AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕರುನಾಡಿನ ಜನತೆ ಎದುರು ಬಹಿರಂಗ ಆಯ್ತು ಬಿಗ್​ ಬಾಸ್​ ರಘು ವೀಕ್​ನೆಸ್​! ಇನ್ಮುಂದೆ ಕಷ್ಟ ಇದೆ

ಲಾಕ್​ಡೌನ್​ ಸಮಯದಲ್ಲಿ ಕಾಮಿಡಿ ವಿಡಿಯೋಗಳ ಮೂಲಕ ಫೇಮಸ್​ ಆದ ರಘು ಅವರು ತಮ್ಮ ವೀಕ್​ನೆಸ್​ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಅದರಿಂದ ಅವರಿಗೆ ಹಿನ್ನಡೆ ಆಗುವ ಸಾಧ್ಯತೆ ಹೆಚ್ಚಿದೆ.

Bigg Boss Kannada: ಕರುನಾಡಿನ ಜನತೆ ಎದುರು ಬಹಿರಂಗ ಆಯ್ತು ಬಿಗ್​ ಬಾಸ್​ ರಘು ವೀಕ್​ನೆಸ್​! ಇನ್ಮುಂದೆ ಕಷ್ಟ ಇದೆ
ರಘು ಗೌಡ - ಬಿಗ್​ ಬಾಸ್
ಮದನ್​ ಕುಮಾರ್​
|

Updated on: Mar 10, 2021 | 3:48 PM

Share

ಸೋಶಿಯಲ್​ ಮೀಡಿಯಾದಲ್ಲಿ ಖ್ಯಾತಿ ಪಡೆದು, ಬಿಗ್​ ಬಾಸ್​ ಮನೆಯೊಳಗೆ ಕಾಲಿಡುವ ಅವಕಾಶ ಗಿಟ್ಟಿಸಿಕೊಂಡ ರಘು ಮೇಲೆ ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಆದರೆ ಟಾಸ್ಕ್​ಗಳಲ್ಲಿ ಅವರು ಹಿನ್ನಡೆ ಅನುಭವಿಸುವುದು ಖಚಿತ ಎನಿಸುತ್ತಿದೆ. ಹಾಗಂತ ಇದು ಅಂತೆ-ಕಂತೆ ಅಲ್ಲ. ಸ್ವತಃ ರಘು ಅವರೇ ಈ ಸಾಧ್ಯತೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ತಮ್ಮ ವೀಕ್​ನೆಸ್​ ಏನು ಎಂಬುದನ್ನು ಹೇಳಿಕೊಂಡಿದ್ದಾರೆ.

ಸಿಕ್ಕಾಪಟ್ಟೆ ದೈಹಿಕ ಸಾಮರ್ಥ್ಯ ಬೇಡುವ ಟಾಸ್ಕ್​ಗಳನ್ನು ಈಗ ಬಿಗ್​ ಬಾಸ್​ ನೀಡುತ್ತಿದ್ದಾರೆ. ಅದು ರಘು ಆತಂಕಕ್ಕೆ ಕಾರಣ ಆಗಿದೆ. ಇತ್ತೀಚೆಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ನಲ್ಲಿ ಅದು ರಘು ಗಮನಕ್ಕೆ ಬಂದಿದೆ. ಟಾಸ್ಕ್​ ನಡುವಿನ ಬಿಡುವಿನಲ್ಲಿ ತಮ್ಮ ದೌರ್ಬಲ್ಯದ ಬಗ್ಗೆ ಹಿರಿಯ ನಟ ಶಂಕರ್​ ಅಶ್ವತ್​ ಬಳಿ ರಘು ಬಾಯಿ ಬಿಟ್ಟಿದ್ದಾರೆ. ಅದಕ್ಕೆ ತಮ್ಮ ಅನುಭವದ ಆಧಾರದ ಮೇಲೆ ಶಂಕರ್​ ಅಶ್ವತ್ಥ್​​ ಕೆಲವು ಸಲಹೆ ನೀಡಿದ್ದಾರೆ.

ಅಷ್ಟಕ್ಕೂ ರಘುಗೆ ಕಾಡುತ್ತಿರುವ ವೀಕ್​ನೆಸ್​ ಏನು? ‘ಇಲ್ಲಿ ನನಗೊಂದು ಸಮಸ್ಯೆ ಆಗುತ್ತಿದೆ. ನಾನು ದೈಹಿಕವಾಗಿ ಅಷ್ಟೊಂದು ಫಿಟ್​ ಆಗಿಲ್ಲ. ಜೀವನದಲ್ಲಿ ಯಾವುದೇ ಫಿಜಿಕಲ್​ ಚಟುವಟಿಕೆಗಳೇ ಇಲ್ಲ. ಎಲ್ಲರೂ ನನ್ನನ್ನು ವೀಕ್​ ಅಂದುಕೊಳ್ಳುತ್ತಾರೆ. ಯಾರಾದರೂ ಬಂದು ನೀನು ಟಾಸ್ಕ್​ನಲ್ಲಿ ವೀಕ್​ ಎಂದರೆ ಬೇಜಾರಾಗುತ್ತದೆ’ ಎಂದು ಮುಖ ಬಾಡಿಸಿಕೊಂಡು ಮಾತನಾಡಿದ್ದಾರೆ ರಘು.

ಅದನ್ನು ಕೇಳಿಸಿಕೊಂಡ ಶಂಕರ್ ಅಶ್ವತ್ಥ್​ ಅವರು ಸಲಹೆ ನೀಡಿದ್ದಾರೆ. ‘ಅದನ್ನೆಲ್ಲ ಮರೆತು ಬಿಡಿ. ನಿಮ್ಮ ಹೈಟ್​ 5.4 ಆಗಿದ್ದರೆ ಏನೇ ಕಷ್ಟಪಟ್ಟರೂ 5.5 ಆಗೋಕೆ ಸಾಧ್ಯ ಇಲ್ಲ. ನಿಮ್ಮ ಕೈಯಲ್ಲಿ ಎಷ್ಟು ಆಗುತ್ತೋ ಅಷ್ಟು ಮಾಡಿ. ತುಂಬಾ ನಿರೀಕ್ಷೆ ಇಟ್ಟುಕೊಳ್ಳಬೇಡಿ. ನಿಮ್ಮ ಪ್ರಯತ್ನ ನೀವೂ ಮಾಡಿ. ಆಗ ಧೈರ್ಯ ಬರುತ್ತದೆ. ಈ ಟಾಸ್ಕ್​ ಅಲ್ಲ ಎಂದರೆ ಮತ್ತೊಂದು ಟಾಸ್ಕ್​ನಲ್ಲಿ ಗೆಲ್ಲುತ್ತೀರಿ’ ಎಂದು ಶಂಕರ್​ ಅಶ್ವತ್ಥ್​ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: Bigg Boss Kannada : ಶಂಕರ್ ಅಶ್ವತ್ಥ್ ಬಗ್ಗೆ 45 ವರ್ಷದಿಂದ ಅನೇಕರಿಗೆ ಗೊತ್ತಿರದ ರಹಸ್ಯ ಬಿಗ್ ಬಾಸ್​ನಲ್ಲಿ ಬಯಲು!

Bigg Boss Kannada: ದಿವ್ಯಾ ಎದುರಲ್ಲೇ ಕಳಚಿತು ಬಿಗ್ ಬಾಸ್ ಸ್ಪರ್ಧಿಗಳ ಮುಖವಾಡ! ಇವರೆಲ್ಲ ಮಾಡಿದ್ದು ಸರಿಯೇ?

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ