ಬಿಗ್​ ಬಾಸ್​ನಿಂದ ಹೊರಬಂದು ನುಡಿದಂತೆ ನಡೆದ ಶುಭಾ ಪೂಂಜಾ; ಬಡವರಿಗೆ ಫುಡ್​ ಕಿಟ್​ ನೀಡಿದ ನಟಿ

Shubha Poonja: 71 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಇದ್ದ ಶುಭಾ ಪೂಂಜಾ ಅವರು ತಮ್ಮದೇ ವ್ಯಕ್ತಿತ್ವದ ಕಾರಣದಿಂದ ಗಮನ ಸೆಳೆದಿದ್ದರು. ಈಗ ಬಿಗ್​ ಬಾಸ್​ನಿಂದ ಹೊರಬಂದು, ಲಾಕ್​ಡೌನ್​ನ ಕಷ್ಟಕಾಲದಲ್ಲಿ ಜನಮೆಚ್ಚುವ ಕೆಲಸಗಳನ್ನು ಅವರು ಮಾಡುತ್ತಿದ್ದಾರೆ.

ಬಿಗ್​ ಬಾಸ್​ನಿಂದ ಹೊರಬಂದು ನುಡಿದಂತೆ ನಡೆದ ಶುಭಾ ಪೂಂಜಾ; ಬಡವರಿಗೆ ಫುಡ್​ ಕಿಟ್​ ನೀಡಿದ ನಟಿ
ಶುಭಾ ಪೂಂಜಾ - ಫುಡ್ ಕಿಟ್
Edited By:

Updated on: May 15, 2021 | 10:39 AM

ಅನಿರೀಕ್ಷಿತವಾಗಿ ‘ಬಿಗ್​ ಬಾಸ್ ಕನ್ನಡ​ ಸೀಸನ್​ 8’ ಕಾರ್ಯಕ್ರಮ ಕೊನೆಯಾಯಿತು. ಹೊರಜಗತ್ತಿನಲ್ಲಿ ಏನಾಗುತ್ತಿದೆ ಎಂದು ಗೊತ್ತಾದ ಬಳಿಕ ಮನೆಯೊಳಗಿದ್ದ ಸ್ಪರ್ಧಿಗಳೆಲ್ಲ ಕಂಗಾಲಾದರು. ಕೊರೊನಾ ವೈರಸ್​ ಹಾವಳಿಯಿಂದ ಇಡೀ ದೇಶವೇ ತತ್ತರಿಸಿರುವುದನ್ನು ಕಂಡು ದೊಡ್ಮನೆ ಸದಸ್ಯರು ಬೆಚ್ಚಿ ಬಿದ್ದರು. ಅಲ್ಲದೆ, ತಾವು ರಿಯಾಲಿಟಿ ಶೋನಿಂದ ಹೊರಹೋದ ಬಳಿಕ ಕೊರೊನಾ ವಾರಿಯರ್​ ಆಗಿ ಕೆಲಸ ಮಾಡೋಣ ಎಂದು ಶಪಥ ಮಾಡಿದ್ದರು. ನಟಿ ಶುಭಾ ಪೂಂಜಾ ಕೂಡ ಇದೇ ನಿರ್ಣಯ ಕೈಗೊಂಡಿದ್ದರು. ಈಗ ಅವರು ತಮ್ಮ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡುವಲ್ಲಿ ಅವರು ತೊಡಗಿಕೊಂಡಿದ್ದಾರೆ.

ಸದ್ಯ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಅನೇಕರಿಗೆ ಕೆಲಸ ಇಲ್ಲದಂತಾಗಿದೆ. ಹಾಗಾಗಿ ಕೂಲಿ ಕಾರ್ಮಿಕರು, ಬಡವರು ಒಂದು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿರುವಂತಹ ಪರಿಸ್ಥಿತಿ ಇದೆ. ಅಂಥವರ ಸಹಾಯಕ್ಕೆ ಶುಭಾ ಪೂಂಜಾ ನಿಂತಿದ್ದಾರೆ. ತಮ್ಮ ಏರಿಯಾ ಸುತ್ತ ಮುತ್ತ ಇರುವ ಬಡವರಿಗೆ ಅವರು ಫುಡ್​ ಕಿಟ್​ಗಳನ್ನು ವಿತರಿಸಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಇತರರನ್ನೂ ಪ್ರೇರೇಪಿಸು ಪ್ರಯತ್ನವನ್ನು ಅವರು ಮಾಡಿದ್ದಾರೆ. ಶುಭಾ ಮಾಡುತ್ತಿರುವ ಈ ಕಾಯಕಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

71 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಇದ್ದ ಶುಭಾ ಪೂಂಜಾ ಅವರು ತಮ್ಮದೇ ವ್ಯಕ್ತಿತ್ವದ ಕಾರಣದಿಂದ ಗಮನ ಸೆಳೆದಿದ್ದರು. ಹಲವು ಸಂದರ್ಭಗಳಲ್ಲಿ ಅವರು ಚಿಕ್ಕ ಮಗು ರೀತಿ ವರ್ತಿಸುತ್ತಿದ್ದರು. ಈಗ ಬಿಗ್​ ಬಾಸ್​ನಿಂದ ಹೊರಬಂದು ಜನಮೆಚ್ಚುವ ಕೆಲಸಗಳನ್ನು ಮಾಡುತ್ತಿದ್ದಾರೆ. ಶುಭಾ ಪೂಂಜಾ ಮಾತ್ರವಲ್ಲದೇ ಸ್ಯಾಂಡಲ್​ವುಡ್​ನ ಅನೇಕರು ಈ ಸಂದರ್ಭದಲ್ಲಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

5 ಸರ್ಕಾರಿ ಆಸ್ಪತ್ರೆಯ ವೈದ್ಯರು, ನರ್ಸ್​ಗಳು ಮತ್ತು ಸಿಬ್ಬಂದಿಗೆ ನಟ ಶ್ರೀಮುರಳಿ ಊಟದ ವ್ಯವಸ್ಥೆ ಮಾಡಿಸಿದ್ದಾರೆ. ಉಪೇಂದ್ರ ಕೂಡ ಸಾವಿರಾರು ಕುಟುಂಬದವರಿಗೆ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡುತ್ತಿದ್ದಾರೆ. ಅವರ ಕಾರ್ಯಕ್ಕೆ ಕೈ ಜೋಡಿಸಿರುವ ಅನೇಕರು ದೇಣಿಗೆ ನೀಡುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್​ ಪೊನ್ನಣ್ಣ ತಮ್ಮದೇ ಹೆಲ್ಪ್​ಲೈನ್​ ಆರಂಭಿಸಿ, ಆ ಮೂಲಕ ಸಾವಿರಾರು ಜನರಿಗೆ ನೆರವು ನೀಡಿದ್ದಾರೆ. ನಟ ಅರ್ಜುನ್​ ಗೌಡ ಅವರು ಆ್ಯಂಬುಲೆನ್ಸ್​ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಕೂಡ ಬಡವರಿಗೆ ನೆರವಾಗುತ್ತಿದ್ದಾರೆ.

ಇದನ್ನೂ ಓದಿ:

Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

ಸಕ್ಸಸ್​​​ ಕಂಡಮೇಲೂ ಬ್ಯಾಂಕ್​ ಬ್ಯಾಲೆನ್ಸ್​ ಜೀರೋ ಆಗಿತ್ತು; ಚಿತ್ರರಂಗದಲ್ಲಿ ಅನುಭವಿಸಿದ ಕಷ್ಟದ ಬಗ್ಗೆ ಹೇಳಿಕೊಂಡ ಶುಭಾ

Published On - 8:47 am, Sat, 15 May 21

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us