AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​​ನಲ್ಲೂ ‘ಬಿಗ್​​ಬಾಸ್ ಶೋ’, ಸ್ಪರ್ಧಿಗಳಿಗೆ ಕಠಿಣ ನಿಯಮ

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಸ್ಥಗಿತಗೊಂಡಿದೆ. ಬಿಗ್​​ಬಾಸ್ ಸ್ಪರ್ಧಿಗಳನ್ನ ಈಗಲ್​ಟನ್ ರೆಸಾರ್ಟ್​​ಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಅಲ್ಲಿ ಸ್ಪರ್ಧಿಗಳು ಕೆಲವು ನಿಯಮಗಳನ್ನು ಪಾಲಿಸಬೇಕಿದೆ. ಬಿಗ್​​ಬಾಸ್ ಮನೆಯಲ್ಲಿ ಪಾಲಿಸುತ್ತಿದ್ದ ಕೆಲವು ನಿಯಮಗಳನ್ನು ಸ್ಪರ್ಧಿಗಳು ರೆಸಾರ್ಟ್​​​ನಲ್ಲಿಯೂ ಪಾಲಿಸಬೇಕಿದೆ. ಯಾವುವು ಆ ನಿಯಮಗಳು.

ರೆಸಾರ್ಟ್​​ನಲ್ಲೂ ‘ಬಿಗ್​​ಬಾಸ್ ಶೋ’, ಸ್ಪರ್ಧಿಗಳಿಗೆ ಕಠಿಣ ನಿಯಮ
Bigg Boss Kannada Contestant
ಮಂಜುನಾಥ ಸಿ.
|

Updated on: Oct 08, 2025 | 9:15 AM

Share

ಕನ್ನಡ ಬಿಗ್​​ಬಾಸ್ ಸೀಸನ್ 12 (Bigg Boss Kannada 12) ಬಂದ್ ಆಗಿದೆ. ಮಾಲಿನ್ಯ ನಿಯಮ ಉಲ್ಲಂಘನೆ ಮಾಡಿರುವ ಕಾರಣಕ್ಕೆ ಬಿಗ್​​ಬಾಸ್ ಮನೆ ಇರುವ ಜಾಲಿವುಡ್ ಸ್ಟುಡಿಯೋ ಅನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿದ್ದ ಎಲ್ಲ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಎಲ್ಲರನ್ನೂ ರಾಮನಗರದ ಬಳಿಕ ಈಗಲ್​​ಟನ್ ರೆಸಾರ್ಟ್​​ನಲ್ಲಿ ಇರಿಸಲಾಗಿದೆ. ಆದರೆ ರೆಸಾರ್ಟ್​​​ನಲ್ಲಿಯೂ ಸಹ ಬಿಗ್​​ಬಾಸ್ ಸ್ಪರ್ಧಿಗಳಿಗೆ ಕೆಲವು ಕಠಿಣ ನಿಯಮಗಳನ್ನು ಹೇರಲಾಗಿದ್ದು, ಅಲ್ಲಿಯೂ ‘ಬಿಗ್​​ಬಾಸ್ ಶೋ’ ನಡೆಸಲಾಗುತ್ತಿದೆ!

ಈಗಲ್ ಟನ್ ರೆಸಾರ್ಟ್​​​ನಲ್ಲಿ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸುಮಾರು 12 ಕೋಣೆಗಳನ್ನು ಸ್ಪರ್ಧಿಗಳಿಗಾಗಿ ಬುಕ್ ಮಾಡಲಾಗಿದೆ. 17 ಸ್ಪರ್ಧಿಗಳನ್ನು 12 ಕೋಣೆಗಳಲ್ಲಿ ಇರಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಬಿಗ್​​ಬಾಸ್ ಸ್ಪರ್ಧಿಗಳ ಕೋಣೆಯಲ್ಲಿರುವ ಟಿವಿಗಳನ್ನು ತೆಗೆದು ಹಾಕಲಾಗಿದೆ. ಹೊರಗಿನ ಪ್ರಪಂಚದೊಂದಿಗೆ ಸಂಪರ್ಕವಿಲ್ಲದೆ ಬಿಗ್​​ಬಾಸ್ ಸ್ಪರ್ಧಿಗಳು ರೆಸಾರ್ಟ್​​ನಲ್ಲಿ ಇರಬೇಕಿದೆ.

ನಿನ್ನೆ ರೆಸಾರ್ಟ್​​ಗೆ ಕರೆದುಕೊಂಡು ಬಂದ ಬಳಿಕ ಸ್ಪರ್ಧಿಗಳೊಟ್ಟಿಗೆ ಬಿಗ್​​ಬಾಸ್ ಆಯೋಜಕರು ಸಭೆ ನಡೆಸಿದ್ದು, ಪರಿಸ್ಥಿತಿ ವಿವರಿಸಿದ್ದಾರೆ. ಎಲ್ಲ ಸ್ಪರ್ಧಿಗಳ ಮನೆಯವರಿಗೆ ಮಾಹಿತಿ ನೀಡಿರುವುದಾಗಿ ಸ್ಪರ್ಧಿಗಳಿಗೆ ಮಾಹಿತಿ ನೀಡಿದ್ದಾರೆ. ಹಾಗೂ ರೆಸಾರ್ಟ್​​ನಲ್ಲಿ ಇದ್ದಾಗಲೂ ಸಹ ಕೆಲವು ನಿಯಮಗಳ ಪಾಲನೆ ಮಾಡಬೇಕೆಂದು ಸ್ಪರ್ಧಿಗಳಿಗೆ ಸೂಚಿಸಿದ್ದಾರೆ. ಟಿವಿ ವೀಕ್ಷಿಸುವಂತಿಲ್ಲ. ಮೊಬೈಲ್ ಬಳಕೆ ಇಲ್ಲ, ಬಿಗ್​​ಬಾಸ್ ಸ್ಪರ್ಧಿಗಳು ಮತ್ತು ಆಯೋಜಕರ ಹೊರತಾಗಿ ಇನ್ಯಾರೊಂದಿಗೂ ಸಂಪರ್ಕ ಇರಿಸಿಕೊಳ್ಳುವಂತಿಲ್ಲ. ರೆಸಾರ್ಟ್​​ನ ಸಿಬ್ಬಂದಿಯ ಜೊತೆಗೂ ಮಾತುಕತೆ ಆಡುವಂತಿಲ್ಲ.

ಇದನ್ನೂ ಓದಿ:ಬಿಗ್​​ಬಾಸ್ ಕನ್ನಡ 12ರ ಮೊದಲ ಎಲಿಮಿನೇಷನ್ ಒಟ್ಟಿಗೆ ಇಬ್ಬರು ಹೊರಕ್ಕೆ

ಆಯೋಜಕರು ಮತ್ತು ಜಾಲಿವುಡ್ ಸ್ಟುಡಿಯೋನವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಒಂದೊಮ್ಮೆ ನ್ಯಾಯಾಲಯದಲ್ಲಿ ಹಿನ್ನಡೆ ಆದಲ್ಲಿ, ಹೊರ ರಾಜ್ಯದಲ್ಲಿ ರೆಡಿ ಇರುವ ಸೆಟ್​​ಗೆ ಬಿಗ್​​ಬಾಸ್ ಕನ್ನಡ ಕಾರ್ಯಕ್ರಮವನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಅಸಲಿಗೆ ಆರಂಭದ ಮೂರು ಶೋಗಳು ಹೊರ ರಾಜ್ಯಗಳಲ್ಲಿಯೇ ನಡೆಸಲಾಗಿತ್ತು. ಆ ನಂತರ ಸುದೀಪ್ ಒತ್ತಾಸೆಯ ಕಾರಣಕ್ಕೆ ಕರ್ನಾಟಕದಲ್ಲಿಯೇ ಬಿಗ್​​ಬಾಸ್ ಮನೆ ನಿರ್ಮಾಣ ಆರಂಭಿಸಲಾಯ್ತು. ಈಗ ಇಲ್ಲಿ ಸಮಸ್ಯೆ ಆಗಿರುವ ಕಾರಣ ಮತ್ತೆ ಹೊರರಾಜ್ಯಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ