AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ. ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 […]

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್
ಆಯೇಷಾ ಬಾನು
ಆಯೇಷಾ ಬಾನು|

Updated on: Sep 27, 2020 | 12:48 PM

Share

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ.

ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 ಜನರನ್ನು ತೀವ್ರ ತನಿಖೆಗೆ ಒಳಪಡಿಸಲಾಗಿದೆ. ನಟಿಯರು ವಿದೇಶದಲ್ಲಿ ಸಾಕಷ್ಟು ಪಾರ್ಟಿಗಳಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗೆ ಸಾಕಷ್ಟು ಹಣವೂ ವಿದೇಶಕ್ಕೆ ವರ್ಗಾವಣೆ ಆಗಿರೋ ದಾಖಲೆ ಕೂಡ ಸಿಕ್ಕಿದೆ. ಈ ಬಗ್ಗೆ ಈಗಾಗಲೇ ಸಿಸಿಬಿ ಅಧಿಕಾರಿಗಳಿಂದ ಇಡಿ ಅಧಿಕಾರಿಗಳು ದಾಖಲೆಗಳನ್ನು ಕಲೆಹಾಕಿದ್ದಾರೆ.

ಮೂರು ದಿನಗಳ ಕಾಲ ರಾಹುಲ್, ವಿರೇನ್ ಖನ್ನಾ ಹಾಗೂ ರವಿಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತೆ. ನ್ಯಾಯಾಲಯ ಐದು ದಿನಗಳ ಕಾಲ ಜೈಲನಲ್ಲಿಯೇ ವಿಚಾರಣೆ ನಡೆಸಲು ಅನಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರೆದಿದೆ. ಆದರೆ ಇಂದು ಭಾನುವಾರವಾದ ಕಾರಣ ಯಾವುದೇ ತನಿಖೆ ಇಲ್ಲ.

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ