AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BBK 13’ ಶೋಗೆ ವಿಘ್ನ; ಜಾಲಿವುಡ್‌ ಸ್ಟುಡಿಯೋಗೆ ಅನುಮತಿ ನೀಡದಂತೆ ದೂರು

ಸೆಪ್ಟೆಂಬರ್ 6 ರಿಂದ ಆರಂಭವಾಗಲಿರುವ ಬಿಗ್ ಬಾಸ್ ಸೀಸನ್ 13 ಶೋಗೆ ಹೊಸ ವಿಘ್ನ ಎದುರಾಗಿದೆ. ಪರಿಸರ ನಿಯಮ ಉಲ್ಲಂಘನೆ ಹಾಗೂ ಎಸ್‌ಟಿಪಿ ನಿಯಮ ಪಾಲಿಸದ ಜಾಲಿವುಡ್ ಸ್ಟುಡಿಯೋದಲ್ಲಿ ಶೋ ನಡೆಸಲು ಅನುಮತಿ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ.

‘BBK 13’ ಶೋಗೆ ವಿಘ್ನ; ಜಾಲಿವುಡ್‌ ಸ್ಟುಡಿಯೋಗೆ ಅನುಮತಿ ನೀಡದಂತೆ ದೂರು
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Sep 02, 2026 | 10:41 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಶಾಕ್
  • ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಲ್ಲಹಳ್ಳಿ ದೂರು
  • ಹಳೆಯ ದಂಡ, ಎಸ್‌ಟಿಪಿ ಲೋಪ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಸೀಸನ್ 13’ (BBk 13) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಮತ್ತೊಂದು ಕಾನೂನು ತೊಡಕು ಎದುರಾಗಿದೆ. ಬಿಡದಿ ಬಳಿಯಿರುವ ‘ಜಾಲಿವುಡ್ ಸ್ಟುಡಿಯೋ’ದಲ್ಲಿ ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧಿಕೃತ ದೂರು ನೀಡಿದ್ದಾರೆ.

ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ, ‘ಕಳೆದ ವರ್ಷ ಜಾಲಿವುಡ್ ಸ್ಟುಡಿಯೋದಲ್ಲಿ ನಡೆದಿದ್ದ ಪರಿಸರ ನಿಯಮಗಳ ಉಲ್ಲಂಘನೆ ಹಾಗೂ ಅದಕ್ಕಾಗಿ ವಿಧಿಸಲಾಗಿದ್ದ ಹಳೆಯ ದಂಡವನ್ನು ಇದುವರೆಗೂ ಇತ್ಯರ್ಥಪಡಿಸಿಲ್ಲ. ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸೇರಿದಂತೆ ಕಡ್ಡಾಯ ಪರಿಸರ ನಿಯಮಗಳನ್ನು ಜಾಲಿವುಡ್ ಸ್ಟುಡಿಯೋ ಸಮರ್ಪಕವಾಗಿ ಪಾಲಿಸುತ್ತಿಲ್ಲ’ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.

ಸ್ಟುಡಿಯೋದಲ್ಲಿ ಪ್ರಸ್ತುತ ಸಮರ್ಪಕ ಒಳಚರಂಡಿ ವ್ಯವಸ್ಥೆ ಹಾಗೂ ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಮಂಡಳಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ನಿಯಮ ಪಾಲನೆಯಾಗದ ಹೊರತು ಶೋಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಯಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಬಂದಿಲ್ಲ; ಜಿಲ್ಲಾಧಿಕಾರಿ ಹೇಳಿಕೆ

ಸೆಪ್ಟೆಂಬರ್ 6 ರಂದು ‘ಬಿಗ್ ಬಾಸ್ ಸೀಸನ್ 13’ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ ಆದರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಕೆಯಾಗಿರುವ ಈ ದೂರಿನಿಂದಾಗಿ ಪ್ರಸಾರಕರಿಗೆ ಹಾಗೂ ಸ್ಟುಡಿಯೋ ಆಡಳಿತ ಮಂಡಳಿಗೆ ಬಿಗ್ ಶಾಕ್ ಎದುರಾಗಿದ್ದು, ಶೋ ನಿಗದಿತ ಸಮಯಕ್ಕೆ ಆರಂಭವಾಗಲಿದೆಯೇ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್