AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ ವಿಚಾರಕ್ಕೆ ಬಿಕ್ಕಿ ಬಿಕ್ಕಿ ಅತ್ತ ಚಕ್ರವರ್ತಿ ಚಂದ್ರಚೂಡ್​! ಇಡೀ ಮನೆಯೇ ಎಮೋಷನಲ್​

Bigg Boss Kannada: ಚಕ್ರವರ್ತಿ ಚಂದ್ರಚೂಡ್​ ಅವರು ಒಡೆದು ಆಳುವ ಬುದ್ಧಿಯವರು ಎಂದು ಎಲ್ಲರೂ ಬ್ರ್ಯಾಂಡ್​ ಮಾಡಿದ್ದರು. ಅಂಥ ಗಟ್ಟಿಮನುಷ್ಯ ಈಗ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾರೆ.

ದಿವ್ಯಾ ಸುರೇಶ್​ ವಿಚಾರಕ್ಕೆ ಬಿಕ್ಕಿ ಬಿಕ್ಕಿ ಅತ್ತ ಚಕ್ರವರ್ತಿ ಚಂದ್ರಚೂಡ್​! ಇಡೀ ಮನೆಯೇ ಎಮೋಷನಲ್​
(ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಸುರೇಶ್​ - ಚಕ್ರವರ್ತಿ ಚಂದ್ರಚೂಡ್​)
ಮದನ್​ ಕುಮಾರ್​
|

Updated on: Apr 13, 2021 | 3:11 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಸುರೇಶ್​ ಅವರು ತಮ್ಮದೇ ಆದ ರೀತಿಯಿಂದ ಗುರುತಿಸಿಕೊಂಡಿದ್ದಾರೆ. ಟಾಸ್ಕ್​ ವಿಚಾರದಲ್ಲಿ ಅವರು ತುಂಬ ಸ್ಟ್ರಾಂಗ್​ ಆಗಿ ಪೈಪೋಟಿ ನೀಡುತ್ತಾರೆ. ಮಂಜು ಜೊತೆಗಿನ ಸ್ನೇಹ-ಪ್ರೀತಿಯ ಕಾರಣದಿಂದ ಹೆಚ್ಚು ಹೈಲೈಟ್​ ಆಗುತ್ತಾರೆ. ಪ್ರಾಕ್ಟಿಕಲ್​ ಆಗಿ ಆಲೋಚನೆ ಮಾಡುವುದರಿಂದ ಅವರು ಕೆಲವೊಮ್ಮೆ ಎಲ್ಲರ ನಿಷ್ಠುರ ಕೂಡ ಕಟ್ಟಿಕೊಳ್ಳಬೇಕಾಗಿದೆ. ಇಂಥ ದಿವ್ಯಾ ಸುರೇಶ್​ ಅವರಿಂದಾಗಿ ಬಿಗ್​ ಬಾಸ್​ ಮನೆಯೊಳಗೆ ಪತ್ರಕರ್ತ, ಬರಹಗಾರ ಚಕ್ರವರ್ತಿ ಚಂದ್ರಚೂಡ್​ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ!

ವೈಲ್ಡ್​ ಕಾರ್ಡ್​ ಮೂಲಕ ದೊಡ್ಮನೆಗೆ ಕಾಲಿಟ್ಟವರು ಚಕ್ರವರ್ತಿ ಚಂದ್ರಚೂಡ್​. ಬಿಗ್​ ಬಾಸ್​ಗೆ ಬಂದ ಮೊದಲ ದಿನವೇ ಅವರನ್ನು ಕಂಡು ಬಹುತೇಕರು ಕಂಗಾಲಾಗಿದ್ದರು. ಮಾತಿನಲ್ಲಿ ಎಂಥವರನ್ನಾದರೂ ಸೋಲಿಸಬಲ್ಲ ಅವರ ಚಾಕಚಕ್ಯತೆಗೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದರು. ದೊಡ್ಮನೆಯಲ್ಲಿರುವ ಗುಂಪುಗಾರಿಕೆಯನ್ನು ಒಡೆದುಹಾಕಲು ಚಂದ್ರಚೂಡ್​ ಪ್ರಯುತ್ನಿಸಿದ್ದರು. ಹಾಗಾಗಿ ಅವರು ಒಡೆದು ಆಳುವ ಬುದ್ಧಿಯವರು ಎಂದು ಎಲ್ಲರೂ ಬ್ರ್ಯಾಂಡ್​ ಮಾಡಿದ್ದರು. ಅಂಥ ಗಟ್ಟಿಮನುಷ್ಯ ಈಗ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾರೆ.

ಇತ್ತೀಚೆಗೆ ಬಿಗ್​ ಬಾಸ್​ನಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಎಂಬ ಟಾಸ್ಕ್​ ನೀಡಲಾಗಿತ್ತು. ಬಿಗ್​ ಬಾಸ್​ನಲ್ಲಿ ತಮಗೆ ಇಷ್ಟವಾದ ಹುಡುಗಿಗೆ ಹುಡುಗರು ಬಲೂನ್​ ನೀಡಬೇಕಿತ್ತು. ಆದಕ್ಕೆ ಚಕ್ರವರ್ತಿ ಚಂದ್ರಚೂಡ್​ ಆಯ್ಕೆ ಮಾಡಿಕೊಂಡಿದ್ದು ದಿವ್ಯಾ ಸುರೇಶ್​ ಅವರನ್ನು. ‘ಮರಳಿನ ಮೇಲೆ ಬರೆದ ಹೆಸರು ಯಾವತ್ತೂ ಶಾಶ್ವತವಲ್ಲ. ಅದು ಅಳಿಸಿ ಹೋಗುತ್ತಲೇ ಇರುತ್ತದೆ. ಹಾಗೆಯೇ ಪ್ರೀತಿಯಲ್ಲಿ ಎಷ್ಟೇ ಬಾರಿ ಸೋತರೂ ಮತ್ತೆ ಮತ್ತೆ ಪ್ರೀತಿಸುವುದನ್ನು ನಾನು ಜೀವಂತವಾಗಿರವವರೆಗೆ ಬಿಡುವುದಿಲ್ಲ. ಯಾಕೆಂದರೆ ಪ್ರೀತಿ ನನ್ನ ಶಕ್ತಿ’ ಎಂದು ದಿವ್ಯಾ ಬಗ್ಗೆ ಚಂದ್ರಚೂಡ್​ ಮಾತು ಆರಂಭಿಸಿದರು.

‘ದಿವ್ಯಾ ಕೂಡ ನನ್ನ ಥರ ವೈಲ್ಡ್​. ಮೇಲ್ನೋಟಕ್ಕೆ ಮೈಲ್ಡ್​. ಆದರೆ ಮನಸ್ಸು ತುಂಬಾ ಚೈಲ್ಡ್​. ಮಗುವಿನ ಥರ ಹಠ ಮಾಡ್ತಾಳೆ. ಪ್ರೀತಿಸುವವರಿಗೆ ಈ ಲಕ್ಷಣ ಇರುತ್ತದೆ. ದಿವ್ಯಾ ಸುರೇಶ್​ನ ನೋಡಿದಾಗ ನನಗೆ ನನ್ನ ಮಗಳು ನೆನಪಾಗ್ತಾಳೆ. ಯಾಕೆಂದರೆ ನಾನು ಮತ್ತು ದಿವ್ಯಾ ಒಂದೇ ರೀತಿ ಸಾಗಿ ಬಂದಿದ್ದೇವೆ. ತಂದೆ-ತಾಯಿಯನ್ನು ದೂರ ಮಾಡಿಕೊಂಡಿದ್ವಿ. ನಾನು ಸಿಂಗಲ್​ ಪೇರೆಂಟ್​. ಅದರ ಕಷ್ಟ ನನಗೆ ಗೊತ್ತು. ನಾನು ಜೈಲಿಗೆ ಹೋದಾಗ ನನ್ನ ಮಗಳು ಬಂದು ನೋಡಿದ್ದಳು. ನನ್ನ ಮಗಳ ರೀತಿ ಇರುವ ದಿವ್ಯಾಗೆ ಈ ಬಲೂನ್​ ಕೊಡುತ್ತೇನೆ’ ಎಂದು ಚಂದ್ರಚೂಡ್​ ಸಿಕ್ಕಾಪಟ್ಟೆ ಅತ್ತುಬಿಟ್ಟರು.

ಚಂದ್ರವರ್ತಿ ಚಂದ್ರಚೂಡ್​ ನೀಡಿದ ಬಲೂನ್​ ಪಡೆದುಕೊಂಡು ದಿವ್ಯಾ ಸುರೇಶ್​ ಕೂಡ ಬಿಕ್ಕಿ ಬಿಕ್ಕಿ ಅತ್ತರು. ಬಹಳ ವರ್ಷಗಳಿಂದ ತಂದೆಯಿಂದ ದೂರವಾಗಿ ದಿವ್ಯಾ ವಾಸಿಸುತ್ತಿದ್ದಾರೆ. ಈ ಬಗ್ಗೆ ಬಿಗ್​ ಬಾಸ್​ ಮನೆಯಲ್ಲಿ ಅವರು ಕೆಲವು ಬಾರಿ ಹೇಳಿಕೊಂಡಿದ್ದರು. ಈಗ ಚಕ್ರವರ್ತಿ ಚಂದ್ರಚೂಡ್​ ಅವರಿಂದ ಮಗಳು ಎಂದು ಕರೆಸಿಕೊಂಡು ಅವರಿಗೆ ಆನಂದಬಾಷ್ಪಾ ಉಕ್ಕಿಬಂತು. ಅವರಿಗಿಂತಲೂ ಹೆಚ್ಚು ಅತ್ತಿದ್ದು ಚಂದ್ರಚೂಡ್​. ಈ ಸಂದರ್ಭಕ್ಕೆ ಸಾಕ್ಷಿಯಾದ ಬಿಗ್​ ಬಾಸ್​ ಮನೆಯ ಇತರೆ ಸದಸ್ಯರು ಕೂಡ ಸಿಕ್ಕಾಪಟ್ಟೆ ಎಮೋಷನಲ್​ ಆದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?