AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ಹಿಡಿದ ಪ್ರಕರಣ: 3 ದಿನ ಪೊಲೀಸ್ ಕಸ್ಟಡಿಗೆ ವಿನಯ್ ಗೌಡ, ರಜತ್ ಕಿಶನ್

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ. ರೀಲ್ಸ್ ಮಾಡಲು ಬಳಸಿದ್ದ ರಿಯಲ್ ಮಚ್ಚು ಎಲ್ಲಿದೆ ಎಂಬುದನ್ನು ಆರೋಪಿಗಳಿಬ್ಬರು ಇನ್ನೂ ಬಾಯಿ ಬಿಟ್ಟಿಲ್ಲ.

ಮಚ್ಚು ಹಿಡಿದ ಪ್ರಕರಣ: 3 ದಿನ ಪೊಲೀಸ್ ಕಸ್ಟಡಿಗೆ ವಿನಯ್ ಗೌಡ, ರಜತ್ ಕಿಶನ್
Vinay Gowda, Rajath Kishan
ಮದನ್​ ಕುಮಾರ್​
|

Updated on: Mar 26, 2025 | 5:17 PM

Share

ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ತಪ್ಪಿಗಾಗಿ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ (Rajath Kishan) ಹಾಗೂ ವಿನಯ್ ಗೌಡ (Vinay Gowda) ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರಿಯಲ್ ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪ ಅವರ ಮೇಲಿದೆ. ಆದರೆ ಆ ಮಚ್ಚು ಎಲ್ಲಿದೆ ಎಂಬುದನ್ನು ಅವರಿಬ್ಬರು ಇನ್ನೂ ಪೊಲೀಸರಿಗೆ ತಿಳಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ  (Police Custody)ನೀಡಬೇಕು ಎಂದು ಪಬ್ಲಿಕ್​ ಪ್ರಾಸಿಕ್ಯೂಟರ್ ಹರೀಶ್‌ ಚಂದ್ರಗೌಡ ವಾದ ಮಾಡಿದರು. ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

‘ರಾತ್ರಿ ತಂದು ಫೈಬರ್ ಲಾಂಗ್ ನೀಡಿದಾಗ ನೋಟಿಸ್ ನೀಡಿ ಕಳಿಸಿದ್ದೆವು. ಬೆಳಗ್ಗೆ ಇವರು ಹಾಜರುಪಡಿಸಿದ್ದು ಬೇರೆ ಲಾಂಗ್ ಎಂದು ದೃಢಪಟ್ಟಿದೆ. ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಫೈಬರ್ ಲಾಂಗ್ ನೀಡಿದ್ದಾರೆ. ಅಸಲಿ ಮಚ್ಚನ್ನು ಸೀಜ್ ಮಾಡಬೇಕಿದೆ. ಜಪ್ತಿ ಮಾಡದೆ ತನಿಖೆ ಸಾಧ್ಯವಿಲ್ಲ. ಸೀಜ್ ಮಾಡಿ ಮಹಜರು ಮಾಡದಿದ್ದರೆ ತನಿಖೆ ಅಪೂರ್ಣವಾಗುತ್ತೆ. ಬೆಳಗ್ಗೆ 10.29ಕ್ಕೆ ವಿಚಾರಣೆಗೆ ಕರೆದರೆ ಮಧ್ಯಾಹ್ನ 2.29ಕ್ಕೆ ಬರುತ್ತಾರೆ. ಹಾಗಾಗಿ ಪೊಲೀಸ್ ಕಸ್ಟಡಿಗೆ ಇವರನ್ನು ನೀಡಬೇಕು’ ಎಂದು ಪೊಲೀಸರ ಪರ ಪಬ್ಲಿಕ್​ ಪ್ರಾಸಿಕ್ಯೂಟರ್ ಹರೀಶ್‌ ಚಂದ್ರಗೌಡ ವಾದಿಸಿದ್ದಾರೆ.

‘ರಜತ್ ಮತ್ತು ವಿನಯ್ ಭಯ ಉಂಟುಮಾಡುವ ರೀತಿಯಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ’ ಎಂದು ಪೊಲೀಸರ ಪರ ಲಾಯರ್ ವಾದಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಮೂಲಕ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರು ಫೇಮಸ್ ಆಗಿದ್ದರು. ಈಗ ರೀಲ್ಸ್ ಮಾಡಿ ಅವರು ಸಂಕಷ್ಟ ಎದುರಿಸುವಂತಾಗಿದೆ.

ಇದನ್ನೂ ಓದಿ
Image
50 ಲಕ್ಷದಲ್ಲಿ ಹನುಮಂತಗೆ ಸಿಗೋ ಹಣ ಎಷ್ಟು? ಕಟ್ ಆಗೋ ತೆರಿಗೆ ಎಷ್ಟು?
Image
ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್
Image
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
Image
BBK 11 Elimination: ಹೋಗಿ ಬಾ ಮಗಳೇ; ಐಶ್ವರ್ಯಾಗೆ ಬಿಗ್ ಬಾಸ್ ಭಾವುಕ ಮಾತು

ಇದನ್ನೂ ಓದಿ: ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ

ಪೊಲೀಸರ ತನಿಖೆಯನ್ನು ದಿಕ್ಕು ತಪ್ಪಿಸಲು ಕೂಡ ರಜತ್ ಹಾಗೂ ವಿನಯ್ ಪ್ರಯತ್ನಿಸಿದ್ದಾರೆ ಎಂಬ ಆರೋಪ ಇದೆ. ಮೊದಲು ವಿಚಾರಣೆ ಮಾಡಿದಾಗ ಆರೋಪಿಗಳು ಫೈಬರ್ ಮಚ್ಚು ನೀಡಿದ್ದರು. ಪರಿಶೀಲನೆ ನಡೆಸಿದಾಗ ರೀಲ್ಸ್​ನಲ್ಲಿ ಬಳಸಿದ ಮಚ್ಚು ಅದಲ್ಲ ಎಂಬುದು ಪತ್ತೆ ಆಯಿತು. ಹಾಗಾಗಿ ಅವರನ್ನು ಮತ್ತೆ ಕರೆದು ವಿಚಾರಣೆ ಮಾಡಲಾಯಿತು. ಮಹಜರು ವೇಳೆ ಕೂಡ ಆರೋಪಿಗಳು ರಿಯಲ್ ಮಚ್ಚು ಎಲ್ಲಿದೆ ಎಂಬುದನ್ನು ತೋರಿಸಿಲ್ಲ. ಹಾಗಾಗಿ ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ ಆರೋಪ ಸಹ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು