AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಉಸಿರು ಇರೋ ತನಕ ಬುಲ್​ಬುಲ್ ಅಂತ ಕರೆಯಿರಿ, ದರ್ಶನ್​ಗೆ ನಾನು ಋಣಿ: ರಚಿತಾ ರಾಮ್

ನಟಿ ರಚಿತಾ ರಾಮ್ ಅವರು ಸ್ಟಾರ್​ ಹೀರೋಯಿನ್ ಆಗಿ ಮಿಂಚಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ಅವರಿಗೆ ಬೇಡಿಕೆ ಇದೆ. ಎಷ್ಟೇ ಎತ್ತರಕ್ಕೆ ಬೆಳೆದರೂ ಕೂಡ ಮೊದಲು ಅವಕಾಶ ಕೊಟ್ಟವರನ್ನು ಇಂದಿಗೂ ಸ್ಮರಿಸುತ್ತಾರೆ ರಚಿತಾ ರಾಮ್. ದರ್ಶನ್​ ಅವರನ್ನು ತಮ್ಮ ಗಾಡ್​ಫಾದರ್​ ಎಂದು ರಚಿತಾ ಕರೆದಿದ್ದಾರೆ.

ನನ್ನ ಉಸಿರು ಇರೋ ತನಕ ಬುಲ್​ಬುಲ್ ಅಂತ ಕರೆಯಿರಿ, ದರ್ಶನ್​ಗೆ ನಾನು ಋಣಿ: ರಚಿತಾ ರಾಮ್
Rachita Ram, Darshan
ಮದನ್​ ಕುಮಾರ್​
|

Updated on: Mar 12, 2025 | 4:58 PM

Share

ನಟ ದರ್ಶನ್ ಮೇಲೆ ರಚಿತಾ ರಾಮ್ (Rachita Ram) ಅವರಿಗೆ ಅಪಾರ ಗೌರವ ಇದೆ. ಚಿತ್ರರಂಗದಲ್ಲಿ ರಚಿತಾ ರಾಮ್ ಅವರಿಗೆ ಮೊದಲು ಅವಕಾಶ ನೀಡಿದ್ದೇ ದರ್ಶನ್. ರಚಿತಾ ನಟಿಸಿದ ಮೊದಲ ಸಿನಿಮಾ ‘ಬುಲ್​ಬುಲ್’. ಆ ಸಿನಿಮಾ 2013ರಲ್ಲಿ ತೆರೆಕಂಡಿತು. ಮೊದಲ ಸಿನಿಮಾದಲ್ಲೇ ದರ್ಶನ್​ (Darshan) ಜೊತೆ ನಾಯಕಿಯಾಗಿ ನಟಿಸುವ ಅವಕಾಶ ರಚಿತಾ ರಮ್ ಅವರಿಗೆ ಸಿಕ್ಕಿತು. ಆ ಅವಕಾಶ ನೀಡಿದ್ದಕ್ಕೆ ತಾವು ಕೊನೆವರೆಗೂ ದರ್ಶನ್ ಅವರಿಗೆ ಚಿರಋಣಿ ಆಗಿರುವುದಾಗಿ ರಚಿತಾ ರಾಮ್ ಹೇಳಿದ್ದಾರೆ. ‘ಜೀ ಕನ್ನಡ’ ವಾಹಿನಿಯ ‘ಭರ್ಜರಿ ಬ್ಯಾಚುಲರ್ಸ್​’ (Bharjari Bachelors) ಶೋನಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ದರ್ಶನ್ ಸರ್ ಒಂದು ಮಾತು ಹೇಳುತ್ತಿದ್ದರು. ಅವರ ವೃತ್ತಿ ಜೀವನದಲ್ಲಿ ಹೀರೋಯಿನ್ ಹೆಸರೇ ಶೀರ್ಷಿಕೆ ಆದಂತಹ ಸಿನಿಮಾವನ್ನು ಮಾಡಿಲ್ಲ. ಎಲ್ಲ ಸಿನಿಮಾಗೂ ಹೀರೋ ಕೇಂದ್ರಿತ ಟೈಟಲ್ ಇರುತ್ತಿತ್ತು. ಮೊದಲ ಬಾರಿಗೆ ಬುಲ್​ಬುಲ್ ಅಂತ ಹೀರೋಯಿನ್ ಸೆಂಟ್ರಿಕ್ ಟೈಟಲ್ ಇದೆ. ಹಾಗಾಗಿ ನೀನು ಎಷ್ಟೊಂದು ಲಕ್ಕಿ ಅಂತ ನನಗೆ ಹೇಳುತ್ತಿದ್ದರು’ ಎಂದಿದ್ದಾರೆ ರಚಿತಾ ರಾಮ್.

ಇದನ್ನೂ ಓದಿ
Image
ರಚಿತಾ​ಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ ದರ್ಶನ್; ನಟಿಯ ಪ್ರತಿಕ್ರಿಯೆ ಏನು?
Image
‘ಎಷ್ಟೇ ವರ್ಷ ನನ್ನ ಹಿಂದೆ ಬಂದರೂ ನಿಮಗೆ ಬೀಳಲ್ಲ’; ನೇರವಾಗಿ ಹೇಳಿದ ರಚಿತಾ
Image
ಯಾರ ಜೊತೆಗೂ ಹೋಗಿ ಇರಲ್ಲ ಎಂದು ರಚಿತಾ ರಾಮ್ ಹೇಳಿದ್ದರ ಹಿಂದಿನ ವಿವಾದವೇನು?
Image
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
View this post on Instagram

A post shared by Zee Kannada (@zeekannada)

‘ಒಂದಷ್ಟು ವರ್ಷಗಳ ತನಕ ನನ್ನನ್ನು ಬುಲ್​ಬುಲ್ ಅಂತ ಕರೆಯುತ್ತಿದ್ದರು ಅಂತ ನೀವು ಹೇಳಿದ್ರಿ. ಇಲ್ಲ.. ಈಗಲೂ ಕೂಡ ಜನರು ನನ್ನನ್ನು ಬುಲ್​ಬುಲ್​ ಅಂತಾನೇ ಕರೆಯುವುದು. ಉಸಿರು ಇರುವವರೆಗೂ ನನಗೆ ಬುಲ್​ಬುಲ್​ ಅಂತಾನೇ ಕರೆದರೆ ಖುಷಿ. ನನ್ನ ತಂಡಕ್ಕೆ, ದರ್ಶನ್​ ಸರ್​ಗೆ, ದರ್ಶನ್​ ಅವರ ಅಭಿಮಾನಿಗಳಿಗೆ ನಾನು ಯಾವಾಗಲೂ ಚಿರಋಣಿ ಆಗಿರುತ್ತೇನೆ’ ಎಂದು ರಚಿತಾ ರಾಮ್ ಅವರು ಹೇಳಿದ್ದಾರೆ.

‘ನಾನು ಪುಣ್ಯವಂತೆ. ನನ್ನ ಗಾಡ್​ಫಾದರ್​ಗೆ ನಾನು ಧನ್ಯವಾದ ಹೇಳುತ್ತಾನೆ’ ಎಂದು ರಚಿತಾ ರಾಮ್ ಅವರು ‘ಭರ್ಜರಿ ಬ್ಯಾಚುಲರ್ಸ್​’ ವೇದಿಕೆಯಿಂದಲೇ ದರ್ಶನ್​ ಅವರಿಗೆ ನಮಸ್ಕಾರ ಮಾಡಿದ್ದಾರೆ. ರಚಿತಾ ರಾಮ್ ಅವರ ಮಾತು ಕೇಳಿ ದರ್ಶನ್ ಅಭಿಮಾನಿಗಳಿಗೆ ಖುಷಿ ಆಗಿದೆ. ಅವಕಾಶ ಕೊಟ್ಟವರನ್ನು ಎಂದಿಗೂ ಮರೆಯದ ರಚಿತಾ ಗುಣವನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ‘ಬುಲ್​ಬುಲ್’ ಬಳಿಕ ‘ಅಂಬರೀಶ’, ‘ಕ್ರಾಂತಿ’, ‘ಜಗ್ಗುದಾದ’ ಸಿನಿಮಾಗಳಲ್ಲಿ ದರ್ಶನ್ ಜೊತೆ ರಚಿತಾ ರಾಮ್ ತೆರೆ ಹಂಚಿಕೊಂಡರು.

ಇದನ್ನೂ ಓದಿ: ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ಡಿ ಬಾಸ್

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾಗ ರಚಿತಾ ರಾಮ್ ಅವರು ಹೋಗಿ ಮಾತನಾಡಿಸಿಕೊಂಡು ಬಂದಿದ್ದರು. ಆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದಾಗಲೂ ಕೂಡ ಅವರು ದರ್ಶನ್ ಕೊಟ್ಟ ಅವಕಾಶವನ್ನು ಸ್ಮರಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ