AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ದಸರಾ ವೇದಿಕೆ ಮೇಲೆ ಕನ್ನಡದ ಈ ನಟನ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಬಾದ್​ಶಾ ಅವರು ಬಾಲಿವುಡ್ ಸಿಂಗರ್. ಅವರು ಜನಿಸಿದ್ದು ದೆಹಲಿಯಲ್ಲಿ. ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು.

ಯುವ ದಸರಾ ವೇದಿಕೆ ಮೇಲೆ ಕನ್ನಡದ ಈ ನಟನ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ
ಬಾದ್​ಶಾ
ರಾಜೇಶ್ ದುಗ್ಗುಮನೆ
|

Updated on:Oct 09, 2024 | 10:39 AM

Share

ಮೈಸೂರಿನಲ್ಲಿ ‘ಯುವ ದಸರಾ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 8ರಂದು ಬಾಲಿವುಡ್ ಗಾಯಕ ಬಾದ್​ಶಾ ಆಗಮಿಸಿದ್ದರು. ಕನ್ನಡದಲ್ಲಿ ಮಾತನಾಡಿದ್ದೂ ಅಲ್ಲದೆ, ಕನ್ನಡದ ಒಂದು ಹಾಡು ಕೇಳಿ ಅವರು ಸಖತ್ ಎಮೋಷನಲ್ ಆದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ಸ್ ಮಾಡುತ್ತಿದ್ದಾರೆ.

ಕನ್ನಡದಲ್ಲಿ ಮಾತನಾಡಿದ ಬಾದ್​ಶಾ, ‘ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಸಿಂಗರ್ ಅಲ್ಲ, ನಾನು ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದು ಗೊತ್ತಷ್ಟೇ. ನಾನು ಫೀಲೀಂಗ್ಸ್​ನ ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಕನ್ನಡದಲ್ಲಿ ಮಾತನಾಡಿದರು ಬಾದ್​ಶಾ. ಅವರ ಈ ಮಾತು ಕೇಳಿ ನೆರೆದಿದ್ದವರು ಥ್ರಿಲ್ ಆದರು.

ಆ ಬಳಿಕ ಪುನೀತ್ ರಾಜ್​ಕುಮಾರ್ ಅವರ  ನಟನೆಯ ‘ರಾಜಕುಮಾರ’ ಚಿತ್ರದ ‘ಗೊಂಬೆ ಹೇಳುತೈತೆ..’ ಹಾಡನ್ನು ಹಾಕಲಾಯಿತು. ಈ ವೇಳೆ ಬಾದ್​ಶಾ ಅವರು ಎಮೋಷನಲ್ ಆದರು. ಅವರಿಗೆ ಹಾಡಲೂ ಆಗದೆ ಒಂದು ಕಡೆಯಲ್ಲಿ ಕುಳಿತು, ಕೈ ಮುಗಿದು ಬಿಟ್ಟರು. ಪುನೀತ್ ರಾಜ್​ಕುಮಾರ್ ಮೇಲೆ ಅವರಿಗೆ ಇರೋ ಗೌರವವನ್ನು ಇದು ತೋರಿಸುತ್ತದೆ.

ಇದನ್ನೂ ಓದಿ: ಗಾಯಕ ಬಾದ್​ಶಾ ಬಳಿ ಇದೆ 22 ಲಕ್ಷ ಬೆಲೆಯ ಶೂ, ರೋಲ್ಸ್ ರಾಯ್ಸ್ ಕಾರು ವೇಸ್ಟ್ ಅಂತೆ

ಆದಿತ್ಯ ಪ್ರತೀಕ್ ಸಿಂಗ್ ಅನ್ನೋದು ಅವರ ಹೆಸರು. ಅವರು ಬಾಲಿವುಡ್​ನಲ್ಲಿ ಬಾದ್​ಶಾ ಎಂದೇ ಫೇಮಸ್ ಆಗಿದ್ದಾರೆ. ಅವರು ಜನಿಸಿದ್ದು ದೆಹಲಿಯಲ್ಲಿ. ಅವರು ರ‍್ಯಾಪರ್, ಸಿಂಗರ್, ಗೀತ ಸಾಹಿತಿ, ನಿರ್ಮಾಪಕ ಕೂಡ ಹೌದು. ಅವರು ಕೆಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ಅಭಿ ತೋ ಪಾರ್ಟಿ ಶುರು ಹುಯೀ ಹೇ’, ‘ಸೆಲ್ಫಿ ಲೇ ಲೇ ರೇ..’ ರೀತಿಯ ಹಾಡುಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:04 am, Wed, 9 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!