ, ಅವರ ಗುರಿ ಮಾತ್ರ ಒಳ್ಳೆಯ ಸಿನಿಮಾಗಳನ್ನು ಮಾಡೋದು. ಈಗ ಅವರು ವಿದೇಶಕ್ಕೆ ಹೊರಡಲು ರೆಡಿ ಆಗಿದ್ದಾರೆ. ಹಾಗಂತ ಅವರು ಪ್ರವಾಸಕ್ಕಾಗಿ ಫಾರೆನ್​ಗೆ ತೆರಳುತ್ತಿಲ್ಲ. ಸಿನಿಮಾ ಒಂದರ ಮಾತುಕತೆ ನಡೆಯುತ್ತಿದ್ದು, ಇದರ ಸಂಪೂರ್ಣ ಶೂಟಿಂಗ್ ವಿದೇಶದಲ್ಲಿ ನಡೆಯಲಿದೆ ಅನ್ನೋದು ವಿಶೇಷ.

ಕಾರ್ತಿಕ್ ಮಹೇಶ್​​ ಅವರು ಸದ್ಯ ‘ರಾಮರಸ’ ಹಾಗೂ ‘ರಿಚಿ ರಿಚ್’ ಹೆಸರಿನ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದಲ್ಲದೆ ಇನ್ನೂ ಕೆಲವು ಚಿತ್ರಗಳು ಚರ್ಚೆಯಲ್ಲಿ ಇವೆ. ‘ಗೀತಾ’ ಹಾಗೂ ‘ಹೊಯ್ಸಳ’ ಸಿನಿಮಾ ನಿರ್ದೇಶನ ಮಾಡಿದ್ದ ವಿಜಯ್ ಎನ್ ಅವರು ಈಗ ‘ಆಲ್ಫಾ’ ಹೆಸರಿನ ಚಿತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಹೊಸ ಪ್ರತಿಭೆಯ ಎಂಟ್ರಿ ಆಗಲಿದೆ. ಈ ಚಿತ್ರದಲ್ಲಿ ಕಾರ್ತಿಕ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಇದಲ್ಲದೆ ಕಾರ್ತಿಕ್ ಮಹೇಶ್ ಅವರು ಹೊಸ ಸಿನಿಮಾ ಒಂದರ ಮಾತುಕತೆ ನಡೆಸುತ್ತಿದ್ದಾರೆ. ಈ ಸಿನಿಮಾದ ಕಥೆ ವಿದೇಶದಲ್ಲಿ ಸಾಗಲಿದೆ. ಇದು ಫೈನಲ್ ಆದರೆ, ಕಾರ್ತಿಕ್ ಅವರು ವಿದೇಶಕ್ಕೆ ಹಾರಲಿದ್ದಾರೆ. ಅಲ್ಲಿ ಕೆಲವು ದಿನಗಳ ಕಾಲ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಎಲ್ಲವೂ ಫೈನಲ್ ಆದ ಬಳಿಕ ಯಾವ ದೇಶ, ಎಷ್ಟು ದಿನ ಶೂಟ್, ಕಥೆ ಬಗ್ಗೆ ಮಾಹಿತಿ ಸಿಗಲಿದೆ. ಕಾರ್ತಿಕ್ ಅವರು ವೆಬ್ ಸೀರಿಸ್ ಮಾಡುವ ಆಲೋಚನೆಯಲ್ಲೂ ಇದ್ದಾರಂತೆ. ಈ ಬಗ್ಗೆ ಮಾತುಕತೆ ಕೂಡ ನಡೆಯುತ್ತಿದೆ.

ಇದನ್ನೂ ಓದಿ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್
Image
ಪಾತ್ರ ಕೊಡದ್ದಕ್ಕೆ ಸಿಟ್ಟು; ಯಶಸ್ಸು ಕೊಟ್ಟ ಬನ್ಸಾಲಿ ಮರೆತ ರಣವೀರ್ ಸಿಂಗ್
Image
ರಶ್ಮಿಕಾ ಸಿನಿಮಾ ಪ್ರಚಾರಕ್ಕೆ ಸಹಾಯ ಮಾಡಲಿದ್ದಾರೆ ಜೂ.ಎನ್​ಟಿಆರ್​-ಹೃತಿಕ್
Image
‘ರಾಮಾಯಣ’ ಬಜೆಟ್ ನಾಲ್ಕು ಸಾವಿರ ಕೋಟಿ; ಯಶ್ ಪಾಲೆಷ್ಟು?

ಇದನ್ನೂ ಓದಿ: ಅಮ್ಮನ ಜೊತೆ ಸೇರಿ ಹೊಸ ಉದ್ಯಮ ಆರಂಭಿಸಿದ ಕಾರ್ತಿಕ್ ಮಹೇಶ್

ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಕಾರ್ತಿಕ್ ಮಹೇಶ್ ಅವರು ಚಿತ್ರರಂಗದಲ್ಲಿ ಬ್ಯುಸಿ ಹೀರೋ ಎನಿಸಿಕೊಂಡಿದ್ದಾರೆ. ‘ರಾಮರಸ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿವೆ. ‘ರಿಚಿ ರಿಚ್’ ಚಿತ್ರದ ಶೂಟ್​ ನಡೆಯುತ್ತಿದೆ.  ಒಳ್ಳೆಯ ಕಥೆ ಸಿಕ್ಕರೆ ಅದನ್ನು ಮಾಡಿ ಅಭಿಮಾನಿಗಳ ಎದುರು ಇಡೋ ಹುಮ್ಮಸ್ಸಿನಲ್ಲಿ ಇದ್ದಾರೆ. ಕಾರ್ತಿಕ್ ಮಹೇಶ್ ಅವರಿಗೆ ‘ಮೈಕ್ರೋ ವೆಬ್ ಸೀರಿಸ್’ ತಂಡಗಳಿಂದಲೂ ಆಫರ್ ಬರುತ್ತಿದೆ. ಆದರೆ, ದೊಡ್ಡ ಪರದೆಯ ಪ್ರೇಕ್ಷಕರನ್ನು ರಂಜಿಸಬೇಕು ಎಂಬುದು ಅವರ ಗುರಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!