AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ. ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ […]

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 4:18 PM

Share

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ.

ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ ಬಗ್ಗೆ ಕಂಗನಾ ಹೇಳಿದ್ದನ್ನ ಕೇಳಿ ಅಭಿಮಾನಿಗಳು ಹೀಗೂ ಉಂಟೇ ಅಂತಿದ್ದಾರೆ.

ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರತಂಡ ಇತ್ತೀಚೆಗೆ ತಲೈವಿ ಸಿನಿಮಾದ ಚಿತ್ರೀಕರಣ ಮಾಡುತ್ತಿತ್ತಂತೆ. ಈ ವೇಳೆ ಕಂಗನಾನನ್ನ ಕಂಡ ಅಭಿಮಾನಿಗಳು ಹಾಗೂ ಅಲ್ಲಿಯೇ ಇದ್ದ ಸುತ್ತಮುತ್ತಲಿನ ಜನ್ರು ಕಂಗನಾ ಜೊತೆ ಸೆಲ್ಫಿ ತೆಗೆದುಕೊಳ್ಳೊಕೆ ಮುಗಿಬಿದ್ದಿದ್ರಂತೆ. ಆಗ ಕಂಗನಾಗೆ ಕೊಂಚ ಇರಿಟೇಶನ್ ಕೂಡ ಆಗಿ ನಂತರ ಶೂಟಿಂಗ್ ಸ್ಪಾಟ್‌​​ನಲ್ಲಿ ಮೊಬೈಲ್ ತರದ ಹಾಗೆ ನೋಡಿಕೊಳ್ಳುವಂತೆ ಸೂಚಿಸಿದ್ರಂತೆ.

ಕಂಗನಾ ತಲೈವಿ ಅವತಾರಕ್ಕೆ ಅಭಿಮಾನಿಗಳು ದಿಲ್ ಖುಷ್ ಆಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆದ್ರೆ ಸೌತ್ ಸಿನಿರಸಿಕರ ಕ್ರೇಜಿ ಕ್ವೀನ್ ತಾರೆಗೆ ಇರಿಸು ಮುರಿಸು ಉಂಟಾ ಮಾಡಿದೆ. ಹೀಗಾಗಿ ಸುತ್ತಲಿದ್ದ ಬೌನ್ಸರ್​ಗಳ ಸಹಾಯದಿಂದ ಕಂಗನಾ ಪಾರಾಗಿ ಹೊರ ಬಂದ ನಂತರ ಅಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಜಯಲಲಿತಾ ಪಾತ್ರದಲ್ಲಿರುವ ಕಂಗನಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಪಾತ್ರವನ್ನ ಕೆಲ ಅಭಿಮಾನಿಗಳು ಇಷ್ಟ ಪಟ್ಟರೆ, ಕೆಲವರು ಕಂಗನಾಗೆ ಈ ಪಾತ್ರ ಅಷ್ಟೊಂದು ಮ್ಯಾಚ್ ಆಗಿಲ್ಲ ಅನ್ನೋ ಅಭಿಪ್ರಾಯ ಹೊರ ಹಾಕಿದ್ದಾರೆ. ಈ ನಡುವೆ ಸೌತ್ ಸಿನಿರಸಿಕರ ಕ್ರೇಜ್‌ಗೆ ಕಂಗಾನಾ ತಬ್ಬಿಬ್ಬು ಆಗಿದ್ದು ಮಾತ್ರ ಸುಳ್ಳಲ್ಲ.

Published On - 4:13 pm, Mon, 16 December 19

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​