Sanya Iyer ‘ಹೆಣ್ಮಕ್ಳ ಮುಟ್ಟಿದ್ರೆ ಸರಿ ಇರಲ್ಲ’; ಕಪಾಳ ಮೋಕ್ಷದ ಬಳಿಕ ಸಾನ್ಯಾ ಐಯ್ಯರ್ ತರಾಟೆ

ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ಕಳೆದ ವರ್ಷ ಅವರು ಬಿಗ್ ಬಾಸ್ ಒಟಿಟಿ ಹಾಗೂ ಟಿವಿ ಸೀಸನ್​ನಲ್ಲಿ ಮಿಂಚಿದರು. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ.

Sanya Iyer ‘ಹೆಣ್ಮಕ್ಳ ಮುಟ್ಟಿದ್ರೆ ಸರಿ ಇರಲ್ಲ’; ಕಪಾಳ ಮೋಕ್ಷದ ಬಳಿಕ ಸಾನ್ಯಾ ಐಯ್ಯರ್ ತರಾಟೆ
ಸಾನ್ಯಾ ಐಯ್ಯರ್​ (ಚಿತ್ರ: ಇನ್​ಸ್ಟಾಗ್ರಾಮ್)
Follow us
|

Updated on:Jan 31, 2023 | 12:43 PM

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ವಿವಾದದ ಮೂಲಕ ಈಗ ಸುದ್ದಿ ಆಗಿದ್ದಾರೆ. ಇತ್ತೀಚೆಗೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದ ಕಂಬಳದಲ್ಲಿ ಸಾನ್ಯಾ ಭಾಗಿ ಆಗಿದ್ದರು. ಆ ಸಂದರ್ಭದಲ್ಲಿ ಕೈ ಹಿಡಿದು ಎಳೆದ ಯುವಕನಿಗೆ ಸಾನ್ಯಾ ಕಪಾಳ ಮೋಕ್ಷ ಮಾಡಿದ್ದಾರೆ. ಅಷ್ಟೇ ಅಲ್ಲ ಕಂಬಳ ಆಯೋಜಕರ ಜತೆಗೆ ಅವರು ಜಗಳಕ್ಕೆ ಇಳಿದಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಈ ವಿಡಿಯೋ ಲಭ್ಯವಾಗಿದೆ.

ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ಕಳೆದ ವರ್ಷ ಅವರು ಬಿಗ್ ಬಾಸ್ ಒಟಿಟಿ ಹಾಗೂ ಟಿವಿ ಸೀಸನ್​ನಲ್ಲಿ ಮಿಂಚಿದರು. ರೂಪೇಶ್ ಶೆಟ್ಟಿ ಜತೆಗಿನ ಫ್ರೆಂಡ್​ಶಿಪ್​ ಕಾರಣಕ್ಕೂ ಅವರು ಸುದ್ದಿ ಆದರು. ದೊಡ್ಮನೆಯಿಂದ ಹೊರ ಬಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ.

ಶನಿವಾರ (ಜ.28) ಪುತ್ತೂರಿನ ಕೋಟಿ ಚನ್ನಯ್ಯ ಜೋಡುಕೆರೆ ಕಂಬಳಕ್ಕೆ ಸಾನ್ಯಾ ಐಯ್ಯರ್ ಅತಿಥಿಯಾಗಿ ತೆರಳಿದ್ದರು. ಮಧ್ಯರಾತ್ರಿ ಸ್ನೇಹಿತರೊಂದಿಗೆ ಮತ್ತೆ ಕಂಬಳ ನೋಡಲು ಅವರು ಆಗಮಿಸಿದ್ದರು. ಅವರನ್ನು ನೋಡುತ್ತಿದ್ದಂತೆ ಒಂದಷ್ಟು ಮಂದಿ ಸೆಲ್ಫಿ ತೆಗೆದುಕೊಳ್ಳೋಕೆ ಮುಂದೆ ಬಂದಿದ್ದರು. ಆಗ ಯುವಕನೋರ್ವ ಸಾನ್ಯಾ ಅವರ ಕೈಹಿಡಿದು ಎಳೆದಿದ್ದ. ಕೋಪಗೊಂಡ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದರು. ಸಿಟ್ಟಾದ ಆತ ಮರಳಿ ಸಾನ್ಯಾ ಕೆನ್ನೆಗೆ ಬಾರಿಸಿದ್ದ. ಈ ಘಟನೆ ಬೆನ್ನಲ್ಲೇ ಸ್ಥಳೀಯರು ಯುವಕನಿಗೆ ಹೊಡೆದಿದ್ದಾರೆ.

ಇದನ್ನೂ ಓದಿ: ಪದವಿ ಪಡೆದ ಖುಷಿಯಲ್ಲಿ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಫೋಟೋ ಗ್ಯಾಲರಿ

ಕಪಾಳ ಮೋಕ್ಷದ ಘಟನೆಯಿಂದ ಸಾನ್ಯಾ ಕೋಪಗೊಂಡಿದ್ದಾರೆ. ಕಂಬಳ ಆಯೋಜಕರನ್ನು ಸಾನ್ಯಾ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಹೆಣ್ಣುಮಕ್ಕಳ ಮೈ ಮುಟ್ಟಿದ್ರೆ ಸರಿ ಇರಲ್ಲ’ ಎಂದು ಸಾನ್ಯಾ ಕೂಗಾಡಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:29 pm, Tue, 31 January 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್