AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Movies: ‘ಬಾಂಡ್​ ರವಿ’, ‘ವಿಜಯಾನಂದ’ ಜತೆ ರಿಲೀಸ್​ ಆಗ್ತಿವೆ ಸಿಕ್ಕಾಪಟ್ಟೆ ಸಿನಿಮಾ; ಈ ವಾರ 18ಕ್ಕೂ ಹೆಚ್ಚು ಚಿತ್ರ

This Week Movie Release: ವರ್ಷಾಂತ್ಯಕ್ಕೆ ಸಾಲು ಸಾಲು ಸಿನಿಮಾಗಳು ತೆರೆಕಾಣುತ್ತಿವೆ. ಬೇರೆ ಬೇರೆ ಕಾರಣಗಳಿಂದ ಈ ಚಿತ್ರಗಳು ನಿರೀಕ್ಷೆ ಮೂಡಿಸಿವೆ. ಎಲ್ಲ ಭಾಷೆಗಳಿಂದ ಸೇರಿ ಈ ವಾರ (ಡಿ.9) 18ಕ್ಕೂ ಅಧಿಕ ಸಿನಿಮಾಗಳು ರಿಲೀಸ್​ ಆಗುತ್ತಿವೆ.

New Movies: ‘ಬಾಂಡ್​ ರವಿ’, ‘ವಿಜಯಾನಂದ’ ಜತೆ ರಿಲೀಸ್​ ಆಗ್ತಿವೆ ಸಿಕ್ಕಾಪಟ್ಟೆ ಸಿನಿಮಾ; ಈ ವಾರ 18ಕ್ಕೂ ಹೆಚ್ಚು ಚಿತ್ರ
ಡಿ.9ಕ್ಕೆ 18ಕ್ಕೂ ಹೆಚ್ಚು ಸಿನಿಮಾಗಳು ರಿಲೀಸ್
TV9 Web
| Edited By: |

Updated on: Dec 08, 2022 | 1:41 PM

Share

ವರ್ಷದ ಕೊನೇ ತಿಂಗಳಲ್ಲಿ ಸಿನಿಮಾಗಳ ಪ್ರವಾಹವೇ ಆಗುತ್ತಿದೆ ಎನ್ನಬಹುದು. ಅನೇಕರು ಡಿಸೆಂಬರ್​ ತಿಂಗಳನ್ನು ಲಕ್ಕಿ ಅಂತ ಪರಿಗಣಿಸುತ್ತಾರೆ. ಹಲವು ಸಿನಿಮಾಗಳು ಈ ತಿಂಗಳಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆಗಿದ್ದುಂಟು. ಅದೇ ಕಾರಣಕ್ಕೋ ಏನೋ ಅನೇಕ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈ ವಾರ (ಡಿ.9) ಬರೋಬ್ಬರಿ 18ಕ್ಕೂ ಅಧಿಕ ಸಿನಿಮಾಗಳು (New Movies Release) ರಿಲೀಸ್​ ಆಗುತ್ತಿವೆ. ಕನ್ನಡದಲ್ಲೇ 10ಕ್ಕೂ ಹೆಚ್ಚು ಚಿತ್ರಗಳಿವೆ. ಆ ಪೈಕಿ ‘ಬಾಂಡ್​ ರವಿ’ (Bond Ravi), ‘ವಿಜಯಾನಂದ’ ಮುಂತಾದ ಸಿನಿಮಾಗಳು ನಿರೀಕ್ಷೆ ಮೂಡಿಸಿವೆ. ಪರಭಾಷೆಯಲ್ಲೂ ಕೆಲವು ಚಿತ್ರಗಳು ಸದ್ದು ಮಾಡುತ್ತಾ ಥಿಯೇಟರ್​ಗೆ ಬರುತ್ತಿವೆ. ಈ ವಾರ ಬಿಡುಗಡೆ ಆಗುತ್ತಿರುವ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ..

‘ಬಾಂಡ್​ ರವಿ’ ಚಿತ್ರದಲ್ಲಿ ಪ್ರಮೋದ್​ ಮಾಸ್​ ಲುಕ್​:

ನಟ ಪ್ರಮೋದ್​ ಅವರು ಈಗಾಗಲೇ ಅನೇಕ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಈ ಬಾರಿ ಅವರು ‘ಬಾಂಡ್​ ರವಿ’ ಚಿತ್ರದಲ್ಲಿ ಸಖತ್​ ಮಾಸ್​ ಆಗಿ ಎಂಟ್ರಿ ನೀಡುತ್ತಿದ್ದಾರೆ. ನೆಗೆಟಿವ್​ ಶೇಡ್​ ಇರುವಂತಹ ಪಾತ್ರವನ್ನು ಅವರು ನಿಭಾಯಿಸಿದ್ದಾರೆ ಎಂಬುದಕ್ಕೆ ಈ ಸಿನಿಮಾದ ಟ್ರೇಲರ್​ ಸುಳಿವು ನೀಡಿದೆ. ನರಸಿಂಹ ಮೂರ್ತಿ ವಿ. ನಿರ್ಮಾಣದ ಈ ಚಿತ್ರಕ್ಕೆ ಪ್ರಜ್ವಲ್​ ಎಸ್​.ಪಿ. ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ
Image
Kajol: ಮದುವೆ ಬಳಿಕ 2 ತಿಂಗಳಲ್ಲಿ 8 ಕೆಜಿ ತೂಕ ಜಾಸ್ತಿ ಆಗಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಕಾಜೋಲ್​
Image
ವಿಜಯ ಸಂಕೇಶ್ವರ ಅವರ ಯಶಸ್ಸಿನ ಹಾದಿ ನೆನೆದ ಸಿಎಂ ಬಸವರಾಜ ಬೊಮ್ಮಾಯಿ
Image
ಉದ್ಯಮಿ ವಿಜಯ ಸಂಕೇಶ್ವರ ಸಾಧನೆ ಕಟ್ಟಿಕೊಟ್ಟ ‘ವಿಜಯಾನಂದ’ ಸಿನಿಮಾ ಟ್ರೇಲರ್

ವಿಜಯ್​ ಸಂಕೇಶ್ವರ ಬಯೋಪಿಕ್​ ‘ವಿಜಯಾನಂದ’:

ಕರುನಾಡಿನ ಯಶಸ್ವಿ ಉದ್ಯಮಿ ವಿಜಯ್​ ಸಂಕೇಶ್ವರ ಅವರ ಜೀವನದ ವಿವರಗಳನ್ನು ಇಟ್ಟುಕೊಂಡು ‘ವಿಜಯಾನಂದ’ ಸಿನಿಮಾ ಮೂಡಿಬಂದಿದೆ. ನಿಹಾಲ್​, ಸಿರಿ ಪ್ರಹ್ಲಾದ್​ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಿಶಿಕಾ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ.

‘ನಾನೇ ನರರಾಕ್ಷಸ’, ‘ಸುನಾಮಿ 143’, ‘ಪ್ರಾಯಶಃ’, ‘ಪಂಖುರಿ’, ‘ಮೈಸೂರು ಡೈರೀಸ್​’, ‘ಕ್ಷೇಮಗಿರಿಯಲ್ಲಿ ಕರ್ನಾಟಕ’, ‘ದ್ವಿಪಾತ್ರ’, ‘ಡಾ. 56’ ಸಿನಿಮಾಗಳು ಕೂಡ ಈ ವಾರ ತೆರೆಕಾಣುತ್ತಿವೆ. ಯಾವುದನ್ನು ನೋಡೋದು, ಯಾವುದನ್ನು ಬಿಡೋದು ಎಂಬ ಗೊಂದಲದಲ್ಲಿ ಪ್ರೇಕ್ಷಕರಿದ್ದಾರೆ.

‘ಸಲಾಂ ವೆಂಕಿ’ ಚಿತ್ರದಲ್ಲಿ ಕಾಜೋಲ್​:

ಹಿಂದಿಯಲ್ಲಿ ನಟಿ ಕಾಜೋಲ್​ ಅಭಿನಯದ ‘ಸಲಾಂ ವೆಂಕಿ’ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ. ಈ ಚಿತ್ರಕ್ಕೆ ರೇವತಿ ನಿರ್ದೇಶನ ಮಾಡಿದ್ದಾರೆ. ವಿಶೇಷ ಕಥಾಹಂದರ ಇರುವ ಈ ಸಿನಿಮಾದಲ್ಲಿ ಆಮಿರ್​ ಖಾನ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಚಿತ್ರದ ಮೇಲೆ ಕಾಜೋಲ್​ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಇದನ್ನೂ ಓದಿ: Dharani Mandala Madhyadolage: ಅಲ್ಲಲ್ಲೇ ಬೆಸೆದುಕೊಂಡರೂ ಮತ್ತೆಲ್ಲಿಗೋ ಕರೆದೊಯ್ಯುವ ಕಾಕತಾಳೀಯ ಕಥನ

‘ಲವ್​ ಮಾಕ್ಟೇಲ್​’ ರಿಮೇಕ್​ ‘ಗುರ್ತುಂದ ಶೀತಕಾಲಂ’:

ಕನ್ನಡದ ‘ಲವ್​ ಮಾಕ್ಟೇಲ್​’ ಸಿನಿಮಾ ತೆಲುಗಿನಲ್ಲಿ ರಿಮೇಕ್​ ಆಗಿದೆ. ‘ಗುರ್ತುಂದ ಶೀತಕಾಲಂ’ ಶೀರ್ಷಿಕೆಯ ಈ ಚಿತ್ರದಲ್ಲಿ ನಟಿ ತಮನ್ನಾ ಹಾಗೂ ಸತ್ಯದೇವ್​ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಕನ್ನಡಿಗ ನಾಗಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಇದರ ಜೊತೆ ‘ಮುಖಚಿತ್ರಂ’, ‘ಪಂಚತಂತ್ರಂ’ ಚಿತ್ರಗಳು ಕೂಡ ತೆಲುಗಿನಲ್ಲಿ ರಿಲೀಸ್​ ಆಗುತ್ತಿವೆ.

ಇದನ್ನೂ ಓದಿ: Raymo Movie Review: ಆಗಾಗ ಟ್ವಿಸ್ಟ್​ ನೀಡುವ ಭಾವನೆಗಳ ಹಾವು-ಏಣಿ ಆಟ

ತಮಿಳಿನಲ್ಲಿ ‘ನಾಯಿ ಶೇಖರ್ ರಿಟರ್ನ್ಸ್​’, ‘ವರಲಾರು ಮುಕ್ಕಿಯಂ’ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈ ವಾರ ಯಾವ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕು. ಕಳೆದ ವಾರ ಬಿಡುಗಡೆಯಾಗಿ ಚೆನ್ನಾಗಿ ಪ್ರದರ್ಶನ ಕಾಣುತ್ತಿರುವ ಸಿನಿಮಾಗಳು ಕೂಡ ಪೈಪೋಟಿ ಮುಂದುವರಿಸಲಿವೆ. ​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ