ಬ್ಯಾಕ್​ ಟು ಬ್ಯಾಕ್ ಮೂರು ಚಿತ್ರಕ್ಕೆ ವಿನಯ್ ಗೌಡ ಸಹಿ; ಸ್ಟಾರ್ ಹೀರೋಗೆ ಖಡಕ್ ವಿಲನ್

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಸಾಕಷ್ಟು ಆಫರ್​ಗಳು ಬರುತ್ತವೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವಿನಯ್ ಗೌಡ ಅವರನ್ನು ಅರಸಿ ಸಾಕಷ್ಟು ಸಿನಿಮಾ ಆಫರ್​ಗಳು ಬಂದಿವೆ. ಈ ಪೈಕಿ ಮೂರು ಸಿನಿಮಾಗಳಿಗೆ ವಿಲನ್ ಆಗಿ ಅವರು ಸಹಿ ಹಾಕಿದ್ದಾರೆ.

ಬ್ಯಾಕ್​ ಟು ಬ್ಯಾಕ್ ಮೂರು ಚಿತ್ರಕ್ಕೆ ವಿನಯ್ ಗೌಡ ಸಹಿ; ಸ್ಟಾರ್ ಹೀರೋಗೆ ಖಡಕ್ ವಿಲನ್
ವಿನಯ್ ಗೌಡ
Follow us
|

Updated on: Apr 29, 2024 | 2:41 PM

ನಟ ವಿನಯ್ ಗೌಡ (Vinay Gowda) ಅವರು ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಶಿವನ ಪಾತ್ರ ಮಾಡಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆಫರ್ ಬಂತು. ಇದನ್ನು ಅವರು ಒಪ್ಪಿದರು. ಬಿಗ್ ಬಾಸ್ ಮನೆಯಲ್ಲಿ ಅವರು ಸಾಕಷ್ಟು ಗಮನ ಸೆಳೆದರು. ಟಾಸ್ಕ್​ಗಳಲ್ಲಿ ಆಡಿ ಮೆಚ್ಚುಗೆ ಪಡೆದ ಅವರು, ಜಗಳ ಮಾಡಿಕೊಂಡೂ ಸುದ್ದಿ ಆದರು. ಬಿಗ್ ಬಾಸ್​ನಿಂದ ಹೊರ ಬಂದ ಅವರಿಗೆ ಜನರು ಸಾಕಷ್ಟು ಪ್ರೀತಿ ನೀಡುತ್ತಿದ್ದಾರೆ. ವಿಶೇಷ ಎಂದರೆ ಈಗ ಅವರಿಗೆ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಬಂದಿವೆ. ಮೂರು ಸಿನಿಮಾಗಳಿಗೆ ವಿಲನ್ ಆಗಿ ವಿನಯ್ ಸಹಿ ಹಾಕಿದ್ದಾರೆ.

‘ಬಿಗ್ ಬಾಸ್’ ಅನೇಕರ ಬದುಕನ್ನು ಬದಲಿಸಿದೆ. ಇದರಲ್ಲಿ ವಿನಯ್ ಅವರ ಹೆಸರು ಸೇರ್ಪಡೆ ಆಗಿದೆ. ತಮಗೆ ಬಂದ ಸಿನಿಮಾ ಆಫರ್​ಗಳ ಬಗ್ಗೆ, ಬದುಕು ಬದಲಾದ ಬಗ್ಗೆ ಅವರು ‘ಟಿವಿ9 ಕನ್ನಡ ಡಿಜಿಟಲ್’ ಜೊತೆ ಮಾತನಾಡಿದ್ದಾರೆ. ‘ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ವ್ಯಕ್ತಿಗಳವರೆಗೆ ಎಲ್ಲರೂ ನನ್ನನ್ನು ಗುರುತಿಸಿದ್ದಾರೆ. ಪ್ರತಿಯೊಬ್ಬರ ಬಾಯಲ್ಲೂ ನನ್ನ ಹೆಸರು ಇದೆ’ ಎಂದಿದ್ದಾರೆ ವಿನಯ್.

ವಿನಯ್ ಗೌಡ ಅವರು ಈಗಾಗಲೇ ಕೆಲವು ಧಾರಾವಾಹಿಗಳಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಸದ್ಯಕ್ಕೆ ಅವರು ಕಿರುತೆರೆಯಲ್ಲಿ ಲೀಡ್​ರೋಲ್ ಮಾಡೋ ಆಲೋಚನೆಯಲ್ಲಿ ಇಲ್ಲ. ಅವರಿಗೆ ಕೈ ತುಂಬಾ ಸಿನಿಮಾ ಆಫರ್​ಗಳು ಸಿಕ್ಕಿವೆ. ‘ಕನ್ನಡದಲ್ಲಿ ಎರಡು ದೊಡ್ಡ ಸಿನಿಮಾ ಸಹಿ ಮಾಡಿದ್ದೇನೆ. ತಮಿಳಿನ ಒಂದು ಸಿನಿಮಾ ಕೆಲಸ ನಡೆಯುತ್ತಿದೆ. ತೆಲುಗಿನ ಒಂದು ಚಿತ್ರದ ಜೊತೆ ಮಾತುಕತೆ ನಡೆಯುತ್ತಿದೆ’ ಎಂದಿದ್ದಾರೆ ವಿನಯ್ ಗೌಡ.

ಧಾರಾವಾಹಿ ಒಪ್ಪಿಕೊಂಡರೆ ಬೇರೆ ವಿಷಯಗಳ ಮೇಲೆ ಗಮನ ಹರಿಸೋಕೆ ಆಗಲ್ಲ ಅನ್ನೋದು ವಿನಯ್ ಅಭಿಪ್ರಾಯ. ಕನ್ನಡದಿಂದ ಬಂದಿರೋ ಎರಡೂ ಆಫರ್​​ಗಳು ದೊಡ್ಡ ಸಿನಿಮಾಗಳು. ಇದರಲ್ಲಿ ಸ್ಟಾರ್ ಹೀರೋಗಳು ನಟಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಹೀರೋ ಆಗಿಯೂ ಅವರಿಗೆ ಆಫರ್ ಬರುತ್ತಿದೆ. ‘ಪ್ರೊಡಕ್ಷನ್ ಕಡೆಯಿಂದ ಶೀಘ್ರವೇ ಈ ಬಗ್ಗೆ ಅನೌನ್ಸ್ ಆಗಲಿದೆ’ ಎಂದಿದ್ದಾರೆ ವಿನಯ್.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

‘ಒಂದು ಕರೆಕ್ಟ್ ಆಗಿರೋ ಚಾನ್ಸ್ ಹಾಗೂ ಪಾತ್ರ ಸಿಗಬೇಕು. ಬಂದಿರೋ ಎರಡೂ ಸಿನಿಮಾಗಳು ದೊಡ್ಡ ಸ್ಟಾರ್​ಗಳ ಸಿನಿಮಾ. ಇದಾದ ಬಳಿಕ ಸಿನಿಮಾ ಇಂಡಸ್ಟ್ರಿಯಲ್ಲಿ ನನ್ನ ಫ್ಯೂಚರ್ ಚೆನ್ನಾಗಿರುತ್ತೆ ಎಂದು ನಾನು ಭಾವಿಸಿದ್ದೇನೆ. ನನ್ನ ಮೇಲೆ ನನಗೆ ನಂಬಿಕೆ ಇದೆ’ ಎಂದಿದ್ದಾರೆ ವಿನಯ್ ಗೌಡ. ಈ ಪಾತ್ರಗಳಿಗೆ ಅಗತ್ಯ ಇರೋ ಸಿದ್ಧತೆಯನ್ನು ಅವರು ಮಾಡಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಖಡಕ್ ವಿಲನ್ ಆಗಬೇಕು ಎಂದು ಅವರು ಕನಸು ಕಾಣುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ