AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಚಿತ್ರರಂಗದ ಪಯಣಕ್ಕೆ 25 ವರ್ಷ; ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ಚಿತ್ರರಂಗದ ಪಯಣಕ್ಕೆ 25 ವರ್ಷ; ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಕಿಚ್ಚ ಸುದೀಪ್​ಗೆ ಸನ್ಮಾನ ಮಾಡಿದ ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
|

Updated on: Mar 15, 2021 | 7:42 PM

Share

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ.  ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಈ ಅಪರೂಪದ ಕ್ಷಣಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಕ್ಷಿಯಾದರು. ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ ನಟನಿಗೆ ಯಡಿಯೂರಪ್ಪ ಶಾಲು ಹೊದಿಸಿ ಸನ್ಮಾನ ಮಾಡಿದರು.

ಸುದೀಪ್​ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೋಟಿಗೊಬ್ಬ3 ಚಿತ್ರತಂಡ ಸೋಮವಾರ ಸಂಜೆ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿದೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಿಚ್ಚನ ಬೆಳ್ಳಿ ಹಬ್ಬಕ್ಕೆ ಸ್ಯಾಂಡಲ್​ವುಡ್​ ಸಾಕ್ಷಿಯಾಗಿದೆ. ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​​ಗೆ ಯಡಿಯೂರಪ್ಪ ಸನ್ಮಾನಿಸಿದ್ದಾರೆ.

1997ರಲ್ಲಿ ತೆರೆಕಂಡ ತಾಯವ್ವ ಸಿನಿಮಾ ಮೂಲಕ ಸುದೀಪ್​​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಅವರ ನಟನೆಯನ್ನು ನೋಡಿ ಪರಭಾಷೆಯವರು ಕೂಡ ಸುದೀಪ್​ಗೆ ಆಹ್ವಾನ ನೀಡಿದ್ದರು. ಸದ್ಯ ಸುದೀಪ್​ ಕೋಟ್ಟಿಗೊಬ್ಬ 3, ವಿಕ್ರಾಂತ್​ ರೋಣ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ನಟನೆಯ ಕಬ್ಜಾ ಚಿತ್ರದಲ್ಲಿ ಸುದೀಪ್​ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ.

ಕಿಚ್ಚ ಸುದೀಪ್​ ನಟನೆಯ ಕೋಟಿಗೊಬ್ಬ 3 ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಮಡೋನಾ ಸೆಬಾಸ್ಟಿಯನ್ ಹಾಗೂ ಶ್ರದ್ಧಾ ದಾಸ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್​ ಜನ್ಯಾ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More