AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ

ಬೃಂದಾ ಆಚಾರ್ಯ, ಭರತ್​ ಬೋಪಣ್ಣ ಮುಂತಾದವರು ನಟಿಸಿರುವ ‘ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್​ ಮೂಡಿಬಂದಿದೆ. ಪ್ರಮೋದ್​ ಮರವಂತೆ ಅವರು ಸಾಹಿತ್ಯ ಬರೆದಿದ್ದು, ಪೃಥ್ವಿ ಭಟ್​ ಅವರು ಧ್ವನಿ ನೀಡಿದ್ದಾರೆ. ಮ್ಯೂಸಿಕ್​ ವಿಡಿಯೋ ಅಥವಾ ಆಲ್ಬಂ ಸಾಂಗ್​ನ ಟ್ರೆಂಡ್​ ಕಡಿಮೆ ಆಗಿರುವ ಈ ಸಂದರ್ಭದಲ್ಲಿ ‘ಸಾವಿರ ಗುಂಗಲ್ಲಿ’ ಸಾಂಗ್​ ಬಿಡುಗಡೆ ಆಗಿದೆ.

‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ
ಭರತ್​ ಬೋಪಣ್ಣ, ಬೃಂದಾ ಆಚಾರ್ಯ
ಮದನ್​ ಕುಮಾರ್​
|

Updated on: May 12, 2024 | 8:37 PM

Share

ಕೇಳುಗರನ್ನು ಆವರಿಸಿಕೊಳ್ಳುವಂತಹ ಹಾಡಿಗಾಗಿ ಕಾಯುವ ಸಂಗೀತ ಪ್ರೇಮಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್​ ಇದೆ. ಬೃಂದಾ ಆಚಾರ್ಯ (Brinda Acharya) ಹಾಗೂ ಭರತ್ ಬೋಪಣ್ಣ ಅಭಿನಯಿಸಿರುವ ಮ್ಯೂಸಿಕ್​ ವಿಡಿಯೋ ಬಿಡುಗಡೆ ಆಗಿದೆ. ಸಂಗೀತ, ಸಾಹಿತ್ಯ, ಪರಿಕಲ್ಪನೆ, ಅಭಿನಯಯ ಸೇರಿದಂತೆ ಎಲ್ಲ ಆಯಾಮದಲ್ಲೂ ಈ ಸಾಂಗ್​ ಗಮನ ಸೆಳೆಯುತ್ತಿದೆ. ‘ಸಾವಿರ ಗುಂಗಲ್ಲಿ’ (Saavira Gungalli) ಎಂಬುದು ಈ ಸಾಂಗ್​ನ ಶೀರ್ಷಿಕೆ. ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಆಚೆಗೂ ಹಾಡುಗಳು ಜನಮನ ಸೆಳೆಯುತ್ತಿವೆ.

ಇತ್ತೀಚಿನ ದಿನಗಳಲ್ಲಿ ಆಲ್ಬಂ ಸಾಂಗ್ ಅಥವಾ ಮ್ಯೂಸಿಕ್​ ವಿಡಿಯೋ ಎಂಬ ಕಾನ್ಸೆಪ್ಟ್​ ಕಡಿಮೆ ಆಗುತ್ತಿವೆ. ಆ ಕೊರತೆಯನ್ನು ನೀಗಿಸುವ ರೀತಿಯಲ್ಲಿ ‘ಸಾವಿರ ಗುಂಗಲ್ಲಿ’ ಹಾಡು ಮೂಡಿಬಂದಿದೆ. ಇದೊಂದು ನವಿರಾದ ಹಾಡು. ಈ ಹಾಡಿಗೆ ಮೆಚ್ಚುಗೆ ಸಿಗುತ್ತಿರುವುದು ತಂಡಕ್ಕೆ ಖುಷಿ ನೀಡಿದೆ. ಕೃಷ್ಣ ನಂಜುಂಡಯ್ಯ ಅವರ ಪರಿಕಲ್ಪನೆ ಈ ಹಾಡಿನ ಹಿಂದಿದೆ. ಬೃಂದಾ ಆಚಾರ್ಯ, ಮಯೂರ್ ಸಾಗರ್, ಭರತ್ ಬೋಪಣ್ಣ, ಮಾನಿನಿ ಪಿ. ರಾವ್, ಕೃತಿಕಾ ಗೌಡ ಮುಂತಾದವರು ಈ ಆಲ್ಬಂ ಸಾಂಗ್​ನ ಭಾಗವಾಗಿದ್ದಾರೆ.

ಈ ಹಾಡಿನ ಪ್ರಧಾನ ಆಕರ್ಷಣೆಯಾಗಿ ಬೃಂದಾ ಆಚಾರ್ಯ ಕಾಣಿಸುತ್ತಿದ್ದಾರೆ. ಸಾಂಗ್​ನಲ್ಲಿ ಕಥೆಯೊಂದು ಕೂಡ ಇದೆ. ಕೇಳುಗರನ್ನು ಈ ಹಾಡು ಸೆಳೆಯುವಂತಿದೆ. ಕನ್ನಡ ಚಿತ್ರರಂಗದಲ್ಲಿ ಹಿಟ್​ ಹಾಡುಗಳನ್ನು ನೀಡಿರುವ ಪ್ರಮೋದ್ ಮರವಂತೆ ಅವರು ಈ ಸಾಂಗ್​ಗೆ ಸಾಹಿತ್ಯ ಬರೆದಿದ್ದಾರೆ. ಪೃಥ್ವಿ ಭಟ್ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಛಾಯಾಗ್ರಹಣ, ಅದ್ದೂರಿತನ ಕೂಡ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ನಿರೂಪ್ ಭಂಡಾರಿ ಜೊತೆ ಬೃಂದಾ ಆಚಾರ್ಯ ಹೊಸ ಸಿನಿಮಾ; ಶಿವಾನಿಗೆ ಸಖತ್​ ಚಾನ್ಸ್​

ನಟಿ ಬೃಂದಾ ಆಚಾರ್ಯ ಅವರು ಇದೀಗ ಹಲವು ಬಿಗ್ ಬಜೆಟ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಅವುಗಳ ನಡುವೆ ಇಂಥದ್ದೊಂದು ನವಿರಾದ ಹಾಡಿನಲ್ಲಿ ಕಾಣಿಸಿಕೊಂಡು ಪ್ರೇಕ್ಷಕರಿಗೆ ಹತ್ತಿರ ಆಗಿದ್ದಾರೆ. ಧಾರಾವಾಹಿ ಜಗತ್ತಿನಿಂದ ಈಗ ನಾಯಕನಾಗಿ ಸಕ್ರಿಯವಾಗಿರುವ ಭರತ್ ಬೋಪಣ್ಣ ಸಹ ಅಷ್ಟೇ ಸೂಪರ್​ ಆಗಿ ನಟಿಸಿದ್ದಾರೆ. ಜೋಯ್ ಕಾಸ್ಟಾ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಎನ್.ಕೆ. ರಾಜ್ ಅವರು ಛಾಯಾಗ್ರಹಣ ಮಾಡಿದ್ದಾರೆ. ತಮಿಳರಸನ್ ಎಂ. ಅವರು ಸಂಕಲನ ಮಾಡಿದ್ದಾರೆ. ಅನಿಲ್ ಸಹ ನಿರ್ದೇಶನ ಈ ಹಾಡಿಗೆ ಇದೆ. ದಿನದಿಂದ ದಿನಕ್ಕೆ ಈ ಸಾಂಗ್​ ಹೆಚ್ಚು ಹೆಚ್ಚು ಜನರನ್ನು ತಲುಪುತ್ತಿರುವುದು ತಂಡಕ್ಕೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ