AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ. ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ […]

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ
ಸಾಧು ಶ್ರೀನಾಥ್​
|

Updated on:Dec 16, 2019 | 4:18 PM

Share

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ.

ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ ಬಗ್ಗೆ ಕಂಗನಾ ಹೇಳಿದ್ದನ್ನ ಕೇಳಿ ಅಭಿಮಾನಿಗಳು ಹೀಗೂ ಉಂಟೇ ಅಂತಿದ್ದಾರೆ.

ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರತಂಡ ಇತ್ತೀಚೆಗೆ ತಲೈವಿ ಸಿನಿಮಾದ ಚಿತ್ರೀಕರಣ ಮಾಡುತ್ತಿತ್ತಂತೆ. ಈ ವೇಳೆ ಕಂಗನಾನನ್ನ ಕಂಡ ಅಭಿಮಾನಿಗಳು ಹಾಗೂ ಅಲ್ಲಿಯೇ ಇದ್ದ ಸುತ್ತಮುತ್ತಲಿನ ಜನ್ರು ಕಂಗನಾ ಜೊತೆ ಸೆಲ್ಫಿ ತೆಗೆದುಕೊಳ್ಳೊಕೆ ಮುಗಿಬಿದ್ದಿದ್ರಂತೆ. ಆಗ ಕಂಗನಾಗೆ ಕೊಂಚ ಇರಿಟೇಶನ್ ಕೂಡ ಆಗಿ ನಂತರ ಶೂಟಿಂಗ್ ಸ್ಪಾಟ್‌​​ನಲ್ಲಿ ಮೊಬೈಲ್ ತರದ ಹಾಗೆ ನೋಡಿಕೊಳ್ಳುವಂತೆ ಸೂಚಿಸಿದ್ರಂತೆ.

ಕಂಗನಾ ತಲೈವಿ ಅವತಾರಕ್ಕೆ ಅಭಿಮಾನಿಗಳು ದಿಲ್ ಖುಷ್ ಆಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆದ್ರೆ ಸೌತ್ ಸಿನಿರಸಿಕರ ಕ್ರೇಜಿ ಕ್ವೀನ್ ತಾರೆಗೆ ಇರಿಸು ಮುರಿಸು ಉಂಟಾ ಮಾಡಿದೆ. ಹೀಗಾಗಿ ಸುತ್ತಲಿದ್ದ ಬೌನ್ಸರ್​ಗಳ ಸಹಾಯದಿಂದ ಕಂಗನಾ ಪಾರಾಗಿ ಹೊರ ಬಂದ ನಂತರ ಅಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಜಯಲಲಿತಾ ಪಾತ್ರದಲ್ಲಿರುವ ಕಂಗನಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಪಾತ್ರವನ್ನ ಕೆಲ ಅಭಿಮಾನಿಗಳು ಇಷ್ಟ ಪಟ್ಟರೆ, ಕೆಲವರು ಕಂಗನಾಗೆ ಈ ಪಾತ್ರ ಅಷ್ಟೊಂದು ಮ್ಯಾಚ್ ಆಗಿಲ್ಲ ಅನ್ನೋ ಅಭಿಪ್ರಾಯ ಹೊರ ಹಾಕಿದ್ದಾರೆ. ಈ ನಡುವೆ ಸೌತ್ ಸಿನಿರಸಿಕರ ಕ್ರೇಜ್‌ಗೆ ಕಂಗಾನಾ ತಬ್ಬಿಬ್ಬು ಆಗಿದ್ದು ಮಾತ್ರ ಸುಳ್ಳಲ್ಲ.

Published On - 4:13 pm, Mon, 16 December 19

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!