AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ. ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ […]

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ
ಸಾಧು ಶ್ರೀನಾಥ್​
|

Updated on:Dec 16, 2019 | 4:18 PM

Share

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ.

ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ ಬಗ್ಗೆ ಕಂಗನಾ ಹೇಳಿದ್ದನ್ನ ಕೇಳಿ ಅಭಿಮಾನಿಗಳು ಹೀಗೂ ಉಂಟೇ ಅಂತಿದ್ದಾರೆ.

ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರತಂಡ ಇತ್ತೀಚೆಗೆ ತಲೈವಿ ಸಿನಿಮಾದ ಚಿತ್ರೀಕರಣ ಮಾಡುತ್ತಿತ್ತಂತೆ. ಈ ವೇಳೆ ಕಂಗನಾನನ್ನ ಕಂಡ ಅಭಿಮಾನಿಗಳು ಹಾಗೂ ಅಲ್ಲಿಯೇ ಇದ್ದ ಸುತ್ತಮುತ್ತಲಿನ ಜನ್ರು ಕಂಗನಾ ಜೊತೆ ಸೆಲ್ಫಿ ತೆಗೆದುಕೊಳ್ಳೊಕೆ ಮುಗಿಬಿದ್ದಿದ್ರಂತೆ. ಆಗ ಕಂಗನಾಗೆ ಕೊಂಚ ಇರಿಟೇಶನ್ ಕೂಡ ಆಗಿ ನಂತರ ಶೂಟಿಂಗ್ ಸ್ಪಾಟ್‌​​ನಲ್ಲಿ ಮೊಬೈಲ್ ತರದ ಹಾಗೆ ನೋಡಿಕೊಳ್ಳುವಂತೆ ಸೂಚಿಸಿದ್ರಂತೆ.

ಕಂಗನಾ ತಲೈವಿ ಅವತಾರಕ್ಕೆ ಅಭಿಮಾನಿಗಳು ದಿಲ್ ಖುಷ್ ಆಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆದ್ರೆ ಸೌತ್ ಸಿನಿರಸಿಕರ ಕ್ರೇಜಿ ಕ್ವೀನ್ ತಾರೆಗೆ ಇರಿಸು ಮುರಿಸು ಉಂಟಾ ಮಾಡಿದೆ. ಹೀಗಾಗಿ ಸುತ್ತಲಿದ್ದ ಬೌನ್ಸರ್​ಗಳ ಸಹಾಯದಿಂದ ಕಂಗನಾ ಪಾರಾಗಿ ಹೊರ ಬಂದ ನಂತರ ಅಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಜಯಲಲಿತಾ ಪಾತ್ರದಲ್ಲಿರುವ ಕಂಗನಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಪಾತ್ರವನ್ನ ಕೆಲ ಅಭಿಮಾನಿಗಳು ಇಷ್ಟ ಪಟ್ಟರೆ, ಕೆಲವರು ಕಂಗನಾಗೆ ಈ ಪಾತ್ರ ಅಷ್ಟೊಂದು ಮ್ಯಾಚ್ ಆಗಿಲ್ಲ ಅನ್ನೋ ಅಭಿಪ್ರಾಯ ಹೊರ ಹಾಕಿದ್ದಾರೆ. ಈ ನಡುವೆ ಸೌತ್ ಸಿನಿರಸಿಕರ ಕ್ರೇಜ್‌ಗೆ ಕಂಗಾನಾ ತಬ್ಬಿಬ್ಬು ಆಗಿದ್ದು ಮಾತ್ರ ಸುಳ್ಳಲ್ಲ.

Published On - 4:13 pm, Mon, 16 December 19

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!