AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ. ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ […]

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 4:18 PM

Share

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ.

ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ ಬಗ್ಗೆ ಕಂಗನಾ ಹೇಳಿದ್ದನ್ನ ಕೇಳಿ ಅಭಿಮಾನಿಗಳು ಹೀಗೂ ಉಂಟೇ ಅಂತಿದ್ದಾರೆ.

ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರತಂಡ ಇತ್ತೀಚೆಗೆ ತಲೈವಿ ಸಿನಿಮಾದ ಚಿತ್ರೀಕರಣ ಮಾಡುತ್ತಿತ್ತಂತೆ. ಈ ವೇಳೆ ಕಂಗನಾನನ್ನ ಕಂಡ ಅಭಿಮಾನಿಗಳು ಹಾಗೂ ಅಲ್ಲಿಯೇ ಇದ್ದ ಸುತ್ತಮುತ್ತಲಿನ ಜನ್ರು ಕಂಗನಾ ಜೊತೆ ಸೆಲ್ಫಿ ತೆಗೆದುಕೊಳ್ಳೊಕೆ ಮುಗಿಬಿದ್ದಿದ್ರಂತೆ. ಆಗ ಕಂಗನಾಗೆ ಕೊಂಚ ಇರಿಟೇಶನ್ ಕೂಡ ಆಗಿ ನಂತರ ಶೂಟಿಂಗ್ ಸ್ಪಾಟ್‌​​ನಲ್ಲಿ ಮೊಬೈಲ್ ತರದ ಹಾಗೆ ನೋಡಿಕೊಳ್ಳುವಂತೆ ಸೂಚಿಸಿದ್ರಂತೆ.

ಕಂಗನಾ ತಲೈವಿ ಅವತಾರಕ್ಕೆ ಅಭಿಮಾನಿಗಳು ದಿಲ್ ಖುಷ್ ಆಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆದ್ರೆ ಸೌತ್ ಸಿನಿರಸಿಕರ ಕ್ರೇಜಿ ಕ್ವೀನ್ ತಾರೆಗೆ ಇರಿಸು ಮುರಿಸು ಉಂಟಾ ಮಾಡಿದೆ. ಹೀಗಾಗಿ ಸುತ್ತಲಿದ್ದ ಬೌನ್ಸರ್​ಗಳ ಸಹಾಯದಿಂದ ಕಂಗನಾ ಪಾರಾಗಿ ಹೊರ ಬಂದ ನಂತರ ಅಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಜಯಲಲಿತಾ ಪಾತ್ರದಲ್ಲಿರುವ ಕಂಗನಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಪಾತ್ರವನ್ನ ಕೆಲ ಅಭಿಮಾನಿಗಳು ಇಷ್ಟ ಪಟ್ಟರೆ, ಕೆಲವರು ಕಂಗನಾಗೆ ಈ ಪಾತ್ರ ಅಷ್ಟೊಂದು ಮ್ಯಾಚ್ ಆಗಿಲ್ಲ ಅನ್ನೋ ಅಭಿಪ್ರಾಯ ಹೊರ ಹಾಕಿದ್ದಾರೆ. ಈ ನಡುವೆ ಸೌತ್ ಸಿನಿರಸಿಕರ ಕ್ರೇಜ್‌ಗೆ ಕಂಗಾನಾ ತಬ್ಬಿಬ್ಬು ಆಗಿದ್ದು ಮಾತ್ರ ಸುಳ್ಳಲ್ಲ.

Published On - 4:13 pm, Mon, 16 December 19

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ