ಯುವ ದಸರಾ ವೇದಿಕೆ ಮೇಲೆ ಕನ್ನಡದ ಈ ನಟನ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಬಾದ್​ಶಾ ಅವರು ಬಾಲಿವುಡ್ ಸಿಂಗರ್. ಅವರು ಜನಿಸಿದ್ದು ದೆಹಲಿಯಲ್ಲಿ. ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು.

ಯುವ ದಸರಾ ವೇದಿಕೆ ಮೇಲೆ ಕನ್ನಡದ ಈ ನಟನ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ
ಬಾದ್​ಶಾ
Follow us
|

Updated on:Oct 09, 2024 | 10:39 AM

ಮೈಸೂರಿನಲ್ಲಿ ‘ಯುವ ದಸರಾ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 8ರಂದು ಬಾಲಿವುಡ್ ಗಾಯಕ ಬಾದ್​ಶಾ ಆಗಮಿಸಿದ್ದರು. ಕನ್ನಡದಲ್ಲಿ ಮಾತನಾಡಿದ್ದೂ ಅಲ್ಲದೆ, ಕನ್ನಡದ ಒಂದು ಹಾಡು ಕೇಳಿ ಅವರು ಸಖತ್ ಎಮೋಷನಲ್ ಆದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ಸ್ ಮಾಡುತ್ತಿದ್ದಾರೆ.

ಕನ್ನಡದಲ್ಲಿ ಮಾತನಾಡಿದ ಬಾದ್​ಶಾ, ‘ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಸಿಂಗರ್ ಅಲ್ಲ, ನಾನು ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದು ಗೊತ್ತಷ್ಟೇ. ನಾನು ಫೀಲೀಂಗ್ಸ್​ನ ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಕನ್ನಡದಲ್ಲಿ ಮಾತನಾಡಿದರು ಬಾದ್​ಶಾ. ಅವರ ಈ ಮಾತು ಕೇಳಿ ನೆರೆದಿದ್ದವರು ಥ್ರಿಲ್ ಆದರು.

ಆ ಬಳಿಕ ಪುನೀತ್ ರಾಜ್​ಕುಮಾರ್ ಅವರ  ನಟನೆಯ ‘ರಾಜಕುಮಾರ’ ಚಿತ್ರದ ‘ಗೊಂಬೆ ಹೇಳುತೈತೆ..’ ಹಾಡನ್ನು ಹಾಕಲಾಯಿತು. ಈ ವೇಳೆ ಬಾದ್​ಶಾ ಅವರು ಎಮೋಷನಲ್ ಆದರು. ಅವರಿಗೆ ಹಾಡಲೂ ಆಗದೆ ಒಂದು ಕಡೆಯಲ್ಲಿ ಕುಳಿತು, ಕೈ ಮುಗಿದು ಬಿಟ್ಟರು. ಪುನೀತ್ ರಾಜ್​ಕುಮಾರ್ ಮೇಲೆ ಅವರಿಗೆ ಇರೋ ಗೌರವವನ್ನು ಇದು ತೋರಿಸುತ್ತದೆ.

ಇದನ್ನೂ ಓದಿ: ಗಾಯಕ ಬಾದ್​ಶಾ ಬಳಿ ಇದೆ 22 ಲಕ್ಷ ಬೆಲೆಯ ಶೂ, ರೋಲ್ಸ್ ರಾಯ್ಸ್ ಕಾರು ವೇಸ್ಟ್ ಅಂತೆ

ಆದಿತ್ಯ ಪ್ರತೀಕ್ ಸಿಂಗ್ ಅನ್ನೋದು ಅವರ ಹೆಸರು. ಅವರು ಬಾಲಿವುಡ್​ನಲ್ಲಿ ಬಾದ್​ಶಾ ಎಂದೇ ಫೇಮಸ್ ಆಗಿದ್ದಾರೆ. ಅವರು ಜನಿಸಿದ್ದು ದೆಹಲಿಯಲ್ಲಿ. ಅವರು ರ‍್ಯಾಪರ್, ಸಿಂಗರ್, ಗೀತ ಸಾಹಿತಿ, ನಿರ್ಮಾಪಕ ಕೂಡ ಹೌದು. ಅವರು ಕೆಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ಅಭಿ ತೋ ಪಾರ್ಟಿ ಶುರು ಹುಯೀ ಹೇ’, ‘ಸೆಲ್ಫಿ ಲೇ ಲೇ ರೇ..’ ರೀತಿಯ ಹಾಡುಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:04 am, Wed, 9 October 24

ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!