AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ನಟ ಕಿಚ್ಚ ಸುದೀಪ್​​ಗೆ ಸನ್ಮಾನ ಮಾಡಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ

ಕಿಚ್ಚನ ಬೆಳ್ಳಿ ಹಬ್ಬಕ್ಕೆ ಸ್ಯಾಂಡಲ್​ವುಡ್​ ಸಾಕ್ಷಿಯಾಗಲಿದೆ. ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

Kichcha Sudeep: ನಟ ಕಿಚ್ಚ ಸುದೀಪ್​​ಗೆ ಸನ್ಮಾನ ಮಾಡಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ
ಸುದೀಪ್​-ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Mar 10, 2021 | 3:20 PM

Share

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ ನಟನಿಗೆ ಗೌರವ ಸಲ್ಲಿಸಲು ಸಿದ್ಧತೆ ನಡೆದಿದೆ.

ಸುದೀಪ್​ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೋಟಿಗೊಬ್ಬ3 ಚಿತ್ರತಂಡದಿಂದ ಮಾರ್ಚ್ 15ರಂದು ಸೋಮವಾರ ಸಂಜೆ ಬೆಳ್ಳಿ ಹಬ್ಬ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮ ನಿಯೋಜನೆಗೊಂಡಿದೆ.

ಕಿಚ್ಚನ ಬೆಳ್ಳಿ ಹಬ್ಬಕ್ಕೆ ಸ್ಯಾಂಡಲ್​ವುಡ್​ ಸಾಕ್ಷಿಯಾಗಲಿದೆ. ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​​ಗೆ ಯಡಿಯೂರಪ್ಪ ಸನ್ಮಾನಿಸಲಿದ್ದಾರೆ. ಈಗಾಲೇ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚಿತ್ರ ತಂಡ ಆಹ್ವಾನ ನೀಡಿದೆ.

1997ರಲ್ಲಿ ತೆರೆಕಂಡ ತಾಯವ್ವ ಸಿನಿಮಾ ಮೂಲಕ ಸುದೀಪ್​​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಅವರ ನಟನೆಯನ್ನು ನೋಡಿ ಪರಭಾಷೆಯವರು ಕೂಡ ಸುದೀಪ್​ಗೆ ಆಹ್ವಾನ ನೀಡಿದ್ದರು. ಸದ್ಯ ಸುದೀಪ್​ ಕೋಟ್ಟಿಗೊಬ್ಬ 3, ವಿಕ್ರಾಂತ್​ ರೋಣ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ನಟನೆಯ ಕಬ್ಜಾ ಚಿತ್ರದಲ್ಲಿ ಸುದೀಪ್​ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಗೆಳೆಯನಲ್ಲ ಎಂದಿದ್ದ ನಟ ದರ್ಶನ್ ಟ್ವಿಟ್‌ಗೆ ಇದೀಗ 4 ವರ್ಷ

Roberrt vs Kotigobba 3: ಸಿನಿಮಾಗಳ ರಿಲೀಸ್​ಗೂ ಮುನ್ನ ಇನ್ನೊಂದು ರೀತಿಯಲ್ಲಿ ದರ್ಶನ್​-ಸುದೀಪ್​ ಪೈಪೋಟಿ!

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್