AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಚಿತ್ರರಂಗದ ಪಯಣಕ್ಕೆ 25 ವರ್ಷ; ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ಚಿತ್ರರಂಗದ ಪಯಣಕ್ಕೆ 25 ವರ್ಷ; ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಕಿಚ್ಚ ಸುದೀಪ್​ಗೆ ಸನ್ಮಾನ ಮಾಡಿದ ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
|

Updated on: Mar 15, 2021 | 7:42 PM

Share

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ.  ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಈ ಅಪರೂಪದ ಕ್ಷಣಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಕ್ಷಿಯಾದರು. ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ ನಟನಿಗೆ ಯಡಿಯೂರಪ್ಪ ಶಾಲು ಹೊದಿಸಿ ಸನ್ಮಾನ ಮಾಡಿದರು.

ಸುದೀಪ್​ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೋಟಿಗೊಬ್ಬ3 ಚಿತ್ರತಂಡ ಸೋಮವಾರ ಸಂಜೆ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿದೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಿಚ್ಚನ ಬೆಳ್ಳಿ ಹಬ್ಬಕ್ಕೆ ಸ್ಯಾಂಡಲ್​ವುಡ್​ ಸಾಕ್ಷಿಯಾಗಿದೆ. ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​​ಗೆ ಯಡಿಯೂರಪ್ಪ ಸನ್ಮಾನಿಸಿದ್ದಾರೆ.

1997ರಲ್ಲಿ ತೆರೆಕಂಡ ತಾಯವ್ವ ಸಿನಿಮಾ ಮೂಲಕ ಸುದೀಪ್​​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಅವರ ನಟನೆಯನ್ನು ನೋಡಿ ಪರಭಾಷೆಯವರು ಕೂಡ ಸುದೀಪ್​ಗೆ ಆಹ್ವಾನ ನೀಡಿದ್ದರು. ಸದ್ಯ ಸುದೀಪ್​ ಕೋಟ್ಟಿಗೊಬ್ಬ 3, ವಿಕ್ರಾಂತ್​ ರೋಣ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ನಟನೆಯ ಕಬ್ಜಾ ಚಿತ್ರದಲ್ಲಿ ಸುದೀಪ್​ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ.

ಕಿಚ್ಚ ಸುದೀಪ್​ ನಟನೆಯ ಕೋಟಿಗೊಬ್ಬ 3 ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಮಡೋನಾ ಸೆಬಾಸ್ಟಿಯನ್ ಹಾಗೂ ಶ್ರದ್ಧಾ ದಾಸ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್​ ಜನ್ಯಾ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್