AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ. ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ […]

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ
ಸಾಧು ಶ್ರೀನಾಥ್​
|

Updated on:Dec 16, 2019 | 4:18 PM

Share

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ.

ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ ಬಗ್ಗೆ ಕಂಗನಾ ಹೇಳಿದ್ದನ್ನ ಕೇಳಿ ಅಭಿಮಾನಿಗಳು ಹೀಗೂ ಉಂಟೇ ಅಂತಿದ್ದಾರೆ.

ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರತಂಡ ಇತ್ತೀಚೆಗೆ ತಲೈವಿ ಸಿನಿಮಾದ ಚಿತ್ರೀಕರಣ ಮಾಡುತ್ತಿತ್ತಂತೆ. ಈ ವೇಳೆ ಕಂಗನಾನನ್ನ ಕಂಡ ಅಭಿಮಾನಿಗಳು ಹಾಗೂ ಅಲ್ಲಿಯೇ ಇದ್ದ ಸುತ್ತಮುತ್ತಲಿನ ಜನ್ರು ಕಂಗನಾ ಜೊತೆ ಸೆಲ್ಫಿ ತೆಗೆದುಕೊಳ್ಳೊಕೆ ಮುಗಿಬಿದ್ದಿದ್ರಂತೆ. ಆಗ ಕಂಗನಾಗೆ ಕೊಂಚ ಇರಿಟೇಶನ್ ಕೂಡ ಆಗಿ ನಂತರ ಶೂಟಿಂಗ್ ಸ್ಪಾಟ್‌​​ನಲ್ಲಿ ಮೊಬೈಲ್ ತರದ ಹಾಗೆ ನೋಡಿಕೊಳ್ಳುವಂತೆ ಸೂಚಿಸಿದ್ರಂತೆ.

ಕಂಗನಾ ತಲೈವಿ ಅವತಾರಕ್ಕೆ ಅಭಿಮಾನಿಗಳು ದಿಲ್ ಖುಷ್ ಆಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆದ್ರೆ ಸೌತ್ ಸಿನಿರಸಿಕರ ಕ್ರೇಜಿ ಕ್ವೀನ್ ತಾರೆಗೆ ಇರಿಸು ಮುರಿಸು ಉಂಟಾ ಮಾಡಿದೆ. ಹೀಗಾಗಿ ಸುತ್ತಲಿದ್ದ ಬೌನ್ಸರ್​ಗಳ ಸಹಾಯದಿಂದ ಕಂಗನಾ ಪಾರಾಗಿ ಹೊರ ಬಂದ ನಂತರ ಅಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಜಯಲಲಿತಾ ಪಾತ್ರದಲ್ಲಿರುವ ಕಂಗನಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಪಾತ್ರವನ್ನ ಕೆಲ ಅಭಿಮಾನಿಗಳು ಇಷ್ಟ ಪಟ್ಟರೆ, ಕೆಲವರು ಕಂಗನಾಗೆ ಈ ಪಾತ್ರ ಅಷ್ಟೊಂದು ಮ್ಯಾಚ್ ಆಗಿಲ್ಲ ಅನ್ನೋ ಅಭಿಪ್ರಾಯ ಹೊರ ಹಾಕಿದ್ದಾರೆ. ಈ ನಡುವೆ ಸೌತ್ ಸಿನಿರಸಿಕರ ಕ್ರೇಜ್‌ಗೆ ಕಂಗಾನಾ ತಬ್ಬಿಬ್ಬು ಆಗಿದ್ದು ಮಾತ್ರ ಸುಳ್ಳಲ್ಲ.

Published On - 4:13 pm, Mon, 16 December 19

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್