AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ

ಬಿಗ್ ಬಾಸ್ ಖ್ಯಾತಿಯ ಮಲ್ಲಮ್ಮ ಅವರು ‘ವಿನಾಶ ಕಾಲೆ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಎಸ್. ಕಿರಣ್‌ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಹೂರ್ತ ನಡೆದಿದೆ. ಮುಹೂರ್ತ ಸಮಾರಂಭಕ್ಕೆ ಡಾಗ್ ಸತೀಶ್, ಕರಿಬಸಪ್ಪ ಮುಂತಾದವರು ಆಗಮಿಸಿದ್ದರು. ‘ಶಕ್ತಿ ಫಿಲ್ಮ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ
Vinasha Kale Movie Team
ಮದನ್​ ಕುಮಾರ್​
|

Updated on: Feb 08, 2026 | 11:32 AM

Share

‘ವಿನಾಶ ಕಾಲೆ ವಿಪರೀತ ಬುದ್ದಿ’ ಎಂಬ ಮಾತಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಎನ್ನುತ್ತಾರೆ. ‘ವಿನಾಶ ಕಾಲೆ’ (Vinasha Kale) ಎಂಬುದನ್ನೇ ಶೀರ್ಷಿಕೆಯಾಗಿ ಇಟ್ಟುಕೊಂಡು ಹೊಸ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಮಾಡಲಾಯಿತು. ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ಮದ್ದುರಮ್ಮ ದೇವಿ ಹಾಗೂ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್ ಅವರು ಈ ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಈ ವೇಳೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿಗಳಾದ ಕರಿಬಸಪ್ಪ, ಡಾಗ್ ಸತೀಶ್, ಮಲ್ಲಮ್ಮ (Mallamma) ಅವರು ಸಾಥ್ ನೀಡಿದರು.

‘ಶಕ್ತಿ ಫಿಲ್ಮ್ಸ್’ ಮೂಲಕ ‘ವಿನಾಶ ಕಾಲೆ’ ಸಿನಿಮಾ ನಿರ್ಮಾಣ ಆಗುತ್ತಿದೆ. ತುಮಕೂರು ಮೂಲದ ಎಸ್. ಕಿರಣ್‌ಕುಮಾರ್ ಅವರು ಕಳೆದ ಐದು ವರ್ಷಗಳಿಂದ ಹಲವು ನಿರ್ದೇಶಕರ ಬಳಿ ಅನುಭವ ಪಡೆದುಕೊಂಡು ಈಗ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪಾವನಿ ಸಿರಿ, ರಿಷಿಕಾ ಗೌಡ, ವೈಷ್ಣವಿ, ರಚನಾ, ಶ್ರೀನಿಧಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಶೋಭ ಅವರು ಮಾಂತ್ರಿಕಳಾಗಿ ಕಾಣಿಸಿಕೊಳ್ಳಲಿದ್ದಾರೆ. ಮಂಡ್ಯಸಿದ್ದು ಅವರು ಅಘೋರಿ ಪಾತ್ರ ಮಾಡುತ್ತಿದ್ದಾರೆ. ಬಿಗ್ ಬಾಸ್ ಮಲ್ಲಮ್ಮ, ಪ್ರವಲಿಕಾ, ದಿಶಾ ಮುಂತಾದವರು ನಟಿಸುತ್ತಿದ್ದಾರೆ. ಪಾತ್ರವರ್ಗಕ್ಕೆ ಐದು ಹುಡುಗಿಯರು ಆಯ್ಕೆಯಾಗಿದ್ದಾರೆ. ಹುಡುಗರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಮಾರ್ಚ್ ತಿಂಗಳಿಂದ ಮೂವತ್ತು ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು ಮುಂತಾದೆಡೆ ಶೂಟಿಂಗ್ ನಡೆಯುತ್ತದೆ.

ಮಂಜುಕವಿ ಅವರು ‘ವಿನಾಶ ಕಾಲೆ’ ಸಿನಿಮಾದ ಮೂರು ಹಾಡುಗಳಿಗೆ ಸಂಗೀತ ನೀಡಿ ಸಾಹಿತ್ಯ ಬರೆದಿದ್ದಾರೆ. ವಿನಯ್‌ ಗೌಡ ಛಾಯಾಗ್ರಹಣ ಮಾಡಲಿದ್ದಾರೆ. ಜೀವನ್ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕರು ಈ ಸಿನಿಮಾದ ಕತೆ ಏನೆಂಬುದನ್ನು ವಿವರಿಸಿದರು. ಇದು ಸತ್ಯ ಘಟನೆ ಆಧಾರಿತ ಸಿನಿಮಾ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ

‘ಕಡಿಮೆ ಸಮಯದಲ್ಲಿ ದುಡ್ಡು ಮಾಡಬೇಕೆಂಬ ದುರಾಸೆಯಿಂದ ದೈವ ಸಂಬಂದಕ್ಕೆ ಕೈ ಹಾಕಿದರೆ ಏನೇನು ಅನಾಹುತಗಳು ನಡೆಯುತ್ತದೆ ಎಂಬುದು ಈ ಸಿನಿಮಾದಲ್ಲಿದೆ. ಮಧ್ಯಮ ವರ್ಗದ ಕುಟುಂಬದ ಹುಡುಗರು ಮತ್ತು ಹುಡುಗಿಯರು ಉದ್ಯೋಗ ಅರಸಿಕೊಂಡು ನಗರಕ್ಕೆ ಬರುತ್ತಾರೆ. ಇದರಿಂದ ಧಿಡೀರ್ ಶ್ರೀಮಂತರಾಗಲು ಕೆಟ್ಟ ಹಾದಿಗೆ ಹೋಗುತ್ತಾರೆ. ಅದರ ಪರಿಣಾಮದಿಂದ ಯಾವ ರೀತಿ ತತ್ತರಿಸಿ ಹೋಗುತ್ತಾರೆ ಎಂಬುದನ್ನು ಹಾರರ್ ಥ್ರಿಲ್ಲರ್ ಮಾದರಿಯಲ್ಲಿ ತೋರಿಸುತ್ತೇವೆ’ ಎಂದು ನಿರ್ದೇಶಕರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?