AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer ‘ಹೆಣ್ಮಕ್ಳ ಮುಟ್ಟಿದ್ರೆ ಸರಿ ಇರಲ್ಲ’; ಕಪಾಳ ಮೋಕ್ಷದ ಬಳಿಕ ಸಾನ್ಯಾ ಐಯ್ಯರ್ ತರಾಟೆ

ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ಕಳೆದ ವರ್ಷ ಅವರು ಬಿಗ್ ಬಾಸ್ ಒಟಿಟಿ ಹಾಗೂ ಟಿವಿ ಸೀಸನ್​ನಲ್ಲಿ ಮಿಂಚಿದರು. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ.

Sanya Iyer ‘ಹೆಣ್ಮಕ್ಳ ಮುಟ್ಟಿದ್ರೆ ಸರಿ ಇರಲ್ಲ’; ಕಪಾಳ ಮೋಕ್ಷದ ಬಳಿಕ ಸಾನ್ಯಾ ಐಯ್ಯರ್ ತರಾಟೆ
ಸಾನ್ಯಾ ಐಯ್ಯರ್​ (ಚಿತ್ರ: ಇನ್​ಸ್ಟಾಗ್ರಾಮ್)
ರಾಜೇಶ್ ದುಗ್ಗುಮನೆ
|

Updated on:Jan 31, 2023 | 12:43 PM

Share

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ವಿವಾದದ ಮೂಲಕ ಈಗ ಸುದ್ದಿ ಆಗಿದ್ದಾರೆ. ಇತ್ತೀಚೆಗೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದ ಕಂಬಳದಲ್ಲಿ ಸಾನ್ಯಾ ಭಾಗಿ ಆಗಿದ್ದರು. ಆ ಸಂದರ್ಭದಲ್ಲಿ ಕೈ ಹಿಡಿದು ಎಳೆದ ಯುವಕನಿಗೆ ಸಾನ್ಯಾ ಕಪಾಳ ಮೋಕ್ಷ ಮಾಡಿದ್ದಾರೆ. ಅಷ್ಟೇ ಅಲ್ಲ ಕಂಬಳ ಆಯೋಜಕರ ಜತೆಗೆ ಅವರು ಜಗಳಕ್ಕೆ ಇಳಿದಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಈ ವಿಡಿಯೋ ಲಭ್ಯವಾಗಿದೆ.

ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ಕಳೆದ ವರ್ಷ ಅವರು ಬಿಗ್ ಬಾಸ್ ಒಟಿಟಿ ಹಾಗೂ ಟಿವಿ ಸೀಸನ್​ನಲ್ಲಿ ಮಿಂಚಿದರು. ರೂಪೇಶ್ ಶೆಟ್ಟಿ ಜತೆಗಿನ ಫ್ರೆಂಡ್​ಶಿಪ್​ ಕಾರಣಕ್ಕೂ ಅವರು ಸುದ್ದಿ ಆದರು. ದೊಡ್ಮನೆಯಿಂದ ಹೊರ ಬಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ.

ಶನಿವಾರ (ಜ.28) ಪುತ್ತೂರಿನ ಕೋಟಿ ಚನ್ನಯ್ಯ ಜೋಡುಕೆರೆ ಕಂಬಳಕ್ಕೆ ಸಾನ್ಯಾ ಐಯ್ಯರ್ ಅತಿಥಿಯಾಗಿ ತೆರಳಿದ್ದರು. ಮಧ್ಯರಾತ್ರಿ ಸ್ನೇಹಿತರೊಂದಿಗೆ ಮತ್ತೆ ಕಂಬಳ ನೋಡಲು ಅವರು ಆಗಮಿಸಿದ್ದರು. ಅವರನ್ನು ನೋಡುತ್ತಿದ್ದಂತೆ ಒಂದಷ್ಟು ಮಂದಿ ಸೆಲ್ಫಿ ತೆಗೆದುಕೊಳ್ಳೋಕೆ ಮುಂದೆ ಬಂದಿದ್ದರು. ಆಗ ಯುವಕನೋರ್ವ ಸಾನ್ಯಾ ಅವರ ಕೈಹಿಡಿದು ಎಳೆದಿದ್ದ. ಕೋಪಗೊಂಡ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದರು. ಸಿಟ್ಟಾದ ಆತ ಮರಳಿ ಸಾನ್ಯಾ ಕೆನ್ನೆಗೆ ಬಾರಿಸಿದ್ದ. ಈ ಘಟನೆ ಬೆನ್ನಲ್ಲೇ ಸ್ಥಳೀಯರು ಯುವಕನಿಗೆ ಹೊಡೆದಿದ್ದಾರೆ.

ಇದನ್ನೂ ಓದಿ: ಪದವಿ ಪಡೆದ ಖುಷಿಯಲ್ಲಿ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಫೋಟೋ ಗ್ಯಾಲರಿ

ಕಪಾಳ ಮೋಕ್ಷದ ಘಟನೆಯಿಂದ ಸಾನ್ಯಾ ಕೋಪಗೊಂಡಿದ್ದಾರೆ. ಕಂಬಳ ಆಯೋಜಕರನ್ನು ಸಾನ್ಯಾ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಹೆಣ್ಣುಮಕ್ಕಳ ಮೈ ಮುಟ್ಟಿದ್ರೆ ಸರಿ ಇರಲ್ಲ’ ಎಂದು ಸಾನ್ಯಾ ಕೂಗಾಡಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:29 pm, Tue, 31 January 23

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ