AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಕ್​ ಟು ಬ್ಯಾಕ್ ಮೂರು ಚಿತ್ರಕ್ಕೆ ವಿನಯ್ ಗೌಡ ಸಹಿ; ಸ್ಟಾರ್ ಹೀರೋಗೆ ಖಡಕ್ ವಿಲನ್

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಸಾಕಷ್ಟು ಆಫರ್​ಗಳು ಬರುತ್ತವೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವಿನಯ್ ಗೌಡ ಅವರನ್ನು ಅರಸಿ ಸಾಕಷ್ಟು ಸಿನಿಮಾ ಆಫರ್​ಗಳು ಬಂದಿವೆ. ಈ ಪೈಕಿ ಮೂರು ಸಿನಿಮಾಗಳಿಗೆ ವಿಲನ್ ಆಗಿ ಅವರು ಸಹಿ ಹಾಕಿದ್ದಾರೆ.

ಬ್ಯಾಕ್​ ಟು ಬ್ಯಾಕ್ ಮೂರು ಚಿತ್ರಕ್ಕೆ ವಿನಯ್ ಗೌಡ ಸಹಿ; ಸ್ಟಾರ್ ಹೀರೋಗೆ ಖಡಕ್ ವಿಲನ್
ವಿನಯ್ ಗೌಡ
ರಾಜೇಶ್ ದುಗ್ಗುಮನೆ
|

Updated on: Apr 29, 2024 | 2:41 PM

Share

ನಟ ವಿನಯ್ ಗೌಡ (Vinay Gowda) ಅವರು ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಶಿವನ ಪಾತ್ರ ಮಾಡಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆಫರ್ ಬಂತು. ಇದನ್ನು ಅವರು ಒಪ್ಪಿದರು. ಬಿಗ್ ಬಾಸ್ ಮನೆಯಲ್ಲಿ ಅವರು ಸಾಕಷ್ಟು ಗಮನ ಸೆಳೆದರು. ಟಾಸ್ಕ್​ಗಳಲ್ಲಿ ಆಡಿ ಮೆಚ್ಚುಗೆ ಪಡೆದ ಅವರು, ಜಗಳ ಮಾಡಿಕೊಂಡೂ ಸುದ್ದಿ ಆದರು. ಬಿಗ್ ಬಾಸ್​ನಿಂದ ಹೊರ ಬಂದ ಅವರಿಗೆ ಜನರು ಸಾಕಷ್ಟು ಪ್ರೀತಿ ನೀಡುತ್ತಿದ್ದಾರೆ. ವಿಶೇಷ ಎಂದರೆ ಈಗ ಅವರಿಗೆ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಬಂದಿವೆ. ಮೂರು ಸಿನಿಮಾಗಳಿಗೆ ವಿಲನ್ ಆಗಿ ವಿನಯ್ ಸಹಿ ಹಾಕಿದ್ದಾರೆ.

‘ಬಿಗ್ ಬಾಸ್’ ಅನೇಕರ ಬದುಕನ್ನು ಬದಲಿಸಿದೆ. ಇದರಲ್ಲಿ ವಿನಯ್ ಅವರ ಹೆಸರು ಸೇರ್ಪಡೆ ಆಗಿದೆ. ತಮಗೆ ಬಂದ ಸಿನಿಮಾ ಆಫರ್​ಗಳ ಬಗ್ಗೆ, ಬದುಕು ಬದಲಾದ ಬಗ್ಗೆ ಅವರು ‘ಟಿವಿ9 ಕನ್ನಡ ಡಿಜಿಟಲ್’ ಜೊತೆ ಮಾತನಾಡಿದ್ದಾರೆ. ‘ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ವ್ಯಕ್ತಿಗಳವರೆಗೆ ಎಲ್ಲರೂ ನನ್ನನ್ನು ಗುರುತಿಸಿದ್ದಾರೆ. ಪ್ರತಿಯೊಬ್ಬರ ಬಾಯಲ್ಲೂ ನನ್ನ ಹೆಸರು ಇದೆ’ ಎಂದಿದ್ದಾರೆ ವಿನಯ್.

ವಿನಯ್ ಗೌಡ ಅವರು ಈಗಾಗಲೇ ಕೆಲವು ಧಾರಾವಾಹಿಗಳಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಸದ್ಯಕ್ಕೆ ಅವರು ಕಿರುತೆರೆಯಲ್ಲಿ ಲೀಡ್​ರೋಲ್ ಮಾಡೋ ಆಲೋಚನೆಯಲ್ಲಿ ಇಲ್ಲ. ಅವರಿಗೆ ಕೈ ತುಂಬಾ ಸಿನಿಮಾ ಆಫರ್​ಗಳು ಸಿಕ್ಕಿವೆ. ‘ಕನ್ನಡದಲ್ಲಿ ಎರಡು ದೊಡ್ಡ ಸಿನಿಮಾ ಸಹಿ ಮಾಡಿದ್ದೇನೆ. ತಮಿಳಿನ ಒಂದು ಸಿನಿಮಾ ಕೆಲಸ ನಡೆಯುತ್ತಿದೆ. ತೆಲುಗಿನ ಒಂದು ಚಿತ್ರದ ಜೊತೆ ಮಾತುಕತೆ ನಡೆಯುತ್ತಿದೆ’ ಎಂದಿದ್ದಾರೆ ವಿನಯ್ ಗೌಡ.

ಧಾರಾವಾಹಿ ಒಪ್ಪಿಕೊಂಡರೆ ಬೇರೆ ವಿಷಯಗಳ ಮೇಲೆ ಗಮನ ಹರಿಸೋಕೆ ಆಗಲ್ಲ ಅನ್ನೋದು ವಿನಯ್ ಅಭಿಪ್ರಾಯ. ಕನ್ನಡದಿಂದ ಬಂದಿರೋ ಎರಡೂ ಆಫರ್​​ಗಳು ದೊಡ್ಡ ಸಿನಿಮಾಗಳು. ಇದರಲ್ಲಿ ಸ್ಟಾರ್ ಹೀರೋಗಳು ನಟಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಹೀರೋ ಆಗಿಯೂ ಅವರಿಗೆ ಆಫರ್ ಬರುತ್ತಿದೆ. ‘ಪ್ರೊಡಕ್ಷನ್ ಕಡೆಯಿಂದ ಶೀಘ್ರವೇ ಈ ಬಗ್ಗೆ ಅನೌನ್ಸ್ ಆಗಲಿದೆ’ ಎಂದಿದ್ದಾರೆ ವಿನಯ್.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

‘ಒಂದು ಕರೆಕ್ಟ್ ಆಗಿರೋ ಚಾನ್ಸ್ ಹಾಗೂ ಪಾತ್ರ ಸಿಗಬೇಕು. ಬಂದಿರೋ ಎರಡೂ ಸಿನಿಮಾಗಳು ದೊಡ್ಡ ಸ್ಟಾರ್​ಗಳ ಸಿನಿಮಾ. ಇದಾದ ಬಳಿಕ ಸಿನಿಮಾ ಇಂಡಸ್ಟ್ರಿಯಲ್ಲಿ ನನ್ನ ಫ್ಯೂಚರ್ ಚೆನ್ನಾಗಿರುತ್ತೆ ಎಂದು ನಾನು ಭಾವಿಸಿದ್ದೇನೆ. ನನ್ನ ಮೇಲೆ ನನಗೆ ನಂಬಿಕೆ ಇದೆ’ ಎಂದಿದ್ದಾರೆ ವಿನಯ್ ಗೌಡ. ಈ ಪಾತ್ರಗಳಿಗೆ ಅಗತ್ಯ ಇರೋ ಸಿದ್ಧತೆಯನ್ನು ಅವರು ಮಾಡಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಖಡಕ್ ವಿಲನ್ ಆಗಬೇಕು ಎಂದು ಅವರು ಕನಸು ಕಾಣುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ