AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಮನೆಯಲ್ಲಿ ಸ್ಪೆಷಲ್ ಟಾಸ್ಕ್; ಎರಡು ತಂಡಗಳ ಮಧ್ಯೆ ಗೆದ್ದವರು ಯಾರು?

ಮೊದಲು ಸ್ಪರ್ಧೆಗೆ ಇಳಿದಿದ್ದು ರಣಶಕ್ತಿ ಟೀಂನ ಸಂಗೀತಾ ಶೃಂಗೇರಿ. ಅವರ ಕಣ್ಣಿಗೆ ಪಟ್ಟಿಕಟ್ಟಿದ್ದು ವಿನಯ್. ಸಂಗೀತಾಗೆ ಮಾರ್ಗದರ್ಶನ ನೀಡಿದ್ದು ತನಿಷಾ. ಸಂಗೀತಾ ಬಾಲ ಬಿಡಿಸಿದರು. ಆ ಬಳಿಕ ಮಾಣಿಕ್ಯ ತಂಡದಿಂದ ನಮ್ರತಾ ಅಖಾಡಕ್ಕೆ ಇಳಿದರು. ಅವರು ಕೂಡ ಕಷ್ಟಪಟ್ಟು ಬಾಲ ಬಿಡಿಸಿದರು.

‘ಬಿಗ್ ಬಾಸ್’ ಮನೆಯಲ್ಲಿ ಸ್ಪೆಷಲ್ ಟಾಸ್ಕ್; ಎರಡು ತಂಡಗಳ ಮಧ್ಯೆ ಗೆದ್ದವರು ಯಾರು?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 22, 2023 | 1:30 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಸಾಕಷ್ಟು ಟಾಸ್ಕ್ ನೀಡಲಾಗುತ್ತದೆ. ಪ್ರತಿ ಟಾಸ್ಕ್​ಗಳೂ ವಿಶೇಷವಾಗಿರುತ್ತವೆ. ಬಿಗ್ ಬಾಸ್ ಮನೆಯಲ್ಲಿ ರಣಶಕ್ತಿ ಮತ್ತು ಮಾಣಿಕ್ಯ ಹೆಸರಿನ ತಂಡಗಳಿವೆ. ಇಬ್ಬರಿಗೂ ಒಂದು ಸ್ಪೆಷಲ್ ಟಾಸ್ಕ್ ನೀಡಲಾಗಿತ್ತು. ಬಿಗ್‌ಬಾಸ್‌ ಹಾಗೂ ಜಿಯೋ ಸಿನಿಮಾ ಕಡೆಯಿಂದ ಈ ಟಾಸ್ಕ್‌ ಕೊಡಲಾಗಿತ್ತು. ‘ಹೂಂ ಅಂತಿಯಾ ಊಹೂಂ ಅಂತಿಯಾ?’ ಎಂಬುದು ಈ ಟಾಸ್ಕ್​ನ ಹೆಸರು.

ಆಟದ ಸ್ವರೂಪ ಹಾಗೂ ನಿಯಮಗಳನ್ನು ಬಿಗ್ ಬಾಸ್ ನೀಡಿದ್ದರು. ಆಡುವ ಪ್ರತಿ ಸದಸ್ಯರು ಕಣ್ಣಿಗೆ ಪಟ್ಟಿಕೊಳ್ಳಬೇಕು. ಆರಂಭದಿಂದ ಅಂತಿಮ ಸ್ಥಾನಕ್ಕೆ ಬಂದು ಆನೆಯ ಚಿತ್ರಕ್ಕೆ ಬಾಲ ಬಿಡಿಸಬೇಕು. ಆಡುವ ಸದಸ್ಯ ಸಾಗುತ್ತಿರುವ ಹಾದಿ ಸರಿಯಾಗಿ ಇದೆಯೋ ಅಥವಾ ಇಲ್ಲವೋ ಎನ್ನುವುದನ್ನು ತಂಡದವರು ವಿವರಿಸಬೇಕು. ಈ ಟಾಸ್ಕ್​ನಲ್ಲಿ ಅತಿ ಹೆಚ್ಚು ಬಾರಿ ಸರಿಯಾಗಿ ಬಾಲ ಬಿಡಿಸಿದ ತಂಡ ಈ ಟಾಸ್ಕ್ ಗೆಲ್ಲುತ್ತದೆ.

ಮೊದಲು ಸ್ಪರ್ಧೆಗೆ ಇಳಿದಿದ್ದು ರಣಶಕ್ತಿ ಟೀಂನ ಸಂಗೀತಾ ಶೃಂಗೇರಿ. ಅವರ ಕಣ್ಣಿಗೆ ಪಟ್ಟಿಕಟ್ಟಿದ್ದು ವಿನಯ್. ಸಂಗೀತಾಗೆ ಮಾರ್ಗದರ್ಶನ ನೀಡಿದ್ದು ತನಿಷಾ. ಸಂಗೀತಾ ಬಾಲ ಬಿಡಿಸಿದರು. ಆ ಬಳಿಕ ಮಾಣಿಕ್ಯ ತಂಡದಿಂದ ನಮ್ರತಾ ಅಖಾಡಕ್ಕೆ ಇಳಿದರು. ಅವರು ಕೂಡ ಕಷ್ಟಪಟ್ಟು ಬಾಲ ಬಿಡಿಸಿದರು. ನಂತರ ರಣಶಕ್ತಿ ಮತ್ತು ಮಾಣಿಕ್ಯ ತಂಡದ ನೀತು, ಇಶಾನಿ, ವರ್ತೂರು ಸಂತೋಷ್, ಸಿರಿ ಯಶಸ್ವಿಯಾಗಿ ಬಾಲ ಬಿಡಿಸಿದರು. ತುಕಾಲಿ ಸಂತೋಷ್, ಭಾಗ್ಯಶ್ರಿ, ಬುಲೆಟ್ ರಕ್ಷಕ್ ದಾರಿ ತಪ್ಪಿದರೂ ನಂತರ ಸರಿಯಾಗಿ ಬಾಲ ಬಿಡಿಸಿದರು.

ಇದನ್ನೂ ಓದಿ: ‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ

ಹಲವಾರು ಫನ್ ಮೂಮೆಂಟ್​ಗೆ ಈ ಟಾಸ್ಕ್​ ಸಾಕ್ಷಿ ಆಯಿತು. ಸ್ಪರ್ಧಿಗಳೂ ಈ ಆಟವನ್ನು ಎಂಜಾಯ್ ಮಾಡಿದರು. ಈ ಸ್ಪರ್ಧೆಯಲ್ಲಿ ರಣಶಕ್ತಿ ತಂಡ ಗೆದ್ದಿದೆ. ಈ ರೀತಿಯ ಫನ್ ಗೇಮ್‌ನ ಜಿಯೋ ಸಿನಿಮಾದ ಫನ್ ಫ್ರೈಡೇ ಸೆಗ್ಮೆಂಟ್‌ನಲ್ಲಿ ವೀಕ್ಷಿಸಬಹುದು.

ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್