AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಕಂಠದಲ್ಲಿ ಮೂಡಿ ಬಂದಿದ್ದ ‘ಬಾಡಿ ಗಾಡ್’ ಹಾಡು ರಿಲೀಸ್​; ಅಪ್ಪು ಜೀವನಕ್ಕೆ ಹತ್ತಿರವಾಗಿದೆ ಸಾಹಿತ್ಯ

ನಗೆ ತಿಳಿದ ಹಾಗೆ ಇದು ಅವರು ಹಾಡಿರುವ ಕೊನೆಯ ಗೀತೆ ಅನಿಸುತ್ತದೆ.‌ ಈ ಹಾಡಿನಲ್ಲಿ‌ ಬರುವ ಕೆಲವು ಸಾಲುಗಳು ಪುನೀತ್ ಅವರಿಗೆ ಹತ್ತಿರವಾಗಿದೆ ಎಂದು ‘ಬಾಡಿ ಗಾಡ್​’ ಚಿತ್ರದ ನಿರ್ದೇಶಕ ಪ್ರಭು ಮಾಹಿತಿ ನೀಡಿದರು.

ಪುನೀತ್​ ಕಂಠದಲ್ಲಿ ಮೂಡಿ ಬಂದಿದ್ದ ‘ಬಾಡಿ ಗಾಡ್’ ಹಾಡು ರಿಲೀಸ್​; ಅಪ್ಪು ಜೀವನಕ್ಕೆ ಹತ್ತಿರವಾಗಿದೆ ಸಾಹಿತ್ಯ
ಬಾಡಿ ಗಾಡ್​ ಸಿನಿಮಾ
TV9 Web
| Edited By: |

Updated on:Dec 02, 2021 | 4:53 PM

Share

ಪುನೀತ್​ ರಾಜ್​ಕುಮಾರ್​ ಅವರು ನಟನೆ ಜತೆಗೆ ಗಾಯಕನಾಗಿಯೂ ಗುರುತಿಸಿಕೊಂಡಿದ್ದರು. ಹಲವು ಸಿನಿಮಾಗಳಲ್ಲಿ ಅವರು ಹಾಡಿದ್ದರು. ಪುನೀತ್​ ನಮ್ಮನ್ನು ಅಗಲಿ ತಿಂಗಳಾಗಿದೆ. ಅವರ ಕಂಠದಲ್ಲಿ ಮೂಡಿ ಬಂದ ಹಾಡೊಂದು ಈಗ ರಿಲೀಸ್​ ಆಗಿದೆ. ಈ ಹಾಡು ಪುನೀತ್​ ಲೈಫ್​ಗೆ ಹತ್ತಿರವಾಗಿದೆ ಅನ್ನೋದು ವಿಶೇಷ. ಪುನೀತ್ ರಾಜ್​​ಕುಮಾರ್ ‘ಬಾಡಿ ಗಾಡ್’ ಚಿತ್ರಕ್ಕಾಗಿ ‘ಆರೇಸ ಡಂಕನಕ..’ ಎಂಬ ಹಾಡನ್ನು ಹಾಡಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆಯಾಗಿದೆ. ಎಸ್.ಕೆ.ಎಸ್ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಈ ಮೊದಲು ಈ ಹಾಡನ್ನು ರಾಘವೇಂದ್ರ ರಾಜ್​​ಕುಮಾರ್ ಬಿಡುಗಡೆ ಮಾಡಿದ್ದರು.

‘ಇಷ್ಟು ದಿನ ನನ್ನ ತಮ್ಮನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಇಂದು ಗೀತಾಂಜಲಿ ಸಲ್ಲಿಸಿದ್ದೇನೆ. ಅವನು ಇಲ್ಲ ಎಂದು ಕೊರಗುವುದು ಬೇಡ. ಅವನು ಹಾಡಿರುವ ಹಾಡಿನಲ್ಲಿ, ಮಾಡಿರುವ ಕೆಲಸದಲ್ಲಿ ಅವನಿದ್ದಾನೆ. ನಿರ್ದೇಶಕ ಪ್ರಭು ಶ್ರೀನಿವಾಸ್ ನನಗೆ ಮೊದಲಿನಿಂದಲೂ ಪರಿಚಯ. ಅವರ ಈ ಪ್ರಯತ್ನಕ್ಕೆ ಶುಭವಾಗಲಿ’ ಎಂದು ರಾಘಣ್ಣ ಹಾರೈಸಿದ್ದರು.

ಸಿನಿಮಾ ನಿರ್ದೇಶಕ ಪ್ರಭು ಶ್ರೀನಿವಾಸ್ ಮಾತನಾಡಿ, ‘ಅಪ್ಪು ಸರ್ ಅವರನ್ನು ಭೇಟಿಯಾಗಿ ಈ ಹಾಡನ್ನು ಹಾಡಲು ಕೇಳಿದೆ. ‘ಇದನ್ನು ತುಂಬಾ ಹೈಪಿಚ್​​ನಲ್ಲಿ ಹಾಡಬೇಕು. ನನ್ನ ಧ್ವನಿ ಸರಿ ಹೊಂದುತ್ತದೆಯಾ? ಸರಿ ಹೊಂದದಿದ್ದಲ್ಲಿ ಬೇರೆ ಅವರ ಬಳಿ ಹಾಡಿಸಿ’ ಎಂದಿದ್ದರು. ಇಲ್ಲ ಈ ಹಾಡನ್ನು ನೀವೇ ಹಾಡಬೇಕು ಎಂದು ಕೇಳಿದೆ. ಅವರ ಸ್ಟುಡಿಯೋದಲ್ಲೇ ಈ ಹಾಡನ್ನು ಹಾಡಿದರು. ನನಗೆ ತಿಳಿದ ಹಾಗೆ ಇದು ಅವರು ಹಾಡಿರುವ ಕೊನೆಯ ಗೀತೆ ಅನಿಸುತ್ತದೆ.‌ ಈ ಹಾಡಿನಲ್ಲಿ‌ ಬರುವ ಕೆಲವು ಸಾಲುಗಳು ಪುನೀತ್ ಅವರಿಗೆ ಹತ್ತಿರವಾಗಿದೆ. ‘ಬಾಡಿ ಗಾಡ್’ ಕೆಲಸ ಮುಗಿದಿದ್ದು, ಜನವರಿಯಲ್ಲಿ ತೆರೆಗೆ ತರುತ್ತೇವೆ’ ಎಂದರು.

ನಟ ಮನೋಜ್​ ಮಾತನಾಡಿ, ‘ನನಗೆ ಅಪ್ಪು ಅವರು ಹಾಡುವ ಹಾಡಿಗೆ ಡ್ಯಾನ್ಸ್ ಮಾಡಬೇಕೆಂದು ಆಸೆಯಿತ್ತು. ಈ ಹಾಡಿನ ಬಗ್ಗೆ ಮಾತನಾಡಲು ನಿರ್ದೇಶಕರೊಂದಿಗೆ ಅಪ್ಪು ಸರ್ ಮನೆಗೆ ಹೋದಾಗ, ಅವರ ಸ್ವಾಗತ ನೋಡಿ ನನಗೆ ಆಶ್ಚರ್ಯವಾಯಿತು.‌ ‘ ಬನ್ನಿ ಮನೋಜ್. ಹೇಗಿದ್ದೀರಿ ಎಂದು ಅದ್ಭುತವಾಗಿ ಸ್ವಾಗತಿಸಿದ್ದರು’ ಎಂಬುದಾಗಿ ಹೇಳಿದರು. ನಟಿ ದೀಪಿಕಾ ಅವರು ಈ ಸಿನಿಮಾದಲ್ಲಿ ಮೊದಲ ಬಾರಿಗೆ ನಾಯಕಿಯಾಗಿ ನಟಿಸಿದ್ದಾರೆ.

ಮಠ ಗುರುಪ್ರಸಾದ್ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಪದ್ಮಜಾರಾವ್, ನಿರಂಜನ್, ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಕರಣ್ ಬಿ ಕೃಪ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೇಲ್ ಮುರುಗನ್ ಅವರ ಛಾಯಾಗ್ರಹಣವಿದೆ. ಮತ್ತೊಂದು ಗೀತೆಗೆ ವೆಂಕಟೇಶ್​ ಕುಲಕರ್ಣಿ ಅವರ ಸಾಹಿತ್ಯವಿದೆ.

ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್​ಕುಮಾರ್​​​ಗೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಸಾಂತ್ವನ

Published On - 4:52 pm, Thu, 2 December 21

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು