Kichcha Sudeep: ನಟ ಕಿಚ್ಚ ಸುದೀಪ್​​ಗೆ ಸನ್ಮಾನ ಮಾಡಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ

ಕಿಚ್ಚನ ಬೆಳ್ಳಿ ಹಬ್ಬಕ್ಕೆ ಸ್ಯಾಂಡಲ್​ವುಡ್​ ಸಾಕ್ಷಿಯಾಗಲಿದೆ. ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

Kichcha Sudeep: ನಟ ಕಿಚ್ಚ ಸುದೀಪ್​​ಗೆ ಸನ್ಮಾನ ಮಾಡಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ
ಸುದೀಪ್​-ಯಡಿಯೂರಪ್ಪ
Follow us
| Updated By: ಮದನ್​ ಕುಮಾರ್​

Updated on: Mar 10, 2021 | 3:20 PM

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ ನಟನಿಗೆ ಗೌರವ ಸಲ್ಲಿಸಲು ಸಿದ್ಧತೆ ನಡೆದಿದೆ.

ಸುದೀಪ್​ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೋಟಿಗೊಬ್ಬ3 ಚಿತ್ರತಂಡದಿಂದ ಮಾರ್ಚ್ 15ರಂದು ಸೋಮವಾರ ಸಂಜೆ ಬೆಳ್ಳಿ ಹಬ್ಬ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮ ನಿಯೋಜನೆಗೊಂಡಿದೆ.

ಕಿಚ್ಚನ ಬೆಳ್ಳಿ ಹಬ್ಬಕ್ಕೆ ಸ್ಯಾಂಡಲ್​ವುಡ್​ ಸಾಕ್ಷಿಯಾಗಲಿದೆ. ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​​ಗೆ ಯಡಿಯೂರಪ್ಪ ಸನ್ಮಾನಿಸಲಿದ್ದಾರೆ. ಈಗಾಲೇ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚಿತ್ರ ತಂಡ ಆಹ್ವಾನ ನೀಡಿದೆ.

1997ರಲ್ಲಿ ತೆರೆಕಂಡ ತಾಯವ್ವ ಸಿನಿಮಾ ಮೂಲಕ ಸುದೀಪ್​​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಅವರ ನಟನೆಯನ್ನು ನೋಡಿ ಪರಭಾಷೆಯವರು ಕೂಡ ಸುದೀಪ್​ಗೆ ಆಹ್ವಾನ ನೀಡಿದ್ದರು. ಸದ್ಯ ಸುದೀಪ್​ ಕೋಟ್ಟಿಗೊಬ್ಬ 3, ವಿಕ್ರಾಂತ್​ ರೋಣ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ನಟನೆಯ ಕಬ್ಜಾ ಚಿತ್ರದಲ್ಲಿ ಸುದೀಪ್​ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಗೆಳೆಯನಲ್ಲ ಎಂದಿದ್ದ ನಟ ದರ್ಶನ್ ಟ್ವಿಟ್‌ಗೆ ಇದೀಗ 4 ವರ್ಷ

Roberrt vs Kotigobba 3: ಸಿನಿಮಾಗಳ ರಿಲೀಸ್​ಗೂ ಮುನ್ನ ಇನ್ನೊಂದು ರೀತಿಯಲ್ಲಿ ದರ್ಶನ್​-ಸುದೀಪ್​ ಪೈಪೋಟಿ!

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು