AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ಮಿಂಚುತ್ತಿರುವ ನಟಿ ಪಾರುಲ್​ ಯಾದವ್​; ಫ್ಯಾನ್ಸ್​ ಫಿದಾ

ರಮೇಶ್​ ಅರವಿಂದ್​ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಬಟರ್​ಫ್ಲೈ’ ಚಿತ್ರದಲ್ಲಿ ಪಾರುಲ್​ ಯಾದವ್​ ಅವರು ಅಭಿನಯಿಸಿದ್ದಾರೆ. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್​ ತಡವಾಗುತ್ತಲೇ ಇದೆ.

ಹೊಸ ಫೋಟೋಶೂಟ್​ನಲ್ಲಿ ಮಿಂಚುತ್ತಿರುವ ನಟಿ ಪಾರುಲ್​ ಯಾದವ್​; ಫ್ಯಾನ್ಸ್​ ಫಿದಾ
ಪಾರುಲ್​ ಯಾದವ್​
TV9 Web
| Edited By: |

Updated on: Aug 01, 2021 | 5:13 PM

Share

ನಟಿ ಪಾರುಲ್​ ಯಾದವ್​ (Parul Yadav) ಅವರಿಗೆ ಬಹುಭಾಷೆಯಲ್ಲಿ ಅಭಿಮಾನಿಗಳಿದ್ದಾರೆ. ಕನ್ನಡದಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಿದ ಅವರು ಮೂಲತಃ ಮುಂಬೈನವರು. ಕಿಚ್ಚ ಸುದೀಪ್​, ಉಪೇಂದ್ರ ಮುಂತಾದ ಸ್ಟಾರ್​ ನಟರ ಜೊತೆ ತೆರೆ ಹಂಚಿಕೊಳ್ಳುವ ಚಾನ್ಸ್​ ಅವರಿಗೆ ಸಿಕ್ಕಿತ್ತು. 2000ನೇ ಇಸವಿಯಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಪಾರುಲ್​ಗೆ ಒಂದು ದಶಕದ ಅನುಭವ ಇದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾ ಆಯ್ಕೆ ಮಾಡಿಕೊಳ್ಳಲು ವಿಳಂಬ ಮಾಡುತ್ತಿದ್ದಾರೆ. ಹಾಗಂತ ಅವರು ಅಭಿಮಾನಿಗಳಿಂದ ದೂರ ಇಲ್ಲ. ಸೋಶಿಯಲ್​ ಮೀಡಿಯಾ ಮೂಲಕ ಫ್ಯಾನ್ಸ್​ ಜೊತೆ ಪಾರುಲ್ ಸದಾ ಸಂಪರ್ಕದಲ್ಲಿ ಇರುತ್ತಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಪಾರುಲ್​ ಯಾದವ್​ಗೆ 6.7 ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಇದ್ದಾರೆ. ಕಲರ್​ಫುಲ್​ ಆದಂತಹ ಫೋಟೋಶೂಟ್​ಗಳ ಮೂಲಕ ಅವರು ಆಗಾಗ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಪಾರುಲ್​ ಯಾದವ್​ ಮಾಡಿಸಿರುವ ಹೊಸ ಫೋಟೋಶೂಟ್​ ಕೂಡ ಆಕರ್ಷಕವಾಗಿದೆ. ಗ್ಲಾಮರಸ್​ ಲುಕ್​ನಲ್ಲಿ ಅವರು ಮಿಂಚಿದ್ದಾರೆ. ತಿಳಿ ನೀಲಿ ಬಣ್ಣದ ಉಡುಗೆ ಧರಿಸಿ, ಪಡ್ಡೆಗಳ ನಿದ್ದೆ ಕೆಡಿಸಿದ್ದಾರೆ.

View this post on Instagram

A post shared by Parul Yadav (@theparulyadav)

ಪಾರುಲ್​ ಯಾದವ್​ ಬೆಳ್ಳಿಪರದೆ ಮೇಲೆ ಕಾಣಿಸಿಕೊಳ್ಳದೇ ಬಹಳ ಸಮಯ ಆಗಿದೆ. 2018ರಲ್ಲಿ ತೆರೆಕಂಡ ‘ಸೀಜರ್​’ ಚಿತ್ರವೇ ಕೊನೆ. ಆ ಬಳಿಕ ಅವರ ಬೇರಾವುದೇ ಸಿನಿಮಾ ತೆರೆಕಂಡಿಲ್ಲ. ರಮೇಶ್​ ಅರವಿಂದ್​ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಬಟರ್​ಫ್ಲೈ’ ಚಿತ್ರದಲ್ಲಿ ಅವರು ಅಭಿನಯಿಸಿದ್ದಾರೆ. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್​ ತಡವಾಗುತ್ತಲೇ ಇದೆ. ಇದು ಹಿಂದಿಯ ಸೂಪರ್​ ಹಿಟ್​ ‘ಕ್ವೀನ್​’ ಸಿನಿಮಾದ ಕನ್ನಡ ರಿಮೇಕ್​. ಹಿಂದಿಯಲ್ಲಿ ಕಂಗನಾ ರಣಾವತ್​ ಮಾಡಿದ ಪಾತ್ರವನ್ನು ಕನ್ನಡದಲ್ಲಿ ಪಾರುಲ್​ ಯಾದವ್​ ಮಾಡಿದ್ದಾರೆ. ‘ಬಟರ್​ಫ್ಲೈ’ ಚಿತ್ರಕ್ಕೆ ಅವರು ಸಹ-ನಿರ್ಮಾಪಕಿ ಕೂಡ ಹೌದು. ಈ ಎಲ್ಲ ಕಾರಣಗಳಿಂದಾಗಿ ಆ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇದೆ.

View this post on Instagram

A post shared by Parul Yadav (@theparulyadav)

ಈ ವರ್ಷ ಪಾರುಲ್​ ಮತ್ತು ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಪಾಸಿಟಿವ್​ ಆಗಿತ್ತು. ಆ ದಿನಗಳ ಅನುಭವದ ಬಗ್ಗೆ ಇತ್ತೀಚೆಗೆ ಅವರು ಮಾತನಾಡಿದ್ದರು. ‘ಒಂದು ರಾತ್ರಿ ಸುಮಾರು ಎರಡೂವರೆಯ ಸುಮಾರಿಗೆ ಜ್ವರ 103 ಡಿಗ್ರಿಗಿಂತಲೂ ಏರಿ, ಕೈಕಾಲುಗಳು ನಡುಗಲು ಪ್ರಾರಂಭಿಸಿದ್ದವು. ಆಗ ಡಾಕ್ಟರ್​ಗೆ ಕರೆ ಮಾಡಿ ನನಗಿನ್ನು ಸಾಧ್ಯವಿಲ್ಲ ಎಂದಿದ್ದೆ. ಆಗ ಧೈರ್ಯ ತುಂಬಿದ್ದ ವೈದ್ಯರು, ಆತ್ಮವಿಶ್ವಾಸದಿಂದಿರಿ; ಅದೊಂದೇ ನಿಮ್ಮನ್ನು ಕಾಪಾಡುವುದು ಎಂದಿದ್ದರು. ತಕ್ಷಣ ನಾನು ಹೋಗಿ ಥಂಡಿ ಬಟ್ಟೆಯನ್ನು ತಲೆಗೆ ಹಾಕಿಕೊಂಡು ವಿಶ್ರಮಿಸಿದೆ. ಆ ರಾತ್ರಿ ಕಳೆದ ಮೇಲೆ ನನಗೊಂದು ಖಾತ್ರಿಯಾಯಿತು. ಇಷ್ಟು ಭೀಕರ ಜ್ವರವೂ ನನ್ನ ಪ್ರಾಣಕ್ಕೆ ಹಾನಿ ಮಾಡದ ಮೇಲೆ ಬದುಕುಳಿಯುತ್ತೇನೆ ಎನಿಸಿತು’ ಎಂದು ಪಾರುಲ್​ ಹೇಳಿದ್ದರು.

ಇದನ್ನೂ ಓದಿ:

ಕೊವಿಡ್​ನಿಂದ ಭಯಭೀತರಾದ ರೋಗಿಗಳಿಗೆ ಉತ್ಸಾಹ ತುಂಬಲು ವೈದ್ಯರಿಂದ ಮನೋರಂಜನೆ​; ವಿಡಿಯೋ ವೈರಲ್​

ಫ್ರೆಂಡ್​ಶಿಪ್​ ಡೇ ಪ್ರಯುಕ್ತ RRR​ ಚಿತ್ರದ ‘ದೋಸ್ತಿ’ ಹಾಡು ರಿಲೀಸ್​; ಕನ್ನಡಿಗರಿಗೆ ಕಾಡಿದೆ ಒಂದು ಕೊರತೆ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ