AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಡೈರೆಕ್ಟರ್​ಗೆ ಬಂತು ಬಾಲಿವುಡ್​ ಸ್ಟಾರ್ ನಟ ಜಾನ್​ ಅಬ್ರಾಹಂ​ ಕಾಲ್​; ಎಲ್ಲಾ ಚಾರ್ಲಿ ಮಹಿಮೆ

‘777 ಚಾರ್ಲಿ’ ಸಿನಿಮಾಗೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ಶ್ವಾನ ಹಾಗೂ ಮನುಷ್ಯನ ನಡುವಿನ ಭಾವನಾತ್ಮಕ ಕಥೆಯನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದಾ

‘777 ಚಾರ್ಲಿ’ ಡೈರೆಕ್ಟರ್​ಗೆ ಬಂತು ಬಾಲಿವುಡ್​ ಸ್ಟಾರ್ ನಟ ಜಾನ್​ ಅಬ್ರಾಹಂ​  ಕಾಲ್​; ಎಲ್ಲಾ ಚಾರ್ಲಿ ಮಹಿಮೆ
ರಕ್ಷಿತ್-ಜಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 15, 2022 | 9:52 PM

‘777 ಚಾರ್ಲಿ’ ಸಿನಿಮಾ (777 Charlie Movie) ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗಿದೆ. ಹಿಂದಿಯಲ್ಲಿ ‘777 ಚಾರ್ಲಿ’ ಚಿತ್ರಕ್ಕೆ ಥಿಯೇಟರ್​ಗಳ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ಕೆಲ ಬಾಲಿವುಡ್​ ಸೆಲೆಬ್ರಿಟಿಗಳು ಕನ್ನಡದ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈಗ ನಟ ಜಾನ್​ ಅಬ್ರಾಹಂ (John Abraham) ಸರದಿ. ಅವರು ಚಿತ್ರದ ನಿರ್ದೇಶಕ ಕಿರಣ್​ ರಾಜ್​ಗೆ ಕರೆ ಮಾಡಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ವಿಚಾರವನ್ನು ಕಿರಣ್ ರಾಜ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘777 ಚಾರ್ಲಿ’ ಸಿನಿಮಾಗೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ಶ್ವಾನ ಹಾಗೂ ಮನುಷ್ಯನ ನಡುವಿನ ಭಾವನಾತ್ಮಕ ಕಥೆಯನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಈಗ ಜಾನ್​ ಅಬ್ರಾಹಂ ಅವರು ಚಿತ್ರತಂಡದ ಬೆನ್ನು ತಟ್ಟಿರುವುದು ‘777 ಚಾರ್ಲಿ’ ಬಲವನ್ನು ಹೆಚ್ಚಿಸಿದೆ.

ಇದನ್ನೂ ಓದಿ
Image
ಕಿರಣ್ ರಾಜ್ ಚಾರ್ಲಿ ಶ್ವಾನ ದತ್ತು ಪಡೆದಿದ್ದು ಕೂಡ ಸಿನಿಮೀಯ ರೀತಿಯಲ್ಲೇ; ಹೊರಬಿತ್ತು ಅಚ್ಚರಿಯ ವಿಚಾರ
Image
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ
Image
777 Charlie Review: ಪ್ರಾಣಿಪ್ರಿಯರನ್ನು ನಗಿಸಿ, ಅಳಿಸುವ ಧರ್ಮ-ಚಾ​ರ್ಲಿಯ ಎಮೋಷನಲ್​ ಜರ್ನಿ; ಇಲ್ಲಿದೆ ವಿಮರ್ಶೆ
Image
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಮೆಚ್ಚಿಕೊಂಡ ನಟಿ ರಮ್ಯಾ ಹೇಳಿದ್ದೇನು?

ಜಾನ್ ಅಬ್ರಾಹಂ ಅವರು ಮಾಸ್​ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಆ್ಯಕ್ಷನ್​ ಪ್ರಿಯರಾದ ಅವರಿಗೆ ಈ ಶ್ವಾನದ ಮೇಲಿನ ಸಿನಿಮಾದ ಟ್ರೇಲರ್ ಇಷ್ಟವಾಗಿದೆ. ‘777 ಚಾರ್ಲಿ’ ಸಿನಿಮಾದ ಟ್ರೇಲರ್ ನೋಡಿರುವ ಅವರು ಕಿರಣ್ ರಾಜ್​ಗೆ ಕರೆ ಮಾಡಿ ಪ್ರೀತಿಯಿಂದ ನಾಲ್ಕು ಮಾತನಾಡಿದ್ದಾರೆ. ಮೊದಲ ಪ್ರಯತ್ನಕ್ಕೆ ಇಷ್ಟೊಂದು ಮೆಚ್ಚುಗೆ ಸಿಗುತ್ತಿರುವುದಕ್ಕೆ ಕಿರಣ್ ರಾಜ್ ಖುಷಿಯಾಗಿದ್ದಾರೆ.

ಬಾಕ್ಸ್ ಆಫೀಸ್​ನಲ್ಲೂ ‘777 ಚಾರ್ಲಿ’ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಮೊದಲ ವಾರಾಂತ್ಯಕ್ಕೆ 20 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುತ್ತಿದೆ. ಈ ವಾರವೂ ಅನೇಕ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಶೀಘ್ರವೇ ಸಿನಿಮಾ 50 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘777 ಚಾರ್ಲಿ ಪಾರ್ಟ್​ 2’: ಸೀಕ್ವೆಲ್​ ಬಗ್ಗೆ ತಮ್ಮ ನಿರ್ಧಾರ ಏನೆಂದು ಸ್ಪಷ್ಟವಾಗಿ ತಿಳಿಸಿದ ರಕ್ಷಿತ್​ ಶೆಟ್ಟಿ

ಜಾನ್​ ಅಬ್ರಾಹಂ ನಟನೆಯ ‘ಅಟ್ಯಾಕ್​’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾ ಮಕಾಡೆ ಮಲಗಿದೆ. ಈ ಚಿತ್ರ ಗೆಲ್ಲಲಿಲ್ಲ. ಈ ಚಿತ್ರದ ಪ್ರಚಾರದ ವೇಳೆ ಜಾನ್ ಅಬ್ರಾಹಂ ಆಡಿದ ಮಾತು ಅನೇಕರ ಕೋಪಕ್ಕೆ ಕಾರಣವಾಗಿತ್ತು. ‘ನಾನು ಬಾಲಿವುಡ್ ನಟ. ಪ್ರಾದೇಶಿಕ ಸಿನಿಮಾಗಳಲ್ಲಿ ನಾನು ನಟಿಸಲ್ಲ’ ಎಂದು ಹೇಳಿದ್ದರು. ಆದರೆ, ಈಗ ಅವರಿಂದ ಪ್ರಾದೇಶಿಕ ಸಿನಿಮಾಗಳಿಗೆ ಬೆಂಬಲ ಸಿಗುತ್ತಿರುವುದು ನಿಜಕ್ಕೂ ಶ್ಲಾಘನೀಯ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:30 pm, Wed, 15 June 22

ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್