AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ಗೆ ಕೈದಿ ನಂಬರ್ ನೀಡಿದ ಜೈಲಿನ ಅಧಿಕಾರಿಗಳು

ಅನರ್ಹರ ಸಾಲಿನಲ್ಲಿ ಅವರು ದೊಡ್ಮನೆ ಸೇರಿದರು. ಬಿಗ್ ಬಾಸ್ ಮನೆಯಲ್ಲಿ ಎರಡು ವಾರಗಳ ಕಾಲ ವರ್ತೂರು ಸಂತೋಷ್ ಇದ್ದರು. ಮೂರನೇ ವಾರ ಆರಂಭಕ್ಕೂ ಮೊದಲೇ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ.

ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ಗೆ ಕೈದಿ ನಂಬರ್ ನೀಡಿದ ಜೈಲಿನ ಅಧಿಕಾರಿಗಳು
ವರ್ತೂರು ಸಂತೋಷ್
ರಾಮು, ಆನೇಕಲ್​
| Updated By: ರಾಜೇಶ್ ದುಗ್ಗುಮನೆ|

Updated on: Oct 24, 2023 | 2:32 PM

Share

ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಜೈಲು ಸೇರಿದ್ದಾರೆ. ಅವರನ್ನು ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವರ್ತೂರು ಸಂತೋಷ್ (Santosh) ಅವರನ್ನು ಇಡಲಾಗಿದೆ. ಸದ್ಯ ಅವರಿಗೆ ಕೈದಿ ಸಂಖ್ಯೆ ನೀಡಲಾಗಿದೆ. ಕಾರಾಗೃಹ ಅಧಿಕಾರಿಗಳು ಸಂತೋಷ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ 10935 ಎಂಬ ನಂಬರ್ ನೀಡಿದ್ದಾರೆ. ಅವರು ಬಿಗ್ ಬಾಸ್ ಗೆಲ್ಲಬೇಕು ಎಂಬ ಕನಸು ದುರಂತ ಅಂತ್ಯ ಕಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಅತಿಥಿಯಾಗಿ ವರ್ತೂರು ಸಂತೋಷ್ ಕಾಲಿಟ್ಟರು. ಅವರಿಗೆ ಪ್ರೇಕ್ಷಕರಿಂದ ಹೆಚ್ಚಿನ ವೋಟ್ ಸಿಗದೇ ಇದ್ದ ಕಾರಣ ಮನೆ ಒಳಗೆ ಹೋಗುವುದು ಅನುಮಾನ ಆಗಿತ್ತು. ಕೊನೆಗೆ ಅನರ್ಹರ ಸಾಲಿನಲ್ಲಿ ಅವರು ದೊಡ್ಮನೆ ಸೇರಿದರು. ಬಿಗ್ ಬಾಸ್ ಮನೆಯಲ್ಲಿ ಎರಡು ವಾರಗಳ ಕಾಲ ವರ್ತೂರು ಸಂತೋಷ್ ಇದ್ದರು. ಮೂರನೇ ವಾರ ಆರಂಭಕ್ಕೂ ಮೊದಲೇ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ.

ಬಿಗ್ ಬಾಸ್ ಮನೆಗೆ ಹೋಗುವ ಸಂದರ್ಭದಲ್ಲಿ ಅವರು ಕತ್ತಿಗೆ ಲಾಕೆಟ್​ ಒಂದನ್ನು ಹಾಕಿದ್ದರು. ಇದು ಹುಲಿಯ ಉಗುರಿನಿಂದ ಮಾಡಲ್ಪಟ್ಟಿತ್ತು. ಈ ಸಂಬಂಧ ಕೇಸ್ ದಾಖಲಿಸಲಾಯಿತು. ಕನ್ಫೆಷನ್ ರೂಂಗೆ ಬರುವಂತೆ ಸಂತೋಷ್​ಗೆ ಸೂಚಿಸಲಾಯಿತು. ಅವರನ್ನು ಬಿಗ್ ಬಾಸ್ ಮನೆ ಹೊರಗೆ ಕರೆತಂದ ಬಳಿಕ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದರು.

ಇದನ್ನೂ ಓದಿ: ಹುಲಿ ಉಗುರು: ವರ್ತೂರು ಸಂತೋಷ್​ ಬಳಿಕ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

ಅರಣ್ಯಾಧಿಕಾರಿಗಳು ಸಂತೋಷ್ ಹೊಂದಿದ್ದ ಉಗುರನ್ನು ಪರಿಶೀಲನೆ ನಡೆಸಿದ್ದು, ಅದು ಹುಲಿಯದ್ದೇ ಎನ್ನುವುದು ಖಚಿತವಾಗಿದೆ. ಆ ಬಳಿಕ ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹುಲಿ ಉಗುರು ಹೊಂದಿದ್ದ ಪ್ರಕರಣದಲ್ಲಿ ಸದ್ಯ ಸಂತೋಷ್ ಜೈಲಿನಲ್ಲಿದ್ದಾರೆ. ಹೀಗಾಗಿ, ಅವರಿಗೆ ಕೈದಿ ಸಂಖ್ಯೆ ನೀಡಲಾಗಿದೆ.

ಹಳ್ಳಿಕಾರ್ ದನದ ತಳಿಯನ್ನು ರಕ್ಷಿಸಲು ಸಂತೋಷ್ ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಅವರು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಅವರು ಬಿಗ್ ಬಾಸ್​ಗೆ ಬಂದಾಗ ಮೈಮೇಲೆ 400 ಗ್ರಾಂ ಚಿನ್ನ ಇತ್ತು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್