AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದಿನ ಬಿಗ್ ಬಾಸ್ ಆರಂಭ; ಪ್ರೋಮೋ ರಿಲೀಸ್​ಗೂ ಮುಹೂರ್ತ ಫಿಕ್ಸ್

ಬಿಗ್ ಬಾಸ್ ಕನ್ನಡ ಸೀಸನ್ 12 ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಯಾವ ಸ್ಪರ್ಧಿಗಳು ಭಾಗವಹಿಸುತ್ತಾರೆ ಎಂಬ ವಿಷಯ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ಅವರು ಕಳೆದ ವರ್ಷ ಬಿಗ್ ಬಾಸ್ ನಡೆಸಿಕೊಡೋದಿಲ್ಲ ಎಂದು ಹೇಳಿದ್ದರು. ಆದರೆ, ಈ ಬಾರಿ ಅವರು ಮತ್ತೆ ದೊಡ್ಮನೆ ನಿರೂಪಣೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಶೋ ಬಗ್ಗೆ ಕುತೂಹಲ ಇದೆ.

ಈ ದಿನ ಬಿಗ್ ಬಾಸ್ ಆರಂಭ; ಪ್ರೋಮೋ ರಿಲೀಸ್​ಗೂ ಮುಹೂರ್ತ ಫಿಕ್ಸ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 26, 2025 | 12:04 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ (Bigg Boss) ಆರಂಭ ಆಗುತ್ತದೆ, ಯಾರೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆ ಸೇರುತ್ತಾರೆ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿವೆ. ಈ ಪ್ರಶ್ನೆಗೆ ಅಭಿಮಾನಿಗಳಿಗೆ ಉತ್ತರ ಸಿಕ್ಕಿದೆ. ಈ ರಿಯಾಲಿಟಿ ಶೋ ಪ್ರೋಮೋ ಹಾಗೂ ಪ್ರಸಾರ ದಿನಾಂಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಸಾಕಷ್ಟು ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ಅವರು ಕಳೆದ ವರ್ಷ ಬಿಗ್ ಬಾಸ್ ನಡೆಸಿಕೊಡೋದಿಲ್ಲ ಎಂದು ಹೇಳಿದ್ದರು. ಆದರೆ, ಈ ಬಾರಿ ಅವರು ಮತ್ತೆ ದೊಡ್ಮನೆ ನಿರೂಪಣೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಶೋ ಬಗ್ಗೆ ಕುತೂಹಲ ಇದೆ. ಕಿಚ್ಚ ಸುದೀಪ್ ಬರ್ತ್​ಡೇ ದಿನ ದೊಡ್ಡ ಅಪ್​ಡೇಟ್ ಸಿಗಲಿದೆ.

ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ದಿನದಂದು ಬಿಗ್ ಬಾಸ್ ಪ್ರೋಮೋ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 28ರಂದು ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ ನಡೆಯಲಿದೆ ಎನ್ನಲಾಗಿದೆ. 29ರಿಂದ ದೊಡ್ಮನೆ ಆಟ ಶುರುವಾಗಲಿದೆ. ಯಾವೆಲ್ಲ ಸ್ಪರ್ಧಿಗಳು ಈ ಬಾರಿ ಇರುತ್ತಾರೆ ಎನ್ನುವ ಕುತೂಹಲಕ್ಕೆ ಪ್ರೋಮೋದಲ್ಲಿ ಉತ್ತರ ಸಿಗಲಿದೆ.

ಇದನ್ನೂ ಓದಿ
Image
2015ರ ಹಾಡಿನ ಟ್ಯೂನ್ ಹೋಲುತ್ತಿದೆ ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್
Image
‘ಸು ಫ್ರಮ್ ಸೋ’ OTT ರಿಲೀಸ್ ದಿನಾಂಕ ರಿವೀಲ್ ಆದರೂ ನಿಂತಿಲ್ಲ ಕಲೆಕ್ಷನ್
Image
VIDEO: ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
Image
ಹಿರಿಯ ನಟ ದಿನೇಶ್​ಗೆ ಇದ್ದ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ

ಬಿಗ್ ಬಾಸ್​ನಲ್ಲಿ ಜನ ಸಾಮಾನ್ಯರು ಕೂಡ ಸ್ಪರ್ಧಿಸಬಹುದು ಎಂಬ ಆಯ್ಕೆಯನ್ನು ಈ ಹಿಂದೆ ನೀಡಲಾಗಿತ್ತು. ಅದನ್ನು ಈ ಬಾರಿ ಕೊಡಲಾಗುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಪ್ರೋಮೋದಲ್ಲಿ ಈ ಬಗ್ಗೆ ವಿವರ ಸಿಗೋ ಸಾಧ್ಯತೆ ಇದೆ.

ಸುದೀಪ್ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅವರ ಹೊಸ ಸಿನಿಮಾದ ಟೈಟಲ್ ಕೂಡ ಈ ದಿನದಂದು ರಿವೀಲ್ ಆಗುವ ಸಾಧ್ಯತೆ ಇದೆಯಂತೆ. ಈ ಎಲ್ಲಾ ವಿಚಾರಗಳು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿವೆ. ಸುದೀಪ್ ವರ್ತ್​ಡೇ ಮತ್ತಷ್ಟು ವಿಶೇಷ ಆಗಲಿವೆ.

ಇದನ್ನೂ ಓದಿ: ಈ ಬಾರಿ ಬಿಗ್ ಬಾಸ್ ನಿರೂಪಣೆಗೆ ನಾಗಾರ್ಜುನ ಪಡೆಯುವ ಸಂಭಾವನೆ ಎಷ್ಟು ಕೋಟಿ?

ಬಿಗ್ ಬಾಸ್ ಕನ್ನಡ ಸೀಸನ್ 12 ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಯಾವ ಸ್ಪರ್ಧಿಗಳು ಭಾಗವಹಿಸುತ್ತಾರೆ ಎಂಬ ವಿಷಯ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ಅವರು ಕಳೆದ ವರ್ಷ ಬಿಗ್ ಬಾಸ್ ನಡೆಸಿಕೊಡೋದಿಲ್ಲ ಎಂದು ಹೇಳಿದ್ದರು. ಆದರೆ, ಈ ಬಾರಿ ಅವರು ಮತ್ತೆ ದೊಡ್ಮನೆ ನಿರೂಪಣೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಶೋ ಬಗ್ಗೆ ಕುತೂಹಲ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ