AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ಹೊರಬಂದು ನುಡಿದಂತೆ ನಡೆದ ಶುಭಾ ಪೂಂಜಾ; ಬಡವರಿಗೆ ಫುಡ್​ ಕಿಟ್​ ನೀಡಿದ ನಟಿ

Shubha Poonja: 71 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಇದ್ದ ಶುಭಾ ಪೂಂಜಾ ಅವರು ತಮ್ಮದೇ ವ್ಯಕ್ತಿತ್ವದ ಕಾರಣದಿಂದ ಗಮನ ಸೆಳೆದಿದ್ದರು. ಈಗ ಬಿಗ್​ ಬಾಸ್​ನಿಂದ ಹೊರಬಂದು, ಲಾಕ್​ಡೌನ್​ನ ಕಷ್ಟಕಾಲದಲ್ಲಿ ಜನಮೆಚ್ಚುವ ಕೆಲಸಗಳನ್ನು ಅವರು ಮಾಡುತ್ತಿದ್ದಾರೆ.

ಬಿಗ್​ ಬಾಸ್​ನಿಂದ ಹೊರಬಂದು ನುಡಿದಂತೆ ನಡೆದ ಶುಭಾ ಪೂಂಜಾ; ಬಡವರಿಗೆ ಫುಡ್​ ಕಿಟ್​ ನೀಡಿದ ನಟಿ
ಶುಭಾ ಪೂಂಜಾ - ಫುಡ್ ಕಿಟ್
Follow us
ಮದನ್​ ಕುಮಾರ್​
| Updated By: Digi Tech Desk

Updated on:May 15, 2021 | 10:39 AM

ಅನಿರೀಕ್ಷಿತವಾಗಿ ‘ಬಿಗ್​ ಬಾಸ್ ಕನ್ನಡ​ ಸೀಸನ್​ 8’ ಕಾರ್ಯಕ್ರಮ ಕೊನೆಯಾಯಿತು. ಹೊರಜಗತ್ತಿನಲ್ಲಿ ಏನಾಗುತ್ತಿದೆ ಎಂದು ಗೊತ್ತಾದ ಬಳಿಕ ಮನೆಯೊಳಗಿದ್ದ ಸ್ಪರ್ಧಿಗಳೆಲ್ಲ ಕಂಗಾಲಾದರು. ಕೊರೊನಾ ವೈರಸ್​ ಹಾವಳಿಯಿಂದ ಇಡೀ ದೇಶವೇ ತತ್ತರಿಸಿರುವುದನ್ನು ಕಂಡು ದೊಡ್ಮನೆ ಸದಸ್ಯರು ಬೆಚ್ಚಿ ಬಿದ್ದರು. ಅಲ್ಲದೆ, ತಾವು ರಿಯಾಲಿಟಿ ಶೋನಿಂದ ಹೊರಹೋದ ಬಳಿಕ ಕೊರೊನಾ ವಾರಿಯರ್​ ಆಗಿ ಕೆಲಸ ಮಾಡೋಣ ಎಂದು ಶಪಥ ಮಾಡಿದ್ದರು. ನಟಿ ಶುಭಾ ಪೂಂಜಾ ಕೂಡ ಇದೇ ನಿರ್ಣಯ ಕೈಗೊಂಡಿದ್ದರು. ಈಗ ಅವರು ತಮ್ಮ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡುವಲ್ಲಿ ಅವರು ತೊಡಗಿಕೊಂಡಿದ್ದಾರೆ.

ಸದ್ಯ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಅನೇಕರಿಗೆ ಕೆಲಸ ಇಲ್ಲದಂತಾಗಿದೆ. ಹಾಗಾಗಿ ಕೂಲಿ ಕಾರ್ಮಿಕರು, ಬಡವರು ಒಂದು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿರುವಂತಹ ಪರಿಸ್ಥಿತಿ ಇದೆ. ಅಂಥವರ ಸಹಾಯಕ್ಕೆ ಶುಭಾ ಪೂಂಜಾ ನಿಂತಿದ್ದಾರೆ. ತಮ್ಮ ಏರಿಯಾ ಸುತ್ತ ಮುತ್ತ ಇರುವ ಬಡವರಿಗೆ ಅವರು ಫುಡ್​ ಕಿಟ್​ಗಳನ್ನು ವಿತರಿಸಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಇತರರನ್ನೂ ಪ್ರೇರೇಪಿಸು ಪ್ರಯತ್ನವನ್ನು ಅವರು ಮಾಡಿದ್ದಾರೆ. ಶುಭಾ ಮಾಡುತ್ತಿರುವ ಈ ಕಾಯಕಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

71 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಇದ್ದ ಶುಭಾ ಪೂಂಜಾ ಅವರು ತಮ್ಮದೇ ವ್ಯಕ್ತಿತ್ವದ ಕಾರಣದಿಂದ ಗಮನ ಸೆಳೆದಿದ್ದರು. ಹಲವು ಸಂದರ್ಭಗಳಲ್ಲಿ ಅವರು ಚಿಕ್ಕ ಮಗು ರೀತಿ ವರ್ತಿಸುತ್ತಿದ್ದರು. ಈಗ ಬಿಗ್​ ಬಾಸ್​ನಿಂದ ಹೊರಬಂದು ಜನಮೆಚ್ಚುವ ಕೆಲಸಗಳನ್ನು ಮಾಡುತ್ತಿದ್ದಾರೆ. ಶುಭಾ ಪೂಂಜಾ ಮಾತ್ರವಲ್ಲದೇ ಸ್ಯಾಂಡಲ್​ವುಡ್​ನ ಅನೇಕರು ಈ ಸಂದರ್ಭದಲ್ಲಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

5 ಸರ್ಕಾರಿ ಆಸ್ಪತ್ರೆಯ ವೈದ್ಯರು, ನರ್ಸ್​ಗಳು ಮತ್ತು ಸಿಬ್ಬಂದಿಗೆ ನಟ ಶ್ರೀಮುರಳಿ ಊಟದ ವ್ಯವಸ್ಥೆ ಮಾಡಿಸಿದ್ದಾರೆ. ಉಪೇಂದ್ರ ಕೂಡ ಸಾವಿರಾರು ಕುಟುಂಬದವರಿಗೆ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡುತ್ತಿದ್ದಾರೆ. ಅವರ ಕಾರ್ಯಕ್ಕೆ ಕೈ ಜೋಡಿಸಿರುವ ಅನೇಕರು ದೇಣಿಗೆ ನೀಡುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್​ ಪೊನ್ನಣ್ಣ ತಮ್ಮದೇ ಹೆಲ್ಪ್​ಲೈನ್​ ಆರಂಭಿಸಿ, ಆ ಮೂಲಕ ಸಾವಿರಾರು ಜನರಿಗೆ ನೆರವು ನೀಡಿದ್ದಾರೆ. ನಟ ಅರ್ಜುನ್​ ಗೌಡ ಅವರು ಆ್ಯಂಬುಲೆನ್ಸ್​ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಕೂಡ ಬಡವರಿಗೆ ನೆರವಾಗುತ್ತಿದ್ದಾರೆ.

ಇದನ್ನೂ ಓದಿ:

Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

ಸಕ್ಸಸ್​​​ ಕಂಡಮೇಲೂ ಬ್ಯಾಂಕ್​ ಬ್ಯಾಲೆನ್ಸ್​ ಜೀರೋ ಆಗಿತ್ತು; ಚಿತ್ರರಂಗದಲ್ಲಿ ಅನುಭವಿಸಿದ ಕಷ್ಟದ ಬಗ್ಗೆ ಹೇಳಿಕೊಂಡ ಶುಭಾ

Published On - 8:47 am, Sat, 15 May 21

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು