AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ. ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ […]

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 4:18 PM

Share

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ.

ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ ಬಗ್ಗೆ ಕಂಗನಾ ಹೇಳಿದ್ದನ್ನ ಕೇಳಿ ಅಭಿಮಾನಿಗಳು ಹೀಗೂ ಉಂಟೇ ಅಂತಿದ್ದಾರೆ.

ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರತಂಡ ಇತ್ತೀಚೆಗೆ ತಲೈವಿ ಸಿನಿಮಾದ ಚಿತ್ರೀಕರಣ ಮಾಡುತ್ತಿತ್ತಂತೆ. ಈ ವೇಳೆ ಕಂಗನಾನನ್ನ ಕಂಡ ಅಭಿಮಾನಿಗಳು ಹಾಗೂ ಅಲ್ಲಿಯೇ ಇದ್ದ ಸುತ್ತಮುತ್ತಲಿನ ಜನ್ರು ಕಂಗನಾ ಜೊತೆ ಸೆಲ್ಫಿ ತೆಗೆದುಕೊಳ್ಳೊಕೆ ಮುಗಿಬಿದ್ದಿದ್ರಂತೆ. ಆಗ ಕಂಗನಾಗೆ ಕೊಂಚ ಇರಿಟೇಶನ್ ಕೂಡ ಆಗಿ ನಂತರ ಶೂಟಿಂಗ್ ಸ್ಪಾಟ್‌​​ನಲ್ಲಿ ಮೊಬೈಲ್ ತರದ ಹಾಗೆ ನೋಡಿಕೊಳ್ಳುವಂತೆ ಸೂಚಿಸಿದ್ರಂತೆ.

ಕಂಗನಾ ತಲೈವಿ ಅವತಾರಕ್ಕೆ ಅಭಿಮಾನಿಗಳು ದಿಲ್ ಖುಷ್ ಆಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆದ್ರೆ ಸೌತ್ ಸಿನಿರಸಿಕರ ಕ್ರೇಜಿ ಕ್ವೀನ್ ತಾರೆಗೆ ಇರಿಸು ಮುರಿಸು ಉಂಟಾ ಮಾಡಿದೆ. ಹೀಗಾಗಿ ಸುತ್ತಲಿದ್ದ ಬೌನ್ಸರ್​ಗಳ ಸಹಾಯದಿಂದ ಕಂಗನಾ ಪಾರಾಗಿ ಹೊರ ಬಂದ ನಂತರ ಅಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಜಯಲಲಿತಾ ಪಾತ್ರದಲ್ಲಿರುವ ಕಂಗನಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಪಾತ್ರವನ್ನ ಕೆಲ ಅಭಿಮಾನಿಗಳು ಇಷ್ಟ ಪಟ್ಟರೆ, ಕೆಲವರು ಕಂಗನಾಗೆ ಈ ಪಾತ್ರ ಅಷ್ಟೊಂದು ಮ್ಯಾಚ್ ಆಗಿಲ್ಲ ಅನ್ನೋ ಅಭಿಪ್ರಾಯ ಹೊರ ಹಾಕಿದ್ದಾರೆ. ಈ ನಡುವೆ ಸೌತ್ ಸಿನಿರಸಿಕರ ಕ್ರೇಜ್‌ಗೆ ಕಂಗಾನಾ ತಬ್ಬಿಬ್ಬು ಆಗಿದ್ದು ಮಾತ್ರ ಸುಳ್ಳಲ್ಲ.

Published On - 4:13 pm, Mon, 16 December 19

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’