AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮುಗಿದ ಏಳು ತಿಂಗಳ ಬಳಿಕ ಕಾರ್ತಿಕ್ ಮಹೇಶ್​ಗೆ ಸಿಕ್ತು ಕಾರು; ಇದರ ವಿಶೇಷತೆಗಳೇನು?

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಕಾರ್ತಿಕ್ ಮಹೇಶ್ ಅವರಿಗೆ ‘ಬಿಗ್ ಬಾಸ್’ ಕಡೆಯಿಂದ ಕಾರು ಸಿಗಬೇಕಿತ್ತು. ಆದರೆ, ಅದು ವಿಳಂಬ ಆಗಿತ್ತು. ಈಗ ಕೊನೆಗೂ ಅವರಿಗೆ ಕಾರು ದೊರೆತಿದೆ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿದ್ದಾರೆ.

ಬಿಗ್ ಬಾಸ್ ಮುಗಿದ ಏಳು ತಿಂಗಳ ಬಳಿಕ ಕಾರ್ತಿಕ್ ಮಹೇಶ್​ಗೆ ಸಿಕ್ತು ಕಾರು; ಇದರ ವಿಶೇಷತೆಗಳೇನು?
ಕಾರ್ತಿಕ್ ಮಹೇಶ್
Follow us
ರಾಜೇಶ್ ದುಗ್ಗುಮನೆ
|

Updated on: Aug 30, 2024 | 6:59 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ ಜನವರಿ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಂಡಿತ್ತು. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್​ಗೆ ಮಾರುತಿ ಸುಜುಕಿ ಬ್ರೇಜಾ ಕಾರನ್ನು ನೀಡೋದಾಗಿ ಭರವಸೆ ನೀಡಲಾಗಿತ್ತು. ಆದರೆ, ಪ್ರತಿ ಬಾರಿ ಅವರನ್ನು ಕೇಳಿದಾಗ ಕಾರು ಸಿಕ್ಕಿಲ್ಲ ಎಂದೇ ಹೇಳುತ್ತಿದ್ದರು. ಕೊನೆಗೂ ಅವರಿಗೆ ಕಾರು ಸಿಕ್ಕಿದೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

‘ಅಂತೂ ಇಂತೂ ಬಂತು ಬಿಗ್​ ಬಾಸ್ ಕಾರು’ ಎಂದು ಕಾರ್ತಿಕ್ ಮಹೇಶ್ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರಿಗೆ ಕಾರು ಹಸ್ತಾಂತರ ಮಾಡುತ್ತಿರುವುದು, ಅವರು ಕಾರು ಓಡಿಸುತ್ತಿರುವ ದೃಶ್ಯ ಇದೆ. ಈ ವಿಡಿಯೋ ನೋಡಿದ ಫ್ಯಾನ್ಸ್ ಅವರಿಗೆ ಶುಭಕೋರಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಅವರಿಗೆ ವಿಶ್ ಮಾಡಿದ್ದಾರೆ.

ಬಿಗ್ ಬಾಸ್ ಪೂರ್ಣಗೊಂಡ ತಕ್ಷಣ ಕಾರು ಸಿಗುತ್ತದೆ ಅನ್ನೋದು ಅನೇಕರ ಆಲೋಚನೆ ಆಗಿತ್ತು. ಆದರೆ, ಇನ್ನೂ ಕಾರು ಸಿಕ್ಕಿಲ್ಲ ಎಂದು ಕಾರ್ತಿಕ್ ಮಹೇಶ್ ಹೇಳುತ್ತಿದ್ದರು. ಕೇಳಿದರೆ, ‘ಪ್ರಕ್ರಿಯೆ ತುಂಬಾನೇ ದೀರ್ಘವಾಗಿದೆ. ಹೀಗಾಗಿ ಕಾರು ಇನ್ನೂ ದೊರೆತಿಲ್ಲ’ ಎನ್ನುವ ಉತ್ತರ ಅವರ ಕಡೆಯಿಂದ ಬರುತ್ತಿತ್ತು. ಕೊನೆಗೂ ಅವರ ಕೈಗೆ ಕಾರು ಸೇರಿದ್ದು ಅವರು ಖುಷಿಯಾಗಿದ್ದಾರೆ. ಅಮ್ಮನ ಜೊತೆ ತೆರಳಿ ಅವರು ಕಾರು ಖರೀದಿ ಮಾಡಿದ್ದಾರೆ.

ಕಾರ್ತಿಕ್ ಮಹೇಶ್​ಗೆ ಸಿಕ್ಕಿರೋದು ಹೈಬ್ರಿಡ್ ಕಾರು. ಅಂದರೆ ಈ ಕಾರಿನಲ್ಲಿ ಬ್ಯಾಟರಿ ಕೂಡ ಇರುತ್ತದೆ. ಚಲಿಸುವಾಗ ಕಾರಿನ ಬ್ಯಾಟರಿ ಚಾರ್ಜ್ ಆಗುತ್ತದೆ. ಈ ಕಾರಿನ ಎಕ್ಸ್​ಶೋರೂಂ ಬೆಲೆ 11 ಲಕ್ಷದಿಂದ ಆರಂಭ ಆಗಿ 14 ಲಕ್ಷದವರೆಗೂ ಇದೆ. ಈ ಕಾರು 19 ಕಿ.ಮೀ ಮೈಲೇಜ್ ನೀಡುತ್ತದೆ. ಬ್ರೇಜಾ ಕಾರು 1.5 ಲೀಟರ್ ಇಂಜಿನ್ ಹೊಂದಿದೆ.

ಇದನ್ನೂ ಓದಿ: ‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್

ಕಾರ್ತಿಕ್ ಮಹೇಶ್ ಅವರು ಸದ್ಯ ‘ರಾಮರಸ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಈ ಚಿತ್ರದ ಇಂಟ್ರೋಡಕ್ಷನ್ ವಿಡಿಯೋ ರಿಲೀಸ್ ಮಾಡಲಾಗಿತ್ತು. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿತ್ತು. ಬಿಗ್ ಬಾಸ್ ಬಳಿಕ ಅವರು ಘೋಷಿಸಿದ ಮೊದಲ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್