AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​​ನಲ್ಲೂ ‘ಬಿಗ್​​ಬಾಸ್ ಶೋ’, ಸ್ಪರ್ಧಿಗಳಿಗೆ ಕಠಿಣ ನಿಯಮ

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಸ್ಥಗಿತಗೊಂಡಿದೆ. ಬಿಗ್​​ಬಾಸ್ ಸ್ಪರ್ಧಿಗಳನ್ನ ಈಗಲ್​ಟನ್ ರೆಸಾರ್ಟ್​​ಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಅಲ್ಲಿ ಸ್ಪರ್ಧಿಗಳು ಕೆಲವು ನಿಯಮಗಳನ್ನು ಪಾಲಿಸಬೇಕಿದೆ. ಬಿಗ್​​ಬಾಸ್ ಮನೆಯಲ್ಲಿ ಪಾಲಿಸುತ್ತಿದ್ದ ಕೆಲವು ನಿಯಮಗಳನ್ನು ಸ್ಪರ್ಧಿಗಳು ರೆಸಾರ್ಟ್​​​ನಲ್ಲಿಯೂ ಪಾಲಿಸಬೇಕಿದೆ. ಯಾವುವು ಆ ನಿಯಮಗಳು.

ರೆಸಾರ್ಟ್​​ನಲ್ಲೂ ‘ಬಿಗ್​​ಬಾಸ್ ಶೋ’, ಸ್ಪರ್ಧಿಗಳಿಗೆ ಕಠಿಣ ನಿಯಮ
Bigg Boss Kannada Contestant
ಮಂಜುನಾಥ ಸಿ.
|

Updated on: Oct 08, 2025 | 9:15 AM

Share

ಕನ್ನಡ ಬಿಗ್​​ಬಾಸ್ ಸೀಸನ್ 12 (Bigg Boss Kannada 12) ಬಂದ್ ಆಗಿದೆ. ಮಾಲಿನ್ಯ ನಿಯಮ ಉಲ್ಲಂಘನೆ ಮಾಡಿರುವ ಕಾರಣಕ್ಕೆ ಬಿಗ್​​ಬಾಸ್ ಮನೆ ಇರುವ ಜಾಲಿವುಡ್ ಸ್ಟುಡಿಯೋ ಅನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿದ್ದ ಎಲ್ಲ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಎಲ್ಲರನ್ನೂ ರಾಮನಗರದ ಬಳಿಕ ಈಗಲ್​​ಟನ್ ರೆಸಾರ್ಟ್​​ನಲ್ಲಿ ಇರಿಸಲಾಗಿದೆ. ಆದರೆ ರೆಸಾರ್ಟ್​​​ನಲ್ಲಿಯೂ ಸಹ ಬಿಗ್​​ಬಾಸ್ ಸ್ಪರ್ಧಿಗಳಿಗೆ ಕೆಲವು ಕಠಿಣ ನಿಯಮಗಳನ್ನು ಹೇರಲಾಗಿದ್ದು, ಅಲ್ಲಿಯೂ ‘ಬಿಗ್​​ಬಾಸ್ ಶೋ’ ನಡೆಸಲಾಗುತ್ತಿದೆ!

ಈಗಲ್ ಟನ್ ರೆಸಾರ್ಟ್​​​ನಲ್ಲಿ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸುಮಾರು 12 ಕೋಣೆಗಳನ್ನು ಸ್ಪರ್ಧಿಗಳಿಗಾಗಿ ಬುಕ್ ಮಾಡಲಾಗಿದೆ. 17 ಸ್ಪರ್ಧಿಗಳನ್ನು 12 ಕೋಣೆಗಳಲ್ಲಿ ಇರಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಬಿಗ್​​ಬಾಸ್ ಸ್ಪರ್ಧಿಗಳ ಕೋಣೆಯಲ್ಲಿರುವ ಟಿವಿಗಳನ್ನು ತೆಗೆದು ಹಾಕಲಾಗಿದೆ. ಹೊರಗಿನ ಪ್ರಪಂಚದೊಂದಿಗೆ ಸಂಪರ್ಕವಿಲ್ಲದೆ ಬಿಗ್​​ಬಾಸ್ ಸ್ಪರ್ಧಿಗಳು ರೆಸಾರ್ಟ್​​ನಲ್ಲಿ ಇರಬೇಕಿದೆ.

ನಿನ್ನೆ ರೆಸಾರ್ಟ್​​ಗೆ ಕರೆದುಕೊಂಡು ಬಂದ ಬಳಿಕ ಸ್ಪರ್ಧಿಗಳೊಟ್ಟಿಗೆ ಬಿಗ್​​ಬಾಸ್ ಆಯೋಜಕರು ಸಭೆ ನಡೆಸಿದ್ದು, ಪರಿಸ್ಥಿತಿ ವಿವರಿಸಿದ್ದಾರೆ. ಎಲ್ಲ ಸ್ಪರ್ಧಿಗಳ ಮನೆಯವರಿಗೆ ಮಾಹಿತಿ ನೀಡಿರುವುದಾಗಿ ಸ್ಪರ್ಧಿಗಳಿಗೆ ಮಾಹಿತಿ ನೀಡಿದ್ದಾರೆ. ಹಾಗೂ ರೆಸಾರ್ಟ್​​ನಲ್ಲಿ ಇದ್ದಾಗಲೂ ಸಹ ಕೆಲವು ನಿಯಮಗಳ ಪಾಲನೆ ಮಾಡಬೇಕೆಂದು ಸ್ಪರ್ಧಿಗಳಿಗೆ ಸೂಚಿಸಿದ್ದಾರೆ. ಟಿವಿ ವೀಕ್ಷಿಸುವಂತಿಲ್ಲ. ಮೊಬೈಲ್ ಬಳಕೆ ಇಲ್ಲ, ಬಿಗ್​​ಬಾಸ್ ಸ್ಪರ್ಧಿಗಳು ಮತ್ತು ಆಯೋಜಕರ ಹೊರತಾಗಿ ಇನ್ಯಾರೊಂದಿಗೂ ಸಂಪರ್ಕ ಇರಿಸಿಕೊಳ್ಳುವಂತಿಲ್ಲ. ರೆಸಾರ್ಟ್​​ನ ಸಿಬ್ಬಂದಿಯ ಜೊತೆಗೂ ಮಾತುಕತೆ ಆಡುವಂತಿಲ್ಲ.

ಇದನ್ನೂ ಓದಿ:ಬಿಗ್​​ಬಾಸ್ ಕನ್ನಡ 12ರ ಮೊದಲ ಎಲಿಮಿನೇಷನ್ ಒಟ್ಟಿಗೆ ಇಬ್ಬರು ಹೊರಕ್ಕೆ

ಆಯೋಜಕರು ಮತ್ತು ಜಾಲಿವುಡ್ ಸ್ಟುಡಿಯೋನವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಒಂದೊಮ್ಮೆ ನ್ಯಾಯಾಲಯದಲ್ಲಿ ಹಿನ್ನಡೆ ಆದಲ್ಲಿ, ಹೊರ ರಾಜ್ಯದಲ್ಲಿ ರೆಡಿ ಇರುವ ಸೆಟ್​​ಗೆ ಬಿಗ್​​ಬಾಸ್ ಕನ್ನಡ ಕಾರ್ಯಕ್ರಮವನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಅಸಲಿಗೆ ಆರಂಭದ ಮೂರು ಶೋಗಳು ಹೊರ ರಾಜ್ಯಗಳಲ್ಲಿಯೇ ನಡೆಸಲಾಗಿತ್ತು. ಆ ನಂತರ ಸುದೀಪ್ ಒತ್ತಾಸೆಯ ಕಾರಣಕ್ಕೆ ಕರ್ನಾಟಕದಲ್ಲಿಯೇ ಬಿಗ್​​ಬಾಸ್ ಮನೆ ನಿರ್ಮಾಣ ಆರಂಭಿಸಲಾಯ್ತು. ಈಗ ಇಲ್ಲಿ ಸಮಸ್ಯೆ ಆಗಿರುವ ಕಾರಣ ಮತ್ತೆ ಹೊರರಾಜ್ಯಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?