AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ

ಬೃಂದಾ ಆಚಾರ್ಯ, ಭರತ್​ ಬೋಪಣ್ಣ ಮುಂತಾದವರು ನಟಿಸಿರುವ ‘ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್​ ಮೂಡಿಬಂದಿದೆ. ಪ್ರಮೋದ್​ ಮರವಂತೆ ಅವರು ಸಾಹಿತ್ಯ ಬರೆದಿದ್ದು, ಪೃಥ್ವಿ ಭಟ್​ ಅವರು ಧ್ವನಿ ನೀಡಿದ್ದಾರೆ. ಮ್ಯೂಸಿಕ್​ ವಿಡಿಯೋ ಅಥವಾ ಆಲ್ಬಂ ಸಾಂಗ್​ನ ಟ್ರೆಂಡ್​ ಕಡಿಮೆ ಆಗಿರುವ ಈ ಸಂದರ್ಭದಲ್ಲಿ ‘ಸಾವಿರ ಗುಂಗಲ್ಲಿ’ ಸಾಂಗ್​ ಬಿಡುಗಡೆ ಆಗಿದೆ.

‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ
ಭರತ್​ ಬೋಪಣ್ಣ, ಬೃಂದಾ ಆಚಾರ್ಯ
ಮದನ್​ ಕುಮಾರ್​
|

Updated on: May 12, 2024 | 8:37 PM

Share

ಕೇಳುಗರನ್ನು ಆವರಿಸಿಕೊಳ್ಳುವಂತಹ ಹಾಡಿಗಾಗಿ ಕಾಯುವ ಸಂಗೀತ ಪ್ರೇಮಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್​ ಇದೆ. ಬೃಂದಾ ಆಚಾರ್ಯ (Brinda Acharya) ಹಾಗೂ ಭರತ್ ಬೋಪಣ್ಣ ಅಭಿನಯಿಸಿರುವ ಮ್ಯೂಸಿಕ್​ ವಿಡಿಯೋ ಬಿಡುಗಡೆ ಆಗಿದೆ. ಸಂಗೀತ, ಸಾಹಿತ್ಯ, ಪರಿಕಲ್ಪನೆ, ಅಭಿನಯಯ ಸೇರಿದಂತೆ ಎಲ್ಲ ಆಯಾಮದಲ್ಲೂ ಈ ಸಾಂಗ್​ ಗಮನ ಸೆಳೆಯುತ್ತಿದೆ. ‘ಸಾವಿರ ಗುಂಗಲ್ಲಿ’ (Saavira Gungalli) ಎಂಬುದು ಈ ಸಾಂಗ್​ನ ಶೀರ್ಷಿಕೆ. ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಆಚೆಗೂ ಹಾಡುಗಳು ಜನಮನ ಸೆಳೆಯುತ್ತಿವೆ.

ಇತ್ತೀಚಿನ ದಿನಗಳಲ್ಲಿ ಆಲ್ಬಂ ಸಾಂಗ್ ಅಥವಾ ಮ್ಯೂಸಿಕ್​ ವಿಡಿಯೋ ಎಂಬ ಕಾನ್ಸೆಪ್ಟ್​ ಕಡಿಮೆ ಆಗುತ್ತಿವೆ. ಆ ಕೊರತೆಯನ್ನು ನೀಗಿಸುವ ರೀತಿಯಲ್ಲಿ ‘ಸಾವಿರ ಗುಂಗಲ್ಲಿ’ ಹಾಡು ಮೂಡಿಬಂದಿದೆ. ಇದೊಂದು ನವಿರಾದ ಹಾಡು. ಈ ಹಾಡಿಗೆ ಮೆಚ್ಚುಗೆ ಸಿಗುತ್ತಿರುವುದು ತಂಡಕ್ಕೆ ಖುಷಿ ನೀಡಿದೆ. ಕೃಷ್ಣ ನಂಜುಂಡಯ್ಯ ಅವರ ಪರಿಕಲ್ಪನೆ ಈ ಹಾಡಿನ ಹಿಂದಿದೆ. ಬೃಂದಾ ಆಚಾರ್ಯ, ಮಯೂರ್ ಸಾಗರ್, ಭರತ್ ಬೋಪಣ್ಣ, ಮಾನಿನಿ ಪಿ. ರಾವ್, ಕೃತಿಕಾ ಗೌಡ ಮುಂತಾದವರು ಈ ಆಲ್ಬಂ ಸಾಂಗ್​ನ ಭಾಗವಾಗಿದ್ದಾರೆ.

ಈ ಹಾಡಿನ ಪ್ರಧಾನ ಆಕರ್ಷಣೆಯಾಗಿ ಬೃಂದಾ ಆಚಾರ್ಯ ಕಾಣಿಸುತ್ತಿದ್ದಾರೆ. ಸಾಂಗ್​ನಲ್ಲಿ ಕಥೆಯೊಂದು ಕೂಡ ಇದೆ. ಕೇಳುಗರನ್ನು ಈ ಹಾಡು ಸೆಳೆಯುವಂತಿದೆ. ಕನ್ನಡ ಚಿತ್ರರಂಗದಲ್ಲಿ ಹಿಟ್​ ಹಾಡುಗಳನ್ನು ನೀಡಿರುವ ಪ್ರಮೋದ್ ಮರವಂತೆ ಅವರು ಈ ಸಾಂಗ್​ಗೆ ಸಾಹಿತ್ಯ ಬರೆದಿದ್ದಾರೆ. ಪೃಥ್ವಿ ಭಟ್ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಛಾಯಾಗ್ರಹಣ, ಅದ್ದೂರಿತನ ಕೂಡ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ನಿರೂಪ್ ಭಂಡಾರಿ ಜೊತೆ ಬೃಂದಾ ಆಚಾರ್ಯ ಹೊಸ ಸಿನಿಮಾ; ಶಿವಾನಿಗೆ ಸಖತ್​ ಚಾನ್ಸ್​

ನಟಿ ಬೃಂದಾ ಆಚಾರ್ಯ ಅವರು ಇದೀಗ ಹಲವು ಬಿಗ್ ಬಜೆಟ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಅವುಗಳ ನಡುವೆ ಇಂಥದ್ದೊಂದು ನವಿರಾದ ಹಾಡಿನಲ್ಲಿ ಕಾಣಿಸಿಕೊಂಡು ಪ್ರೇಕ್ಷಕರಿಗೆ ಹತ್ತಿರ ಆಗಿದ್ದಾರೆ. ಧಾರಾವಾಹಿ ಜಗತ್ತಿನಿಂದ ಈಗ ನಾಯಕನಾಗಿ ಸಕ್ರಿಯವಾಗಿರುವ ಭರತ್ ಬೋಪಣ್ಣ ಸಹ ಅಷ್ಟೇ ಸೂಪರ್​ ಆಗಿ ನಟಿಸಿದ್ದಾರೆ. ಜೋಯ್ ಕಾಸ್ಟಾ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಎನ್.ಕೆ. ರಾಜ್ ಅವರು ಛಾಯಾಗ್ರಹಣ ಮಾಡಿದ್ದಾರೆ. ತಮಿಳರಸನ್ ಎಂ. ಅವರು ಸಂಕಲನ ಮಾಡಿದ್ದಾರೆ. ಅನಿಲ್ ಸಹ ನಿರ್ದೇಶನ ಈ ಹಾಡಿಗೆ ಇದೆ. ದಿನದಿಂದ ದಿನಕ್ಕೆ ಈ ಸಾಂಗ್​ ಹೆಚ್ಚು ಹೆಚ್ಚು ಜನರನ್ನು ತಲುಪುತ್ತಿರುವುದು ತಂಡಕ್ಕೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ