ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

Sonu Srinivas Gowda Arrest: ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು.

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ
ಸೋನು
Follow us
| Updated By: ರಾಜೇಶ್ ದುಗ್ಗುಮನೆ

Updated on:Mar 22, 2024 | 10:09 AM

‘ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss OTT) ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಈ ವಿಚಾರ ಸೆನ್ಸೇಷನ್ ಸೃಷ್ಟಿ ಮಾಡಿದೆ. ಹಾಗಾದರೆ ಅವರು ಬಂಧನಕ್ಕೆ ಒಳಗಾಗೋಕೆ ಕಾರಣ ಏನು? ಅದಕ್ಕೆ ಉತ್ತರ ಕೇಳಿದ್ರೆ ನಿಮಗೆ ಶಾಕ್ ಆಗೋದು ಗ್ಯಾರಂಟಿ. ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಮಗುವಿನ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.

‘ಮೂರು ತಿಂಗಳಿಂದ ಪಾಸಿಟಿವ್ ಆಗಿ ಎಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಬಹುಶಃ ಇವಳನ್ನು ದತ್ತು ತೆಗೆದುಕೊಂಡಿದ್ದಕ್ಕೋ ಏನೋ’ ಎಂದು ಸೋನು ಶ್ರೀನಿವಾಸ್ ಗೌಡ ಯೂಟ್ಯೂಬ್ ವಿಡಿಯೋದಲ್ಲಿ ಹೇಳಿದ್ದರು. ‘ನಾನು ಅಪಾರ್ಟ್​ಮೆಂಟ್ ಕೆಳಗೆ ನಾಯಿಗೆ ಬಿಸ್ಕಿಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ಚಾಕೋಲೇಟ್ ಕೊಡಿಸಿದೆ. ನಂತರ ಶಾಪಿಂಗ್ ಹೋದೆವು. ಮನೆಗೆ ಕರೆದುಕೊಂಡು ಹೋಗಿ ಎಂದು ಕೇಳಿದಳು. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ’ ಎಂದು ಹೇಳಿಕೊಂಡಿದ್ದರು ಸೋನು ಶ್ರೀನಿವಾಸ್ ಗೌಡ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

‘ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೋದರು. ಮಗುವಿಗೆ ನಾನಿಲ್ಲದೆ ಜ್ವರ ಬಂದಿತ್ತು. ಫೋನ್ ಮೂಲಕ ಸೇವಂತಿ ಬಳಿ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಆರಂಭಕ್ಕೂ ಮೊದಲು ‘ಬಿಗ್ ಬಾಸ್ ಒಟಿಟಿ’ ನಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Fri, 22 March 24

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ