AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತೂಗುದೀಪ ನಟನೆಯ ‘ಡೆವಿಲ್’ ಚಿತ್ರಕ್ಕೆ ವಿನಯ್ ಗೌಡ ವಿಲನ್; ಆಗಿರೋ ಶೂಟಿಂಗ್ ಎಷ್ಟು?

ವಿನಯ್ ಗೌಡ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಫೇಮಸ್ ಆದರು. ಅವರು ಅಲ್ಲಿ ಆನೆ ಎಂದೇ ಫೇಮಸ್ ಆದರು. ಅವರಿಗೆ ಈಗ ‘ಡೆವಿಲ್’ ಚಿತ್ರದ ಆಫರ್ ಸಿಕ್ಕಿದೆ. ಈ ಬಗ್ಗೆ ವಿನಯ್ ಗೌಡ ಅವರು ಇತ್ತೀಚೆಗೆ ಮಾಹಿತಿ ರಿವೀಲ್ ಮಾಡಿದ್ದಾರೆ.

ದರ್ಶನ್ ತೂಗುದೀಪ ನಟನೆಯ ‘ಡೆವಿಲ್’ ಚಿತ್ರಕ್ಕೆ ವಿನಯ್ ಗೌಡ ವಿಲನ್; ಆಗಿರೋ ಶೂಟಿಂಗ್ ಎಷ್ಟು?
ದರ್ಶನ್-ವಿನಯ್
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Jun 27, 2024 | 10:57 AM

Share

ದರ್ಶನ್ ತೂಗುದೀಪ ನಟನೆಯ ‘ಡೆವಿಲ್’ ಸಿನಿಮಾ (Devil Movie) ಬಗ್ಗೆ ಭರ್ಜರಿ ನಿರೀಕ್ಷೆ ಇದೆ. ಸದ್ಯ ಚಿತ್ರದ ಹೀರೋ ದರ್ಶನ್ ಜೈಲು ಸೇರಿದ್ದಾರೆ. ಹೀಗಾಗಿ, ಸಿನಿಮಾದ ಭವಿಷ್ಯ ಏನು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ದರ್ಶನ್ ಹೊರಬಂದ ಬಳಿಕವೇ ಈ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಈ ಮಧ್ಯೆ ಸಿನಿಮಾಗೆ ವಿಲನ್ ತಾವೇ ಎಂದು ಬಿಗ್ ಬಾಸ್ ವಿನಯ್ ಗೌಡ ಅನೌನ್ಸ್ ಮಾಡಿದ್ದಾರೆ.

‘ಡೆವಿಲ್ ಸಿನಿಮಾಗೆ ನಾನು ವಿಲನ್. ನಿರ್ದೇಶಕ ಮಿಲನಾ ಪ್ರಕಾಶ್ ನನ್ನ ನಟನೆ ನೋಡಿದ್ದರು. ಹೀಗಾಗಿ, ಅವರು ಕರೆದು ನನಗೆ ಆಫರ್ ಕೊಟ್ಟರು. ದೊಡ್ಡ ಸ್ಟಾರ್ ಹೀರೋಗೆ ವಿಲನ್ ಎಂದರು. ಆ ಬಳಿಕ ಇದು ದರ್ಶನ್ ಸಿನಿಮಾ ಅನ್ನೋದು ಗೊತ್ತಾಯಿತು. ಸಿನಿಮಾದ ಶೇ.30 ಶೂಟಿಂಗ್ ಆಗಿದೆ. ದರ್ಶನ್ ಜೊತೆಗಿನ ಕಾಂಬಿನೇಷನ್ ಇನ್ನೂ ಶೂಟ್ ಆಗಿಲ್ಲ’ ಎಂದು ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ವಿನಯ್ ಗೌಡ ಮಾಹಿತಿ ನೀಡಿದ್ದಾರೆ.

‘ಸಿನಿಮಾ ನಿಂತೋದ ಬಗ್ಗೆ ಬೇಸರ ಆಗುವುದಿಲ್ಲವೇ?’ ಎನ್ನುವ ಪ್ರಶ್ನೆಗೆ ವಿನಯ್ ಗೌಡ ಮಾತನಾಡಿದ್ದಾರೆ. ‘ಪ್ರಾಜೆಕ್ಟ್​ನ ಭವಿಷ್ಯದ ಬಗ್ಗೆ ಗೊತ್ತಿಲ್ಲ. ಆದರೆ, ಸೂಪರ್ ಪ್ರಾಜೆಕ್ಟ್ ಅದು. ಖಂಡಿತವಾಗಿಯೂ ಬೇಸರ ಆಗುತ್ತದೆ. ಎಲ್ಲವೂ ಸರಿ ಆಗುತ್ತದೆ ಎನ್ನುವ ನಂಬಿಕೆ ನನ್ನದು. ಸಿನಿಮಾ ರಿಲೀಸ್ ಆದ್ಮೇಲಿನ ಹಬ್ಬ ಇದೆಯಲ್ಲ. ಅದು ಮುಖ್ಯ’ ಎಂದಿದ್ದಾರೆ ವಿನಯ್ ಗೌಡ.

ಇದನ್ನೂ ಓದಿ: ಬ್ಯಾಕ್​ ಟು ಬ್ಯಾಕ್ ಮೂರು ಚಿತ್ರಕ್ಕೆ ವಿನಯ್ ಗೌಡ ಸಹಿ; ಸ್ಟಾರ್ ಹೀರೋಗೆ ಖಡಕ್ ವಿಲನ್

ವಿನಯ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಸ್ಪರ್ಧೆ ಮಾಡಿದ್ದರು. ಇದರಲ್ಲಿ ವಿನಯ್ ಗೌಡ ಅವರು ಸಾಕಷ್ಟು ಗಮನ ಸೆಳೆದರು. ಅವರು ಆನೆ ಎಂದೇ ಫೇಮಸ್ ಆದರು. ಈಗ ಅವರಿಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Wed, 26 June 24

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..