AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಗೌಡಗೆ ಓಪನ್ ಚಾಲೆಂಜ್ ಹಾಕಿದ ಗಿಲ್ಲಿ​; ಎರಡು ವಾರದಲ್ಲಿ ಇದು ಸಾಧ್ಯಾನಾ?

ಬಿಗ್ ಬಾಸ್ ಕನ್ನಡ 12ರಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟರ ನಡುವೆ ಹಾವು-ಮುಂಗುಸಿ ಸಂಬಂಧ ಮುಂದುವರಿದಿದೆ. ಗಿಲ್ಲಿ ಕ್ಯಾಪ್ಟನ್ ಆದ ನಂತರ, ಅಶ್ವಿನಿಗೆ ಕ್ಯಾಪ್ಟನ್ ಆಗುವಂತೆ ಸವಾಲು ಹಾಕಿದ್ದಾರೆ. ಅಡುಗೆ ಮನೆ ಕೆಲಸದ ವಿವಾದದಿಂದಾಗಿ ಅವರ ನಡುವೆ ಮತ್ತೆ ಕಿರಿಕ್ ಆರಂಭವಾಗಿದೆ. ಫಿನಾಲೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು, ಅಶ್ವಿನಿ ಕ್ಯಾಪ್ಟನ್ ಆಗಲೇಬೇಕಾದ ಒತ್ತಡದಲ್ಲಿದ್ದಾರೆ.

ಅಶ್ವಿನಿ ಗೌಡಗೆ ಓಪನ್ ಚಾಲೆಂಜ್ ಹಾಕಿದ ಗಿಲ್ಲಿ​; ಎರಡು ವಾರದಲ್ಲಿ ಇದು ಸಾಧ್ಯಾನಾ?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Dec 30, 2025 | 11:38 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಇರೋದು ಹಾವು ಮುಂಗುಸಿ ರೀತಿಯ ಸಂಬಂಧ. ಯಾವಾಗಲೂ ಕಿತ್ತಾಡಿಕೊಳ್ಳುತ್ತಲೇ ಇರುವ ಇವರು ಒಂದಾಗಿದ್ದು ತುಂಬಾನೇ ಕಡಿಮೆ. ಇತ್ತೀಚೆಗೆ ಇಬ್ಬರ ಮಧ್ಯೆ ಸಾಮರಸ್ಯ ಬೆಳೆದಿತ್ತು. ಆದರೆ, ಇವರ ಮಧ್ಯೆ ಮತ್ತೆ ಕಿರಿಕ್ ಉಂಟಾಗಿದೆ. ಅಶ್ವಿನಿ ಗೌಡ ಅವರಿಗೆ ಗಿಲ್ಲಿ ನಟ ಓಪನ್ ಚಾಲೆಂಜ್ ಹಾಕಿದ್ದಾರೆ. ಇದನ್ನು ಸಾಧಿಸೋಕೆ ಅಶ್ವಿನಿ ಬಳಿ ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ.

ಗಿಲ್ಲಿ ನಟ ಅವರು ಬಿಗ್ ಬಾಸ್​​ಗೆ ಬಂದು ಮೂರು ತಿಂಗಳು ಕಳೆದರೂ ಒಮ್ಮೆಯೂ ಕ್ಯಾಪ್ಟನ್ ಆಗಲು ಸಾಧ್ಯವಾಗಿರಲಿಲ್ಲ. ಇದು ಅವರನ್ನು ತುಂಬಾನೇ ಕಾಡಿತ್ತು. ಹಲವು ಬಾರಿ ಪ್ರಯತ್ನಿಸಿದ್ದರೂ ಇದು ಸಾಧ್ಯವಾಗಿರಲಿಲ್ಲ. ಬಿಗ್ ಬಾಸ್ ಶುರುವಾಗಿ ಮೂರು ತಿಂಗಳ ಬಳಿಕ ಗಿಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಅಶ್ವಿನಿಗೆ ಇದು ಇನ್ನೂ ಕನಸಾಗಿಯೇ ಉಳಿದಿದೆ. ಅವರಿಗೆ ಕ್ಯಾಪ್ಟನ್ ಆಗುವಂತೆ ಗಿಲ್ಲಿ ಚಾಲೆಂಜ್ ಹಾಕಿದ್ದಾರೆ. ಅಲ್ಲದೆ, ಈ ಚಾಲೆಂಜ್​​ನ ಇನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಅಶ್ವಿನಿಗೆ ಇದೆ.

ಮನೆಯ ಕೆಲಸದ ವಿಷಯ ಚರ್ಚೆಗೆ ಬಂದಿದೆ. ‘ಅಡುಗೆ ಮನೆ ಕ್ಲೀನ್ ಮಾಡಿ ಮಲಗಿ’ ಎಂದು ಗಿಲ್ಲಿ ಅವರು ಅಶ್ವಿನಿ ಬಳಿ ಕೇಳಿಕೊಂಡರು. ಆದರೆ, ಇದಕ್ಕೆ ಅವರು ಒಪ್ಪಿಕೊಳ್ಳಲೇ ಇಲ್ಲ. ಇದು ಗಿಲ್ಲಿ ಕೋಪಕ್ಕೆ ಕಾರಣ ಆಗಿದೆ. ಅವರು ಅಶ್ವಿನಿ ಮೇಲೆ ಕೂಗಾಡಿದ್ದಾರೆ. ಈ ವೇಳೆ ಅಶ್ವಿನಿ ಆಡಿದ ಒಂದು ಮಾತು ಗಿಲ್ಲಿಗೆ ಚುಚ್ಚಿದೆ. ‘ಕ್ಯಾಪ್ಟನ್ ಎಂದರೆ ನಿಮಗೇನು ಕೋಡು ಇರೋದಿಲ್ಲ’ ಎಂದರು ಅಶ್ವಿನಿ. ಆಗ ಗಿಲ್ಲಿ ಓಪನ್ ಚಾಲೆಂಜ್ ಹಾಕಿದರು.

ಇದನ್ನೂ ಓದಿ: ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಹೊಸ ಎರಡು ಪಾತ್ರಕ್ಕೆ ಬಿಗ್ ಬಾಸ್​​ನಲ್ಲಿ ಆಡಿಷನ್

‘ಮೊದಲು ನೀನು ಕ್ಯಾಪ್ಟನ್ ಆಗಿ ತೋರಿಸು. ಆಮೇಲೆ ಮಾತನಾಡುವಿಯಂತೆ’ ಎಂದು ಗಿಲ್ಲಿ ಸವಾಲು ಹಾಕಿದರು. ಈ ಪ್ರಶ್ನೆ ಕೇಳಿದರೂ ಕೇಳದಿರುವಂತೆ ನಡೆದುಕೊಂಡರು ಅಶ್ವಿನಿ. ಫಿನಾಲೆಗೆ ಉಳಿದಿರೋದು ಮೂರು ವಾರ ಮಾತ್ರ. ಫೈನಲ್ ವಾರದಲ್ಲಿ ಯಾವುದೇ ಕ್ಯಾಪ್ಟನ್ಸಿ ಇರೋದಿಲ್ಲ. ಹೀಗಾಗಿ, ಕ್ಯಾಪ್ಟನ್ ಆದರೆ ಇನ್ನು ಎರಡು ವಾರಗಳಲ್ಲಿ ಆಗಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ