‘ಮಗು ಜನಿಸಿ ಏಳು ತಿಂಗಳಾಗಿದೆ’; ಇಷ್ಟು ದಿನ ವಿಷಯ ಮುಚ್ಚಿಟ್ಟಿದ್ದೇಕೆ ಮಂಜು ಪಾವಗಡ?

ಮಂಜು ಪಾವಗಡ ಹಾಗೂ ನಂದಿನಿ ದಂಪತಿಗೆ 7 ತಿಂಗಳ ಗಂಡು ಮಗು ಜನಿಸಿದ್ದು, ಈ ಗುಡ್ ನ್ಯೂಸ್ ಅನ್ನು ಮಂಜು ಇಷ್ಟು ದಿನ ರಹಸ್ಯವಾಗಿಟ್ಟಿದ್ದರು. 2024ರಲ್ಲಿ ಸರಳವಾಗಿ ವಿವಾಹವಾಗಿದ್ದ ಈ ಜೋಡಿ, ಮಗುವಿನ ಹುಟ್ಟಿನ ವಿಷಯ ಏಕೆ ಹೇಳಿಲ್ಲ ಎಂಬುದನ್ನು ರಿವೀಲ್ ಮಾಡಿದರು. ಬಿಗ್ ಬಾಸ್ ವಿನ್ನರ್ ಹಾಗೂ ಹಾಸ್ಯ ನಟನಾಗಿ ಜನಪ್ರಿಯರಾಗಿರುವ ಮಂಜು ಪಾವಗಡ, ಈಗ 'ಜೆರಾಕ್ಸ್' ವೆಬ್ ಸರಣಿಯಲ್ಲಿ ನಟಿಸಿದ್ದಾರೆ.

‘ಮಗು ಜನಿಸಿ ಏಳು ತಿಂಗಳಾಗಿದೆ’; ಇಷ್ಟು ದಿನ ವಿಷಯ ಮುಚ್ಚಿಟ್ಟಿದ್ದೇಕೆ ಮಂಜು ಪಾವಗಡ?
ಮಂಜು

Updated on: Apr 23, 2026 | 7:20 AM

ಮಂಜು ಪಾವಗಡ ಅವರು (Manju Pavagada) 2024ರಲ್ಲಿ ನಂದಿನಿ ಎಂಬುವವರ ಜೊತೆ ವಿವಾಹ ಆದರು. ಸರಳವಾಗಿ ಅವರ ಮದುವೆ ನೆರವೇರಿತು. ಏಳು ತಿಂಗಳ ಹಿಂದೆ ಅವರು ತಂದೆಯಾಗಿದ್ದಾರೆ. ಆದರೆ, ಈ ವಿಷಯವನ್ನು ಅವರು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. ಈ ವಿಷಯವನ್ನು ಅವರು ಈಗ ಹೇಳಿಕೊಂಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇಷ್ಟು ದಿನ ಖುಷಿ ಸುದ್ದಿಯನ್ನು ಯಾಕೆ ರಿವೀಲ್ ಮಾಡಿರಲಿಲ್ಲ ಎಂಬ ವಿಷಯವನ್ನು ಕೂಡ ಅವರು ಹೇಳಿಕೊಂಡಿದ್ದಾರೆ.

ಸಾಮಾನ್ಯವಾಗಿ ಚಿತ್ರರಂಗದವರು ಚಿತ್ರರಂಗದವರನ್ನೇ ಮದುವೆ ಆಗುತ್ತಾರೆ. ಆದರೆ, ಮಂಜು ಪಾವಗಡ ಆ ರೀತಿ ಅಲ್ಲ. ಅವರು, ಚಿತ್ರರಂಗದ ಜೊತೆ ನಂಟು ಇಲ್ಲದ ಹುಡುಗಿಯನ್ನು ಮದುವೆ ಆಗಿದ್ದಾರೆ. ಮಂಜು ಪತ್ನಿ ನಂದಿನಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 2024ರಲ್ಲಿ ಈ ಮದುವೆ ಸರಳವಾಗಿ ನಡೆಯಿತು. ಈಗ ಇವರ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.

‘ಗಂಡು ಮಗು ಆಗಿ ಏಳು ತಿಂಗಳಾಗಿದೆ. ಹೇಳೋಕೆ ಸಮಯ ಸಿಕ್ಕಿರಲಿಲ್ಲ, ಹಾಗಾಗಿ ಹೇಳಿಲ್ಲ. ಆತ ತುಂಬಾ ತರ್ಲೆ ಮಾಡ್ತಾನೆ’ ಎಂದು ಮಂಜು ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದಾರೆ. ಈಗ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಾ ಇದ್ದಾರೆ.

ಇದನ್ನೂ ಓದಿ: ಮಂಜು ಪಾವಗಡ ಮದುವೆಯಲ್ಲಿ ಶುಭ ಪೂಂಜಾ, ವರನ ಕೆನ್ನೆ ಹಿಂಡಿದ ನಟಿ

ಮಂಜು ಪಾವಗಡ ಅವರು ಹಾಸ್ಯ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಮನ ಸೆಳೆದರು. ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ವಿನ್ನರ್ ಕೂಡ ಹೌದು. ಮಂಜು ಪಾವಗಡ ಅವರು ಕಲರ್ಸ್ ಕನ್ನಡದ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಂತರಪಟ’ ಧಾರಾವಾಹಿಯಲ್ಲಿ ಅವರು ನೆಗೆಟಿವ್ ರೋಲ್ ಮಾಡಿದ್ದರು.ಈಗ ಅವರು ‘ಜೆರಾಕ್ಸ್’ ಹೆಸರಿನ ಸರಣಿಯಲ್ಲಿ ನಟಿಸಿದ್ದಾರೆ. ‘ಬ್ಲಿಂಕ್‌’ ಖ್ಯಾತಿಯ ಶ್ರೀನಿಧಿ ಬೆಂಗಳೂರು ಈ ಸರಣಿಗೆ ನಿರ್ದೇಶನ ಮಾಡಿದ್ದಾರೆ. ನಾಗಭೂಷಣ, ಪಾಯಲ್‌ ಚೆಂಗಪ್ಪ, ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಯಶವಂತ್‌ ಶೆಟ್ಟಿ, ಮೊದಲಾದವರು ಇದರಲ್ಲಿ ನಟಿಸಿದ್ದಾರೆ. ಏಪ್ರಿಲ್‌ 24ರಿಂದ ಈ ವೆಬ್‌ ಸರಣಿಯನ್ನು ಜೀ5 ಒಟಿಟಿಯಲ್ಲಿ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 7:07 am, Thu, 23 April 26

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us