AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer ‘ಹೆಣ್ಮಕ್ಳ ಮುಟ್ಟಿದ್ರೆ ಸರಿ ಇರಲ್ಲ’; ಕಪಾಳ ಮೋಕ್ಷದ ಬಳಿಕ ಸಾನ್ಯಾ ಐಯ್ಯರ್ ತರಾಟೆ

ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ಕಳೆದ ವರ್ಷ ಅವರು ಬಿಗ್ ಬಾಸ್ ಒಟಿಟಿ ಹಾಗೂ ಟಿವಿ ಸೀಸನ್​ನಲ್ಲಿ ಮಿಂಚಿದರು. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ.

Sanya Iyer ‘ಹೆಣ್ಮಕ್ಳ ಮುಟ್ಟಿದ್ರೆ ಸರಿ ಇರಲ್ಲ’; ಕಪಾಳ ಮೋಕ್ಷದ ಬಳಿಕ ಸಾನ್ಯಾ ಐಯ್ಯರ್ ತರಾಟೆ
ಸಾನ್ಯಾ ಐಯ್ಯರ್​ (ಚಿತ್ರ: ಇನ್​ಸ್ಟಾಗ್ರಾಮ್)
ರಾಜೇಶ್ ದುಗ್ಗುಮನೆ
|

Updated on:Jan 31, 2023 | 12:43 PM

Share

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ವಿವಾದದ ಮೂಲಕ ಈಗ ಸುದ್ದಿ ಆಗಿದ್ದಾರೆ. ಇತ್ತೀಚೆಗೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದ ಕಂಬಳದಲ್ಲಿ ಸಾನ್ಯಾ ಭಾಗಿ ಆಗಿದ್ದರು. ಆ ಸಂದರ್ಭದಲ್ಲಿ ಕೈ ಹಿಡಿದು ಎಳೆದ ಯುವಕನಿಗೆ ಸಾನ್ಯಾ ಕಪಾಳ ಮೋಕ್ಷ ಮಾಡಿದ್ದಾರೆ. ಅಷ್ಟೇ ಅಲ್ಲ ಕಂಬಳ ಆಯೋಜಕರ ಜತೆಗೆ ಅವರು ಜಗಳಕ್ಕೆ ಇಳಿದಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಈ ವಿಡಿಯೋ ಲಭ್ಯವಾಗಿದೆ.

ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ಕಳೆದ ವರ್ಷ ಅವರು ಬಿಗ್ ಬಾಸ್ ಒಟಿಟಿ ಹಾಗೂ ಟಿವಿ ಸೀಸನ್​ನಲ್ಲಿ ಮಿಂಚಿದರು. ರೂಪೇಶ್ ಶೆಟ್ಟಿ ಜತೆಗಿನ ಫ್ರೆಂಡ್​ಶಿಪ್​ ಕಾರಣಕ್ಕೂ ಅವರು ಸುದ್ದಿ ಆದರು. ದೊಡ್ಮನೆಯಿಂದ ಹೊರ ಬಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ.

ಶನಿವಾರ (ಜ.28) ಪುತ್ತೂರಿನ ಕೋಟಿ ಚನ್ನಯ್ಯ ಜೋಡುಕೆರೆ ಕಂಬಳಕ್ಕೆ ಸಾನ್ಯಾ ಐಯ್ಯರ್ ಅತಿಥಿಯಾಗಿ ತೆರಳಿದ್ದರು. ಮಧ್ಯರಾತ್ರಿ ಸ್ನೇಹಿತರೊಂದಿಗೆ ಮತ್ತೆ ಕಂಬಳ ನೋಡಲು ಅವರು ಆಗಮಿಸಿದ್ದರು. ಅವರನ್ನು ನೋಡುತ್ತಿದ್ದಂತೆ ಒಂದಷ್ಟು ಮಂದಿ ಸೆಲ್ಫಿ ತೆಗೆದುಕೊಳ್ಳೋಕೆ ಮುಂದೆ ಬಂದಿದ್ದರು. ಆಗ ಯುವಕನೋರ್ವ ಸಾನ್ಯಾ ಅವರ ಕೈಹಿಡಿದು ಎಳೆದಿದ್ದ. ಕೋಪಗೊಂಡ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದರು. ಸಿಟ್ಟಾದ ಆತ ಮರಳಿ ಸಾನ್ಯಾ ಕೆನ್ನೆಗೆ ಬಾರಿಸಿದ್ದ. ಈ ಘಟನೆ ಬೆನ್ನಲ್ಲೇ ಸ್ಥಳೀಯರು ಯುವಕನಿಗೆ ಹೊಡೆದಿದ್ದಾರೆ.

ಇದನ್ನೂ ಓದಿ: ಪದವಿ ಪಡೆದ ಖುಷಿಯಲ್ಲಿ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಫೋಟೋ ಗ್ಯಾಲರಿ

ಕಪಾಳ ಮೋಕ್ಷದ ಘಟನೆಯಿಂದ ಸಾನ್ಯಾ ಕೋಪಗೊಂಡಿದ್ದಾರೆ. ಕಂಬಳ ಆಯೋಜಕರನ್ನು ಸಾನ್ಯಾ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಹೆಣ್ಣುಮಕ್ಕಳ ಮೈ ಮುಟ್ಟಿದ್ರೆ ಸರಿ ಇರಲ್ಲ’ ಎಂದು ಸಾನ್ಯಾ ಕೂಗಾಡಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:29 pm, Tue, 31 January 23

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ