AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ಹಿಡಿದ ಪ್ರಕರಣ: 3 ದಿನ ಪೊಲೀಸ್ ಕಸ್ಟಡಿಗೆ ವಿನಯ್ ಗೌಡ, ರಜತ್ ಕಿಶನ್

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ. ರೀಲ್ಸ್ ಮಾಡಲು ಬಳಸಿದ್ದ ರಿಯಲ್ ಮಚ್ಚು ಎಲ್ಲಿದೆ ಎಂಬುದನ್ನು ಆರೋಪಿಗಳಿಬ್ಬರು ಇನ್ನೂ ಬಾಯಿ ಬಿಟ್ಟಿಲ್ಲ.

ಮಚ್ಚು ಹಿಡಿದ ಪ್ರಕರಣ: 3 ದಿನ ಪೊಲೀಸ್ ಕಸ್ಟಡಿಗೆ ವಿನಯ್ ಗೌಡ, ರಜತ್ ಕಿಶನ್
Vinay Gowda, Rajath Kishan
ಮದನ್​ ಕುಮಾರ್​
|

Updated on: Mar 26, 2025 | 5:17 PM

Share

ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ತಪ್ಪಿಗಾಗಿ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ (Rajath Kishan) ಹಾಗೂ ವಿನಯ್ ಗೌಡ (Vinay Gowda) ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರಿಯಲ್ ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪ ಅವರ ಮೇಲಿದೆ. ಆದರೆ ಆ ಮಚ್ಚು ಎಲ್ಲಿದೆ ಎಂಬುದನ್ನು ಅವರಿಬ್ಬರು ಇನ್ನೂ ಪೊಲೀಸರಿಗೆ ತಿಳಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ  (Police Custody)ನೀಡಬೇಕು ಎಂದು ಪಬ್ಲಿಕ್​ ಪ್ರಾಸಿಕ್ಯೂಟರ್ ಹರೀಶ್‌ ಚಂದ್ರಗೌಡ ವಾದ ಮಾಡಿದರು. ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

‘ರಾತ್ರಿ ತಂದು ಫೈಬರ್ ಲಾಂಗ್ ನೀಡಿದಾಗ ನೋಟಿಸ್ ನೀಡಿ ಕಳಿಸಿದ್ದೆವು. ಬೆಳಗ್ಗೆ ಇವರು ಹಾಜರುಪಡಿಸಿದ್ದು ಬೇರೆ ಲಾಂಗ್ ಎಂದು ದೃಢಪಟ್ಟಿದೆ. ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಫೈಬರ್ ಲಾಂಗ್ ನೀಡಿದ್ದಾರೆ. ಅಸಲಿ ಮಚ್ಚನ್ನು ಸೀಜ್ ಮಾಡಬೇಕಿದೆ. ಜಪ್ತಿ ಮಾಡದೆ ತನಿಖೆ ಸಾಧ್ಯವಿಲ್ಲ. ಸೀಜ್ ಮಾಡಿ ಮಹಜರು ಮಾಡದಿದ್ದರೆ ತನಿಖೆ ಅಪೂರ್ಣವಾಗುತ್ತೆ. ಬೆಳಗ್ಗೆ 10.29ಕ್ಕೆ ವಿಚಾರಣೆಗೆ ಕರೆದರೆ ಮಧ್ಯಾಹ್ನ 2.29ಕ್ಕೆ ಬರುತ್ತಾರೆ. ಹಾಗಾಗಿ ಪೊಲೀಸ್ ಕಸ್ಟಡಿಗೆ ಇವರನ್ನು ನೀಡಬೇಕು’ ಎಂದು ಪೊಲೀಸರ ಪರ ಪಬ್ಲಿಕ್​ ಪ್ರಾಸಿಕ್ಯೂಟರ್ ಹರೀಶ್‌ ಚಂದ್ರಗೌಡ ವಾದಿಸಿದ್ದಾರೆ.

‘ರಜತ್ ಮತ್ತು ವಿನಯ್ ಭಯ ಉಂಟುಮಾಡುವ ರೀತಿಯಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ’ ಎಂದು ಪೊಲೀಸರ ಪರ ಲಾಯರ್ ವಾದಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಮೂಲಕ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರು ಫೇಮಸ್ ಆಗಿದ್ದರು. ಈಗ ರೀಲ್ಸ್ ಮಾಡಿ ಅವರು ಸಂಕಷ್ಟ ಎದುರಿಸುವಂತಾಗಿದೆ.

ಇದನ್ನೂ ಓದಿ
Image
50 ಲಕ್ಷದಲ್ಲಿ ಹನುಮಂತಗೆ ಸಿಗೋ ಹಣ ಎಷ್ಟು? ಕಟ್ ಆಗೋ ತೆರಿಗೆ ಎಷ್ಟು?
Image
ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್
Image
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
Image
BBK 11 Elimination: ಹೋಗಿ ಬಾ ಮಗಳೇ; ಐಶ್ವರ್ಯಾಗೆ ಬಿಗ್ ಬಾಸ್ ಭಾವುಕ ಮಾತು

ಇದನ್ನೂ ಓದಿ: ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ

ಪೊಲೀಸರ ತನಿಖೆಯನ್ನು ದಿಕ್ಕು ತಪ್ಪಿಸಲು ಕೂಡ ರಜತ್ ಹಾಗೂ ವಿನಯ್ ಪ್ರಯತ್ನಿಸಿದ್ದಾರೆ ಎಂಬ ಆರೋಪ ಇದೆ. ಮೊದಲು ವಿಚಾರಣೆ ಮಾಡಿದಾಗ ಆರೋಪಿಗಳು ಫೈಬರ್ ಮಚ್ಚು ನೀಡಿದ್ದರು. ಪರಿಶೀಲನೆ ನಡೆಸಿದಾಗ ರೀಲ್ಸ್​ನಲ್ಲಿ ಬಳಸಿದ ಮಚ್ಚು ಅದಲ್ಲ ಎಂಬುದು ಪತ್ತೆ ಆಯಿತು. ಹಾಗಾಗಿ ಅವರನ್ನು ಮತ್ತೆ ಕರೆದು ವಿಚಾರಣೆ ಮಾಡಲಾಯಿತು. ಮಹಜರು ವೇಳೆ ಕೂಡ ಆರೋಪಿಗಳು ರಿಯಲ್ ಮಚ್ಚು ಎಲ್ಲಿದೆ ಎಂಬುದನ್ನು ತೋರಿಸಿಲ್ಲ. ಹಾಗಾಗಿ ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ ಆರೋಪ ಸಹ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ