AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 15ಕ್ಕೆ ‘ಮೆಹಬೂಬಾ’ ಬಿಡುಗಡೆ; ಗಲ್ಲಿ ಗಲ್ಲಿಯಲ್ಲಿ ಶಶಿ-ಪಾವನಾ ವಿಶೇಷ ಪ್ರಚಾರ

‘ಬಿಗ್​ ಬಾಸ್​ ಕನ್ನಡ ಸೀಸನ್​ 6’ ರಿಯಾಲಿಟಿ ಶೋನಲ್ಲಿ ಟ್ರೋಫಿ ಗೆದ್ದ ಶಶಿ ಅವರು ‘ಮೆಹಬೂಬಾ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ಪಾವನಾ ಗೌಡ ಜೋಡಿ ಆಗಿದ್ದಾರೆ. ಈ ಸಿನಿಮಾ ಮಾರ್ಚ್ 15ರಂದು ಬಿಡುಗಡೆ ಆಗಲಿದೆ. ಜನರಿಗೆ ತಮ್ಮ ಸಿನಿಮಾದ ರಿಲೀಸ್​ ಡೇಟ್​ ತಿಳಿಸಲು ಶಶಿ ಮತ್ತು ಪಾವನಾ ಅವರು ಬೆಂಗಳೂರಿನ ಗಲ್ಲಿ ಗಲ್ಲಿ ಸುತ್ತಿದ್ದಾರೆ. ಆ ವಿಡಿಯೋ ವೈರಲ್​ ಆಗಿದೆ.

ಮಾರ್ಚ್ 15ಕ್ಕೆ ‘ಮೆಹಬೂಬಾ’ ಬಿಡುಗಡೆ; ಗಲ್ಲಿ ಗಲ್ಲಿಯಲ್ಲಿ ಶಶಿ-ಪಾವನಾ ವಿಶೇಷ ಪ್ರಚಾರ
ಪಾವನಾ ಗೌಡ, ಶಶಿ
ಮದನ್​ ಕುಮಾರ್​
|

Updated on: Feb 19, 2024 | 6:21 PM

Share

ಕಷ್ಟಪಟ್ಟು ಹೇಗೋ ಸಿನಿಮಾ ಮಾಡಬಹುದು. ಆದರೆ ಜನರನ್ನು ಚಿತ್ರಮಂದಿರಕ್ಕೆ ಕರೆತರುವುದು ನಿಜಕ್ಕೂ ಸವಾಲಿನ ಕೆಲಸ. ಅದಕ್ಕಾಗಿ ಚಿತ್ರತಂಡದವರು ಸಾಕಷ್ಟು ಶ್ರಮಪಡಬೇಕು. ಹತ್ತು ಹಲವು ರೀತಿಯಲ್ಲಿ ಪ್ರಮೋಷನ್​ ಮಾಡಬೇಕು. ಈಗ ಕನ್ನಡದ ‘ಮೆಹಬೂಬಾ’ (Mehabooba) ಚಿತ್ರತಂಡದವರು ಅಕ್ಷರಶಃ ಬೀದಿ ಬೀದಿಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಸಿನಿಮಾದ ಮುಖ್ಯ ಪಾತ್ರಧಾರಿಗಳಾದ ಶಶಿ (Bigg Boss Shashi) ಮತ್ತು ಪಾವನಾ ಗೌಡ (Paavana Gowda) ಅವರು ಮುಂಚೂಣಿಯಲ್ಲಿ ನಿಂತು ತಮ್ಮ ಸಿನಿಮಾದ ಬಗ್ಗೆ ಜನರಿಗೆ ತಿಳಿಸಿಕೊಡುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಸ್ಥಳಗಳಿಗೆ ತೆರಳಿ ಅವರು ಪ್ರಮೋಷನ್​ ಮಾಡಿರುವ ಫೋಟೋಗಳು ವೈರಲ್​ ಆಗಿದೆ. ‘ಮೆಹಬೂಬಾ’ ಸಿನಿಮಾದ ರಿಲೀಸ್​ ಡೇಟ್​ ತಿಳಿಸಲು ಚಿತ್ರತಂಡ ಹೊಸ ಹೊಸ ವಿಧಾನಗಳನ್ನು ಅನುಸರಿಸುತ್ತಿದೆ.

‘ಮೆಹಬೂಬಾ’ ಸಿನಿಮಾ ಮಾರ್ಚ್​ 15ರಂದು ಬಿಡುಗಡೆ ಆಗಲಿದೆ. ಒಂದಷ್ಟು ಕಾರಣಗಳಿಂದಾಗಿ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಈಗಾಗಲೇ ಬಿಡುಗಡೆ ಆಗಿರುವ 2 ಹಾಡುಗಳು ಗಮನ ಸೆಳೆದಿವೆ. ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಶಶಿ ಅವರು ‘ಕನ್ನಡ ಬಿಗ್ ಬಾಸ್ ಸೀಸನ್ 6’ ವಿನ್ನರ್​ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ಕೃಷಿ ಜೊತೆ ನಟನೆ ಬಗ್ಗೆಯೂ ಅವರಿಗೆ ಆಸಕ್ತಿ ಇದೆ. ಈ ಸಿನಿಮಾದ ಮೂಲಕ ಹೀರೋ ಆಗಿ ಅವರು ಚಂದನವನಕ್ಕೆ ಕಾಲಿಡುತ್ತಿದ್ದಾರೆ. ‘ದಕ್ಷ್ ಎಂಟರ್​ಟೇನ್ಮೆಂಟ್ಸ್​’ ಸಹಯೋಗದಲ್ಲಿ ‘ಬಾಲಾಜಿ ಮೋಷನ್ ಪಿಕ್ಚರ್ಸ್’ ಬ್ಯಾನರ್ ಮೂಲಕ ‘ಮೆಹಬೂಬಾ’ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಅನೂಪ್ ಆಂಟೋನಿ ಅವರು ನಿರ್ದೇಶನ ಮಾಡಿದ್ದಾರೆ.

ಶಶಿ ಮತ್ತು ಪಾವನಾ ಗೌಡ ಪ್ರಚಾರ ಮಾಡಿದ ವಿಡಿಯೋ:

ಮಾರ್ಡನ್​ ರೈತ ಎಂದೇ ಫೇಮಸ್​ ಆಗಿರುವ ಶಶಿ ಅವರು ‘ಮೆಹಬೂಬಾ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅವರಿಗೆ ಜೋಡಿಯಾಗಿ ಪಾವನಾ ಗೌಡ ಅಭಿನಯಿಸಿದ್ದಾರೆ. ತಮ್ಮ ಪಾತ್ರಗಳಿಗೆ ತಕ್ಕಂತೆಯೇ ಶಶಿ ಅವರು ಹಿಂದೂ ಹುಡುಗನಂತೆ ಹಾಗೂ ಪಾವನಾ ಗೌಡ ಅವರು ಮುಸ್ಲಿಂ ಯುವತಿಯಂತೆ ವೇಷ ಧರಿಸಿ, ಕೈಯಲ್ಲಿ ರಿಲೀಸ್ ಡೇಟ್ ಬಗ್ಗೆ ಮಾಹಿತಿ ಇರುವ ಬೋರ್ಡ್ ಹಿಡಿದುಕೊಂಡು ಬೆಂಗಳೂರಿನ ಹಲವು ಕಡೆಗಳಲ್ಲಿ ಪ್ರಚಾರ ಮಾಡಿದ್ದಾರೆ. ವಿಧಾನಸೌಧ, ಹೈಕೋರ್ಟ್​, ಮಸೀದಿ, ಪೊಲೀಸ್ ಠಾಣೆ, ಮಾರ್ಕೆಟ್, ಮಂದಿರ.. ಹೀಗೆ ಅನೇಕ ಕಡೆಗಳಲ್ಲಿ ಪ್ರಚಾರ ಮಾಡಿದ್ದಾರೆ. ಸರ್ವಧರ್ಮ ಸಾಮರಸ್ಯದ ಕುರಿತು ಸಿದ್ಧವಾಗಿರುವ ‘ಮೆಹಬೂಬಾ’ ಸಿನಿಮಾ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: KTM Movie Review: ದೀಕ್ಷಿತ್​ ಶೆಟ್ಟಿ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾದ ‘ಕೆಟಿಎಂ’

ಮ್ಯಾಥ್ಯೂಸ್‌ ಮನು ಅವರು ‘ಮೆಹಬೂಬಾ’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಕಿರಣ್ ಹಂಪಾಪುರ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಸಿನಿಮಾಗಿದೆ. ಮಾಸ್ ಮಾದ ಅವರ ಸಾಹಸ ನಿರ್ದೇಶನ, ಕಲೈ ಮಾಸ್ಟರ್​ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಶೀಘ್ರದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ಕೇರಳದಲ್ಲಿ ನಡೆದ ಒಂದು ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ ಎಂಬ ಕಾರಣದಿಂದಲೂ ಕೌತುಕ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ