AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಸ್’ ಹೆಸರಲ್ಲಿ ಸಿನಿಮಾ; ಸೆಲೆಬ್ರಿಟಿಯೊಬ್ಬ ಪ್ರೆಯಸಿಗಾಗಿ ಕೊಲೆ ಮಾಡೋ ಕಥೆ

ತನುಷ್ ಶಿವಣ್ಣ ನಟನೆಯ 'ಬಾಸ್' ಕನ್ನಡ ಕ್ರೈಮ್ ಥ್ರಿಲ್ಲರ್ ಸಿನಿಮಾ ಡಿಸೆಂಬರ್‌ನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಸೆಲೆಬ್ರಿಟಿಯೊಬ್ಬ ಪ್ರೇಯಸಿಗಾಗಿ ನಡೆಸುವ ಕೊಲೆ ಮತ್ತು ಅದನ್ನು ಮುಚ್ಚಿಹಾಕುವ ಪ್ರಯತ್ನದ ಸುತ್ತ ಕಥೆ ಹೆಣೆಯಲಾಗಿದೆ. ವಿ. ಲವ ನಿರ್ದೇಶನದ ಈ ಚಿತ್ರ 'ಸತ್ಯಮೇವ ಜಯತೇ' ಅಡಿಬರಹ ಹೊಂದಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ಪೂರ್ಣಗೊಂಡಿದ್ದು, ಟೀಸರ್ ಬಿಡುಗಡೆಗೆ ಸಜ್ಜಾಗಿದೆ.

‘ಬಾಸ್’ ಹೆಸರಲ್ಲಿ ಸಿನಿಮಾ; ಸೆಲೆಬ್ರಿಟಿಯೊಬ್ಬ ಪ್ರೆಯಸಿಗಾಗಿ ಕೊಲೆ ಮಾಡೋ ಕಥೆ
ಬಾಸ್ ಮೂವಿ
ರಾಜೇಶ್ ದುಗ್ಗುಮನೆ
|

Updated on: Nov 03, 2025 | 12:37 PM

Share

ಚಿತ್ರರಂಗದಲ್ಲಿ ದಿನ ಬೆಳಗಾದರೆ ಸಾಕಷ್ಟು ಸಿನಿಮಾಗಳು ಸೆಟ್ಟೇರುತ್ತವೆ. ಕೆಲವು ಪೂರ್ಣಗೊಂಡು ರಿಲೀಸ್ ಕೂಡ ಆಗುತ್ತವೆ. ಈ ಪೈಕಿ ಕೆಲವು ಸಿನಿಮಾಗಳು ಟೈಟಲ್ ಮೂಲಕ ಸದ್ದು ಮಾಡಿದರೆ, ಇನ್ನೂ ಕೆಲವು ಕಥೆಯ ಕಾರಣಕ್ಕೆ ಸದ್ದು ಮಾಡುತ್ತವೆ. ಈಗ ಕನ್ನಡದಲ್ಲಿ ‘ಬಾಸ್’ ಹೆಸರಿನ (Boss) ಸಿನಿಮಾ ಬರುತ್ತಿದೆ. ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ. ಲವ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರಕ್ಕೆ ತನುಷ್ ಶಿವಣ್ಣ ನಾಯಕ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ.  ಈ ಚಿತ್ರ ಟೈಟಲ್ ಹಾಗೂ ಕಥೆಯ ಕಾರಣಕ್ಕೆ ಚರ್ಚೆ ಆಗುತ್ತಿದೆ.

‘ಬಾಸ್’ ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ ಅನ್ನೋದು ವಿಶೇಷ. ಸೆಲೆಬ್ರಿಟಿಯೊಬ್ಬ ಪ್ರೇಯಸಿಗಾಗಿ ವ್ಯಕ್ತಿಯನ್ನು ಕೊಂದು, ಆ ಶವನ ಮೋರಿಗೆ ಎಸೆಯುತ್ತಾನೆ. ನಂತರ ಸೆಲೆಬ್ರಿಟಿ ಆ ಕೇಸ್​ನ ಮುಚ್ಚಿ ಹಾಕಲು ಪ್ರಯತ್ನಿಸುತ್ತಾನಂತೆ. ಇದು ಚಿತ್ರದ ಕಥೆ! ‘ಇದು ನೈಜ ಘಟನೆ ಆಧಾರಿತ ಸಿನಿಮಾ. ಆದರೆ, ಇದು ಅದಲ್ಲ’ ಎನ್ನುತ್ತಾರೆ ನಿರ್ದೇಶಕರು.

ಬೆಂಗಳೂರಿನಲ್ಲಿ ಒಂದೇ ಹಂತದಲ್ಲಿ ‘ಬಾಸ್’ ಶೂಟಿಂಗ್ ಪೂರ್ಣಗೊಂಡಿದೆ. ಡಿಸೆಂಬರ್​ನಲ್ಲಿ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಈ ಚಿತ್ರದಲ್ಲಿ  ತನುಷ್ ಶಿವಣ್ಣಗೆ ಜೊತೆಯಾಗಿ ಮೋನಿಕಾ ಗೌಡ ನಟಿಸಿದ್ದಾರೆ. ‘ಬಾಸ್’ ಚಿತ್ರಕ್ಕೆ ‘ಸತ್ಯಮೇವ ಜಯತೇ’ ಎಂಬ ಅಡಿಬರ ಇದೆ. ಕೆಲವೇ ದಿನಗಳಲ್ಲಿ ಟೀಸರ್ ಕೂಡ ಬರಲಿದೆ. ಇದಾದ ಬಳಿಕ ಸಿನಿಮಾ ಬಗ್ಗೆ ಕ್ಲ್ಯಾರಿಟಿ ಸಿಗಲಿದೆ ಎಂಬುದು ಅವರ ಆಲೋಚನೆ.

ಇದನ್ನೂ ಓದಿ: ನಿಲ್ಲಲೇ ಇಲ್ಲ ‘ಬಾಸ್ ಬಾಸ್ ಡಿ ಬಾಸ್’ ಜೈಕಾರ: ಬೇಸರದಿಂದ ಮಾತು ನಿಲ್ಲಿಸಿದ ರಚಿತಾ ರಾಮ್

ಈ ಚಿತ್ರದಲ್ಲಿ ಸೆಲೆಬ್ರಿಟಿ ಪಾತ್ರದಲ್ಲಿ ತನುಷ್ ನಟಿಸಿದ್ದಾರೆ. ‘ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಸೆಲೆಬ್ರಿಟಿ ಪಾತ್ರ ಮಾಡಿದ್ದೇನೆ. ನನ್ನನ್ನು ಎಲ್ಲರೂ ಬಾಸ್ ಎನ್ನುತ್ತಾರೆ’ ಎಂದು ಪಾತ್ರದ ಬಗ್ಗೆ ಹೇಳಿಕೊಂಡರು ಶಿವಣ್ಣ. ಈ ಚಿತ್ರದಲ್ಲಿ ಮಲಯಾಳಂ ನಟ ವಿಜೇಶ್ ಲೀ ಪೊಲೀಸ್ ಪಾತ್ರ ಮಾಡಿದ್ದಾರೆ. ಸಂದೀಪ್, ಸುಜನ್ ಶೆಟ್ಟಿ, ವೀರೇನ್ ಕೇಶವ್, ಜೋಶ್ ಅಕ್ಷಯ್, ಮಹೇಶ್, ದುನಿಯಾ ಮಹೇಶ್,  ಮನು, ಮಂಡ್ಯ ರವಿ, ಪೃಥ್ವಿ, ನಿಶಾಂತ್, ಮಹೇಂದ್ರ ರಾವ್,  ಮೋಹಿತ್, ಲಕ್ಷ್ಮಣ್ ಪೂಜಾರಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಡೆವಿ ಸುರೇಶ್ ಸಂಗೀತ ನಿರ್ದೇಶನ, ಶರತ್ ಛಾಯಾಗ್ರಹಣ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​