ನಿಮ್ಮಂತಹ ಹುಟ್ಟು ಕಲಾವಿದ ಇನ್ನೂ ಇರಬೇಕಿತ್ತು ಇರ್ಫಾನ್ ಖಾನ್​

ಮುಂಬೈ: ಬಾಲಿವುಡ್​ನ ಖ್ಯಾತ ನಟ ಇರ್ಫಾನ್ ಖಾನ್ (54) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಾಯಿಯನ್ನು ಹಿಂಬಾಲಿಸಿದ ಹುಟ್ಟು ಕಲಾವಿದ: ಇರ್ಫಾನ್ ಖಾನ್ ಮೃತಪಟ್ಟಿರುವ ಬಗ್ಗೆ ಟ್ವೀಟ್ ಮೂಲಕ ನಿರ್ದೇಶಕ ಸುಜಿತ್ ಸರ್ಕಾರ್ ಮಾಹಿತಿ ನೀಡಿದ್ದಾರೆ. ಇರ್ಫಾನ್ ತಾಯಿ ಸಯೀದಾ ಬೇಗಂ ಕೆಲ ದಿನಗಳ ಹಿಂದಷ್ಟೇ ಜೈಪುರದಲ್ಲಿ ಮೃತಪಟ್ಟಿದ್ದರು. ಆದ್ರೆ ಲಾಕ್​ಡೌನ್ […]

ನಿಮ್ಮಂತಹ ಹುಟ್ಟು ಕಲಾವಿದ ಇನ್ನೂ ಇರಬೇಕಿತ್ತು ಇರ್ಫಾನ್ ಖಾನ್​
ಸಾಧು ಶ್ರೀನಾಥ್​

Updated on: Apr 29, 2020 | 12:46 PM

ಮುಂಬೈ: ಬಾಲಿವುಡ್​ನ ಖ್ಯಾತ ನಟ ಇರ್ಫಾನ್ ಖಾನ್ (54) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತಾಯಿಯನ್ನು ಹಿಂಬಾಲಿಸಿದ ಹುಟ್ಟು ಕಲಾವಿದ:
ಇರ್ಫಾನ್ ಖಾನ್ ಮೃತಪಟ್ಟಿರುವ ಬಗ್ಗೆ ಟ್ವೀಟ್ ಮೂಲಕ ನಿರ್ದೇಶಕ ಸುಜಿತ್ ಸರ್ಕಾರ್ ಮಾಹಿತಿ ನೀಡಿದ್ದಾರೆ. ಇರ್ಫಾನ್ ತಾಯಿ ಸಯೀದಾ ಬೇಗಂ ಕೆಲ ದಿನಗಳ ಹಿಂದಷ್ಟೇ ಜೈಪುರದಲ್ಲಿ ಮೃತಪಟ್ಟಿದ್ದರು. ಆದ್ರೆ ಲಾಕ್​ಡೌನ್ ಪರಿಣಾಮ ಅಂತ್ಯಸಂಸ್ಕಾರಕ್ಕೂ ಹೋಗಲೂ ಸಾಧ್ಯವಾಗಿರಲಿಲ್ಲ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ತಾಯಿಯ ಅಂತಿಮ ದರ್ಶನ ಪಡೆದಿದ್ದರು.

Published On - 12:08 pm, Wed, 29 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us